‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

Date:

ಕ್ರೈಸ್ತರ ಪ್ರಮುಖ ಹಬ್ಬವಾದ ‘ಈಸ್ಟರ್ ಭಾನುವಾರ’ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ ಮಣಿಪುರ ಸರ್ಕಾರ ಘೋಷಿಸಿದೆ. ಅಂದು ಎಲ್ಲ ಸರ್ಕಾರಿ ಇಲಾಖೆಗಳಲ್ಲಿಯೂ ಸಿಬ್ಬಂದಿಗಳು ಕರ್ತರ್ವ ನಿರ್ವಹಿಸಬೇಕೆಂದು ಸೂಚಿಸಿದೆ. ಸರ್ಕಾರದ ಈ ನಿರ್ಧಾರ ವಿರುದ್ಧ ಕ್ರಿಶ್ಚಿಯನ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ಕಂಗೆಟ್ಟಿರುವ ಮಣಿಪುರದಲ್ಲಿ, ಅಲ್ಲಿನ ಬಿಜೆಪಿ ಸರ್ಕಾರ ಹೊಸ ವಿವಾದವನ್ನು ಹುಟ್ಟುಹಾಕಿದೆ. ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ‘ಈಸ್ಟರ್ ಸಂಡೇ’ ಕುರಿತು ಆದೇಶ ಹೊರಡಿಸಿದ್ದು, “ಶನಿವಾರ (ಮಾರ್ಚ್ 30) ಮತ್ತು ಭಾನುವಾರ (ಮಾರ್ಚ್ 31) ಎಲ್ಲ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು ಹಾರೂ ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳು ಕಾರ್ಯನಿರ್ವಹಿಸಬೇಕು. ಹಣಕಾಸು ವರ್ಷದ (2023-24) ಕೊನೆಯ ದಿನಗಳಲ್ಲಿ ಕಚೇರಿ ಕೆಲಸಗಳನ್ನು ಪೂರ್ಣಗೊಳಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

2011ರ ಜನಗಣತಿಯ ಪ್ರಕಾರ, ಮಣಿಪುರದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರು 40.1% (2.8 ಮಿಲಿಯನ್) ರಷ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಕುಕಿ, ಝೋ ಮತ್ತು ನಾಗಾ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಈ ಆದೇಶವು ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಬುಡಕಟ್ಟು ಸಮುದಾಯಗಳ ಒಕ್ಕೂಟ ಸಂಸ್ಥೆ – ಇಂಡಿಜಿನಸ್ ಟ್ರೈಬಲ್ ಲೀಡರ್ಸ್ ಫೋರಂ (ಐಟಿಎಲ್‌ಎಫ್) ಹೇಳಿದೆ. “ಮಣಿಪುರದಲ್ಲಿ ಅನೇಕ ಕ್ರೈಸ್ತರಿದ್ದಾರೆ. ಭಾನುವಾರವು ರಜೆಯ ದಿನವಾಗಿದೆ. ಅಲ್ಲದೆ, ‘ಈಸ್ಟರ್’ ದಿನವೂ ಆಗಿದೆ” ಎಂದು ಐಟಿಎಲ್‌ಎಫ್‌ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ನಾಗಾ ಸಮುದಾಯದ ವಿದ್ಯಾರ್ಥಿ ಸಂಘಟನೆ ‘ಪೌಮೈ ನಾಗಾ ತ್ಸೈಡೌಮೈ ಮಿ’ ಕೂಡ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಆದೇಶವು ಹಿಂದೂ-ಬಹುಸಂಖ್ಯಾತ ಮೈಥೇಯಿ ಮತ್ತು ಕ್ರೈಸ್ತ ಬಹುಸಂಖ್ಯಾತ ಕುಕಿ-ನಾಗಾ ಸಮುದಾಯಗಳ ನಡುವಿನ ಹಳೆಯ ಹಿಂಸಾಚಾರಕ್ಕೆ ಮತ್ತೆ ಪ್ರಚೋದನೆ ನೀಡುವಂತಿದೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೆ 200ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಕುಕಿ ಸಮುದಾಯದ ಮಹಿಲೆಯವರ ಮೇಲೆ ಅಮಾನವೀಯ ದೌರ್ಜನ್ಯ, ಅತ್ಯಾಚಾರಗಳು ನಡೆದಿವೆ. ಹಿಂಸಾಚಾರದ ಕಾರಣದಿಂದಾಗಿ 50,000ಕ್ಕೂ ಹೆಚ್ಚು ಜನರನ್ನು ತಮ್ಮೂರುಗಳನ್ನು ತೊರೆದು, ವಲಸೆ ಹೋಗಿದ್ದಾರೆ ಮತ್ತು ಸ್ಥಳಾಂತರಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...