SIR ಎಂಬ ರೋಗ ದೇಶಾದ್ಯಂತ ಹರಡುವುದನ್ನು ಸಹಿಸಲಾಗದು: ನಟ ಕಮಲ್ ಹಾಸನ್

Date:

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಪ್ರಸಿದ್ಧ ನಟ, ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ ಅಧ್ಯಕ್ಷ, ಸಂಸದ ಕಮಲ್ ಹಾಸನ್ ಕಳವಳ ವ್ಯಕ್ತಪಡಿಸಿದ್ದಾರೆ. “ಈ ಪ್ರಕ್ರಿಯೆಯ ಮೂಲಕ ಚುನಾವಣಾ ಆಯೋಗವು ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸುತ್ತಿದೆ. ಈ ರೋಗ ದೇಶಾದ್ಯಂತ ಹರಡುವುದನ್ನು ಸಹಿಸಲಾಗದು” ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದ ಕಮಲ್ ಹಾಸನ್, “ಆಯೋಗವು ಚುನಾವಣಾ ಪ್ರಕ್ರಿಯೆಯಲ್ಲಿ ಜನರು ಸಕ್ರಿಯವಾಗಿ ಭಾಗಿಯಾಗುವಂತೆ ನೋಡಿಕೊಳ್ಳುವುದರ ಬದಲಾಗಿ ಜನರ ಮತದಾನದ ಹಕ್ಕನ್ನು ಮಾತ್ರ ಪರಿಶೀಲಿಸುತ್ತಿದೆ. ನಾನು ಇದನ್ನು ‘ಜೀವಂತವಾಗಿದ್ದೂ ಸತ್ತವರ ಬಗ್ಗೆ ಪರಿಶೀಲನೆ ನಡೆಸುವ ಕಥೆ’ ಎಂದು ಕರೆಯುತ್ತೇನೆ. ಚುನಾವಣಾ ಆಯೋಗ ನಮ್ಮ ಹಕ್ಕನ್ನು ಪರಿಶೀಲಿಸುವ ಬದಲು ಕಾಗುಣಿತ, ವಿಳಾಸವನ್ನು ಪರಿಶೀಲಿಸುತ್ತಿದೆ. ಅದು ಕೂಡಾ ತಪ್ಪಾಗಿ ಪರಿಶೀಲನೆ ನಡೆಸುತ್ತಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯ ನನ್ನ ಕಾಳಜಿ ಇರುವುದು ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಯ ಬಗ್ಗೆ. ಕಾಗುಣಿತ ತಪ್ಪುಗಳು ಭಾಷೆಯ ಆಯಾಮದಲ್ಲಿ ಮಾತ್ರ ಕೆಟ್ಟದು. ಆಧುನಿಕ ಸಾಹಿತ್ಯವು ಈ ತಪ್ಪನ್ನು ಕ್ಷಮಿಸುತ್ತದೆ. ಇಂಟರ್ನೆಟ್ ಕೂಡ ಹಾಗೆ ಮಾಡುತ್ತದೆ. ಆದರೆ ಚುನಾವಣಾ ಆಯೋಗ ಮಾತ್ರ ಈ ಕಾಗುಣಿತ ತಪ್ಪನ್ನು ಕ್ಷಮಿಸುವುದಿಲ್ಲ” ಎಂದು ಟೀಕಿಸಿದ್ದಾರೆ.

“ಚುನಾವಣಾ ಆಯೋಗ ಎಂದರೆ ಇಂಗ್ಲಿಷ್ ತರಬೇತುದಾರರು ಎಂಬ ಅರ್ಥವಲ್ಲ. ಬಿಹಾರ ಇದೀಗ ಜೀವಂತವಾಗಿದ್ದರೂ ಸತ್ತವರ ನೆಲವಾಗಿದೆ. ಈ ರೋಗವು ದೇಶಾದ್ಯಂತ ಹರಡುವುದನ್ನು ಸಹಿಸಲಾಗದು. ಇಸಿಐ ಖಂಡಿತವಾಗಿಯೂ ಈ ರೋಗ ಹರಡಲು ಸಹಾಯ ಮಾಡುತ್ತಿದೆ” ಎಂದೂ ಆರೋಪಿಸಿದರು.

ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಐಆರ್ ವಿರುದ್ಧ ಅರ್ಜಿ ಸಲ್ಲಿಸಿ, ತಮ್ಮ ಪರವಾಗಿ ತಾವೇ ವಾದಕ್ಕಿಳಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಿದ ಕಮಲ್ ಹಾಸನ್, “ಪಶ್ಚಿಮ ಬಂಗಾಳದ ನನ್ನ ದೀದಿ ಕೂಡ ಇಸಿಐ ಕಚೇರಿಯಲ್ಲಿ ಇದೇ ರೀತಿ ವಿಷಾದಿಸಿದರು. ಅವರು ಈಗಾಗಲೇ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...