ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

Date:

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ಅನ್ನು ಪರಿಶೀಲಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್‌ 21ರಂದು ಬಂಧಿಸಿದೆ. ಅವರನ್ನು ಏಪ್ರಿಲ್ 1ರವರೆಗೆ ಕಸ್ಟಡಿಗೆ ತೆಗೆದುಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅತಿಶಿ, “ಕೇಜ್ರಿವಾಲ್ ಅವರ ಮೊಬೈಲ್‌ಅನ್ನು ಪರಿಶೀಲಿಸಲು ಇಡಿ ಒತ್ತಾಯಿಸುತ್ತಿದೆ. ಆ ಮೊಬೈಲ್ ಕೆಲವು ತಿಂಗಳ ಹಿಂದೆಯಷ್ಟೇ ಖರೀಸಲಾಗಿದೆ. ಅಬಕಾರಿ ನೀತಿ ರೂಪಿಸಿದಾಗ ಈ ಮೊಬೈಲ್ ಇರಲಿಲ್ಲ. ಆದರೂ, ಅದನ್ನು ಪರಿಶೀಲಿಸಲು ಇಡಿ ಯತ್ನಿಸುತ್ತಿದೆ. ಇದು ಈ ಸಂಸ್ಥೆಯು ಬಿಜೆಪಿಯ ‘ರಾಜಕೀಯ ಅಸ್ತ್ರ’ವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತು ಮಾಡುತ್ತದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಸ್ತವವಾಗಿ, ಕೇಜ್ರಿವಾಲ್ ಅವರ ಮೊಬೈಲ್‌ನಲ್ಲಿ ಏನಿದೆ ಎಂಬುದನ್ನು ತಿಳಿಯಲು ಇಡಿ ಬಯಸುತ್ತಿಲ್ಲ. ಬದಲಾಗಿ, ಬಿಜೆಪಿ ಬಯಸುತ್ತಿದೆ. ಅಬಕಾರಿ ನೀತಿಯನ್ನು 2021-22ರಲ್ಲಿ ಜಾರಿಗೆ ತರಲಾಗಿತ್ತು. ಕೇಜ್ರಿವಾಲ್ ಅವರ ಬಳಿ ಈಗಿರುವ ಫೋನ್ ಕೆಲವೇ ತಿಂಗಳ ಹಿಂದೆಯಷ್ಟೇ ಖರೀದಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ಕೇಜ್ರಿವಾಲ್ ಅವರ ಹೊಸ ಫೋನ್‌ನ ಪಾಸ್‌ವರ್ಡ್‌ಅನ್ನು ಇಡಿ ಕೇಳುತ್ತಿದೆ. ಯಾರೆಂದರೆ, ಅದರಲ್ಲಿ ಲೋಕಸಭಾ ಚುನಾವಣೆಗೆ ಎಎಪಿ ಕಾರ್ಯತಂತ್ರ, ಪ್ರಚಾರ ಯೋಜನೆಗಳು, ‘ಇಂಡಿಯಾ’ ಮೈತ್ರಿಕೂಟದ ನಾಯಕರ ಜೊತೆಗಿನ ಮಾತುಕತೆಗಳು ಹಾಗೂ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಹುಡುಕಲು ಬಯಸಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...