ಚಾರಣಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಪ್ರಯತ್ನ: ಸಿದ್ದರಾಮಯ್ಯ

Date:

ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

“ಸಚಿವರಾದ ಕೃಷ್ಣ ಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...