ಎನ್‌ಇಪಿಗಿಂತ ಗುಣಾತ್ಮಕ ಶಿಕ್ಷಣ ಜಾರಿ ತರುವ ಪ್ರಯತ್ನ: ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

Date:

ರಾಷ್ಟ್ರೀಯ ಶಿಕ್ಷಣ ನೀತಿಯು ಸಾಧಿಸಬಹುದಾಗಿರುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಗುಣಾತ್ಮಕ ಶಿಕ್ಷಣ ಜಾರಿ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ.

ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ವಲ್ಲೇಪುರ್, ಎನ್ ರವಿಕುಮಾರ, ಡಾ.ವೈ.ಎ.ನಾರಾಯಣಸ್ವಾಮಿ, ಡಿ.ಎಸ್.ಅರುಣ್ ಹಾಗೂ ಇತರರು ನಿಯಮ 330 ರಡಿ ಸೂಚನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

“ಕೇಂದ್ರ ಸರ್ಕಾರವು ಜಾರಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ರಾಜ್ಯ ಸರ್ಕಾರವು ರದ್ದುಗೊಳಿಸಿರುವುದಿಲ್ಲ. ಹಾಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕಳೆದ ಎರಡು ಶೈಕ್ಷಣಿಕ ವರ್ಷಗಳಿಂದ ಈಗಾಗಲೇ ಅಳವಡಿಸಿಕೊಂಡಿದ್ದ ಪಠ್ಯಕ್ರಮಗಳನ್ನು ಮುಂದುವರೆಸಿದ್ದು, ಪ್ರಸ್ತುತ ವಿದ್ಯಾರ್ಥಿಗಳು ಈ ಪಠ್ಯಕ್ರಮಗಳನ್ನೇ ಅಭ್ಯಾಸ ಮಾಡುತ್ತಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಹಾಗೂ ಮುಂದಿನ ವ್ಯಾಸಂಗಕ್ಕೆ ಯಾವುದೇ ಅಡಚಣೆ ಆಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ದೇಶವು ಬಹು ಸಂಸ್ಕೃತಿ, ಬಹು ಭಾಷೆ ಹಾಗೂ ಬಹು ಆರ್ಥಿಕ-ಸಾಮಾಜಿಕ ಪರಿಸ್ಥಿತಿಯನ್ನು ಹೊಂದಿರುವ ದೇಶವಾಗಿದೆ. ಇತರ ರಾಜ್ಯಗಳಂತೆ ಕರ್ನಾಟಕ ರಾಜ್ಯವು ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ವಿಶೇಷವಾಗಿ, ಶೈಕ್ಷಣಿಕ ರಂಗದಲ್ಲಿ ಕರ್ನಾಟಕ ರಾಜ್ಯವು ದೇಶದ ಇತರೆ ಭಾಗಗಳಿಗೆ ಹೋಲಿಸಿದಲ್ಲಿ ತನ್ನದೇ ಗುಣಮಟ್ಟ ಮತ್ತು ಛಾಪನ್ನು ಹೊಂದಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವು ಗುಣಾತ್ಮಕ ಶಿಕ್ಷಣಕ್ಕೆ ಸಾರ್ವತ್ರಿಕ ನೆಲೆಗಟ್ಟಿನಲ್ಲಿ ಅವಕಾಶಗಳನ್ನು ನೀಡಲು ಹಾಗೂ ಆರ್ಥಿಕ ಪ್ರಗತಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆ, ವೈಜ್ಞಾನಿಕ ಮುನ್ನಡೆ, ರಾಜ್ಯ ಏಕತೆ ಹಾಗೂ ಸಾಂಸ್ಕೃತಿಕ ಸಂರಕ್ಷಣೆ, ಜಾಗತಿಕ ಮುಂದಾಳತ್ಯ ಈ ಗುರಿಗಳನ್ನು ಸಾಧಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಗುಣಾತ್ಮಕ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ” ಎಂದರು.

“ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳಿಗೆ ವಿರೋಧ ಇಲ್ಲದಂತೆ ರಾಜ್ಯದಲ್ಲಿ ಪ್ರಾದೇಶಿಕ ಸಮತೋಲನ ಕಾಪಾಡುವ ದೃಷ್ಟಿಯಿಂದ ರಾಜ್ಯ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ರಾಜ್ಯದಲ್ಲಿ ಶಿಕ್ಷಣ ನೀತಿಯನ್ನು ರೂಪಿಸಬೇಕಾಗುತ್ತದೆ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಶಾಲಾ ಮತ್ತು ಉನ್ನತ ಶಿಕ್ಷಣದಲ್ಲಿ ಪ್ರವೇಶಾತಿಯನ್ನು ಹೆಚ್ಚಿಸಲು ಗುಣಮಟ್ಟವನ್ನು ಉತ್ತಮಪಡಿಸಿ, ಸುಧಾರಿತ ಗುಣಮಟ್ಟದ ಶಿಕ್ಷಣದ ಲಭ್ಯತೆಯನ್ನು ಎಲ್ಲರಿಗೂ ನೀಡುವ ಮೂಲಕ ಶಿಕ್ಷಣವನ್ನು ವಿಸ್ತರಿಸಲು, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಅರಿವನ್ನು ಮೂಡಿಸಲು, ಕೌಶಲ್ಯಾಧಾರಿತ ಹಾಗೂ ವೃತ್ತಿ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಉದೋಗ್ಯಾರ್ಹತೆಯನ್ನು ಹೆಚ್ಚಿಸಲು ಮತ್ತು ನೈತಿಕ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ನಾಗರೀಕರನ್ನು ನಿರ್ಮಾಣ ಮಾಡಲು ಅನುವಾಗುವಂತೆ ಶಿಕ್ಷಣದ ಪ್ರಮುಖ ಗುರಿಗಳನ್ನು ಸಾಧಿಸಲು ಶಾಲಾ ಮತ್ತು ಉನ್ನತ ಶಿಕ್ಷಣವನ್ನು ಜಾಗರೂಕತೆಯಿಂದ ಪರಿಶೀಲಿಸಿ ಸೂಕ್ತ ನೀತಿಗಳನ್ನು ಶಿಫಾರಸ್ಸು ಮಾಡಲು ಶ್ರೇಷ್ಠ ಶಿಕ್ಷಣ ತಜ್ಞರ ಅಧ್ಯಕ್ಷತೆಯಲ್ಲಿ 15 ಸದಸ್ಯರ ಹಾಗೂ 8 ಸಲಹೆಗಾರರನ್ನೊಳಗೊಂಡ ಶಿಕ್ಷಣ ತಜ್ಞರ ರಾಜ್ಯ ಶಿಕ್ಷಣ ಆಯೋಗವನ್ನು 2023ರ ಅಕ್ಟೋಬರ್ 11ರಂದು ರಚಿಸಿ ಸರ್ಕಾರವು ಆದೇಶಿಸಿದೆ” ಎಂದು ಮಾಹಿತಿ ನೀಡಿದರು.

“ರಾಷ್ಟ್ರೀಯ ಶಿಕ್ಷಣ ನೀತಿಯು ಸಾಧಿಸಬಹುದಾಗಿರುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಗುಣಾತ್ಮಕ ಶಿಕ್ಷಣ ಜಾರಿ ತರಲು ರಾಜ್ಯ ಸರ್ಕಾರವು ಮುಂದಾಗಿದೆ. ಈ ಆಯೋಗವು ರಾಜ್ಯಕ್ಕೆ ಅವಶ್ಯಕವಿರುವ ಶಿಕ್ಷಣ ನೀತಿಯನ್ನು ರೂಪಿಸಲು ಸೂಕ್ತ ಶಿಫಾರಸ್ಸುಗಳನ್ನು ನೀಡುತ್ತದೆ. ಅವಶ್ಯವಿರುವ ಪಠ್ಯಕ್ರಮಗಳ ರೂಪುರೇಷೆಗಳನ್ನು ಸಲಹಾತ್ಮಕವಾಗಿ ನೀಡುವುದೇ ಹೊರತು ಪಠ್ಯ ಕ್ರಮಗಳನ್ನು ಸಿದ್ಧಪಡಿಸುವ ಸಮಿತಿಯಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದೇಶದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ -2020 ಸೇರಿದಂತೆ ಇಲ್ಲಿಯವರೆಗೂ ರಚನೆಗೊಂಡು ಅನುಷ್ಠಾನಗೊಂಡಿರುವ ಎಲ್ಲ ಶಿಕ್ಷಣ ನೀತಿ ಆಯೋಗಗಳ ವರದಿಗಳನ್ನು ಪರಿಗಣಿಸಿ ರಾಜ್ಯದ ಸ್ಥಳೀಯ, ಭೌಗೋಳಿಕ, ಅಂತರಾಷ್ಟ್ರೀಯ, ಸಾಮಾಜಿಕ, ಆರ್ಥಿಕ, ಗ್ರಾಮೀಣ ಅವಶ್ಯಕತೆಗಳು ಅಂಶಗಳನ್ನು ಪರಿಗಣಿಸಿ ರಾಜ್ಯಕ್ಕೆ ಅವಶ್ಯಕವಿರುವ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ಆಯೋಗವು ಶಿಫಾರಸ್ಸು ಮಾಡಲು ಕೋರಿದೆ” ಎಂದು ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

“ವರದಿಯನ್ನು ಸಿದ್ಧಪಡಿಸುವ ಮುಂಚಿತವಾಗಿ ಶಿಕ್ಷಣ ರಂಗದ ಎಲ್ಲಾ ಹಿತಾಸಕ್ತಿದಾರರೊಂದಿಗೆ ವ್ಯಾಪಕವಾಗಿ ಚರ್ಚಿಸಿ ರಾಜ್ಯದ ಎಲ್ಲ ವಿಭಾಗಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಶಿಕ್ಷಣ ನೀತಿಗಳನ್ನೂ ಸಹ ಅಧ್ಯಯನ ಮಾಡಲು ಉದ್ದೇಶಿಸಿದೆ. ಆನಂತರವಷ್ಟೆ ರಾಜ್ಯಕ್ಕೆ ಅಗತ್ಯವಾದ ಶಿಕ್ಷಣ ನೀತಿ ರೂಪುಗೊಳ್ಳಲಿದೆ” ಎಂದು ಸಚಿವರು ತಮ್ಮ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...