ಚುನಾವಣೆ 2023 | 10 ದಿನಗಳಲ್ಲಿ 38 ಕೋಟಿ ದಾಖಲೆ ಮುದ್ರಣಕ್ಕೆ ಮುಂದಾದ ಆಯೋಗ

Date:

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಮತದಾರರು ಮತ್ತು ಚುನಾವಣಾ ಅಧಿಕಾರಿಗಳಿಗೆ ವಿತರಿಸುವುದಕ್ಕಾಗಿ ಮತದಾರ ಚೀಟಿ ಮತ್ತು ಅಗತ್ಯ ದಾಖಲೆಗಳನ್ನು ಮುದ್ರಿಸಲು ಚುನಾವಣಾ ಅಯೋಗ ಮುಂದಾಗಿದೆ. ಮುಂದಿನ 10 ದಿನಗಳಲ್ಲಿ 38 ಕೋಟಿ ದಾಖಲೆಗಳನ್ನು ಮುದ್ರಿಸಲಾಗುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಫೋಟೋಗಳುಳ್ಳ ಮತದಾರ ಗುರುತಿನ ಚೀಟಿ (ಇಪಿಐಸಿ), ಮತದಾರರ ಪಟ್ಟಿಗಳು, ಪೂರಕ ಪಟ್ಟಿಗಳು ಮತ್ತು ವೋಟರ್ ಸ್ಲಿಪ್‌ಗಳನ್ನು 10 ದಿಗನಳಲ್ಲಿ ಮುದ್ರಿಸುವ ಕಠಿಣ ಕೆಲಸವನ್ನು ಆಯೋಗ ಮುಂದಿಟ್ಟುಕೊಂಡಿದೆ. ಜೊತೆಗೆ, ಅವುಗಳನ್ನು ಅಂತಿಮ ಬಳಕೆದಾರರಿಗೆ ಸಮಯಕ್ಕೆ ಸರಿಯಾಗಿ ತಲುಪಿಸಲಾಗುತ್ತದೆ ಎಂದೂ ಆಯೋಗ ಹೇಳಿದೆ.

“ಹೊಸ ಮತದಾರರಿಗೆ ವಿತರಿಸಲು 18 ಲಕ್ಷ ಮತದಾರ ಗುರುತಿನ ಚೀಟಿಗಳನ್ನು ಮುದ್ರಿಸಬೇಕು. 8 ಕೋಟಿ ಪುಟಗಳ ಮತದಾರರ ಪಟ್ಟಿಗಳನ್ನು ಮತಗಟ್ಟೆಗಳಿಗೆ ಕಳುಹಿಸಬೇಕು ಮತ್ತು 30 ಕೋಟಿಗೂ ಹೆಚ್ಚು ಮತದಾರರ ಪಟ್ಟಿಗಳನ್ನು ಮುದ್ರಿಸಬೇಕು” ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾರರು ಮತ ಚಲಾಯಿಸಲು ತೆರಳುವಾಗ ನೀಡಲಾಗುವ ಮತದಾರ ಗುರುತಿನ ಚೀಟಿಯ ನಕಲನ್ನು A4 ಗಾತ್ರದ ಸುಮಾರು 20,000 ಪುಟಗಳಲ್ಲಿ ಮುದ್ರಿಸಬೇಕು. 18 ಲಕ್ಷ ಹೊಸ ಮತದಾರರ ಗುರುತಿನ ಚೀಟಿಗಳ ಪೈಕಿ, ಈಗಾಗಲೇ 13 ಲಕ್ಷ ಕಾರ್ಡ್‌ಗಳನ್ನು ಮುದ್ರಿಸಿದ್ದೇವೆ. ಇವುಗಳಲ್ಲಿ 4.4 ಲಕ್ಷ ಕಾರ್ಡ್‌ಗಳು ರವಾನೆಗೆ ಸಿದ್ಧವಾಗಿವೆ. ಇನ್ನೆರಡು ದಿನಗಳಲ್ಲಿ ಉಳಿದ 5 ಲಕ್ಷ ಕಾರ್ಡ್‌ಗಳನ್ನು ಶೀಘ್ರದಲ್ಲೇ ಮುದ್ರಿಸಲಾಗುವುದು. ಪ್ರತಿದಿನ ಸುಮಾರು 3 ರಿಂದ 3.5 ಲಕ್ಷ ಕಾರ್ಡ್‌ಗಳನ್ನು ಮುದ್ರಿಸುತ್ತಿದ್ದೇವೆ,” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

“ಬೆಂಗಳೂರಿನ ವ್ಯಾಪ್ತಿಯಲ್ಲಿ ಗುರುತಿನ ಚೀಟಿ ಮತ್ತು ಪಟ್ಟಿಗಳನ್ನು 24 ಗಂಟೆಗಳ ಒಳಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇತರ ನಗರ ಕೇಂದ್ರಗಳಿಗೆ ಎರಡು ದಿನಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಮೂರು ದಿನಗಳಲ್ಲಿ ತಲುಪಿಸಲಾಗುತ್ತದೆ,” ಎಂದಿದ್ದಾರೆ.

ಬೆಂಗಳೂರಿನಲ್ಲಿ, ಈಗಾಗಲೇ ಮಲ್ಲೇಶ್ವರಂ, ಬಸವನಗುಡಿ, ರಾಜಾಜಿನಗರ ಮತ್ತು ಗಾಂಧಿನಗರದಲ್ಲಿ ಮತದಾರ ಗುರುತಿನ ಚೀಟಿಗಳನ್ನು ರವಾನಿಸಿದೆ. ಚಾಮರಾಜಪೇಟೆ, ಚಿಕ್ಕಪೇಟೆ, ಗೋವಿಂದರಾಜನಗರ, ಸಿವಿ ರಾಮನ್ ನಗರ ಮತ್ತು ಮಹದೇವಪುರ ಕ್ಷೇತ್ರಗಳ ಮತದಾರರಿಗೆ ಗುರುತಿನ ಚೀಟಿಗಳನ್ನು ಪೋಸ್ಟ್‌ ಮಾಡುವ ಕೆಲಸ ಆರಂಭವಾಗಿದೆ. ಏಪ್ರಿಲ್ 10ರೊಳಗೆ ಮುದ್ರಣ ಮತ್ತು ರವಾನೆ ಕೆಲಸವನ್ನು ಪೂರ್ಣಗೊಳಿಸುವ ಗುರಿ ಇದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...