ಚುನಾವಣಾ ಬಾಂಡ್ | ಬಾಂಡ್‌ಗಳ ಖರೀದಿ ಮೊತ್ತಕ್ಕಿಂತ ನಗದೀಕರಿಸಿದ ಹಣದ ಮೊತ್ತವೇ ಹೆಚ್ಚು; ಯಾಕೆ ಈ ವ್ಯತ್ಯಾಸ?

Date:

ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರ ಪ್ರಕಾರ, ಕಂಪನಿಗಳು ಖರೀದಿಸಿ ಚುನಾವಣಾ ಬಾಂಡ್‌ಗಳ ಮೊತ್ತಕ್ಕಿಂತ ರಾಜಕೀಯ ಪಕ್ಷಗಳು ನಗದೀಕರಿಸಿದ ಹಣದ ಮೊತ್ತವೇ ಹೆಚ್ಚಾಗಿದೆ. ಎಲ್ಲ ಕಂಪನಿಗಳು ಮತ್ತು ವ್ಯಕ್ತಿಗಳು ಖರೀದಿಸಿದ ಚುನಾವಣಾ ಬಾಂಡ್‌ಗಳ ಮೊತ್ತ 12,155,51,32,000 ರೂ. (12,155 ಕೋಟಿ ರೂ.) ಆಗಿದೆ. ರಾಜಕೀಯ ಪಕ್ಷಗಳು ನಗದೀಕರಿಸಿದ ಒಟ್ಟು ಮೊತ್ತ 12,769,08,93,000 ರೂ. (12,769 ಕೋಟಿ ರೂ.ಗಿಂತ ಹೆಚ್ಚು). ಅಂದರೆ, ಎಲ್ಲ ಕಂಪನಿಗಳು ಖರೀದಿಸಿದ ಚುನಾವಣಾ ಬಾಂಡ್‌ಗಳ ಒಟ್ಟು ಮೊತ್ತಕ್ಕಿಂತ ಪಕ್ಷಗಳು ನಗದೀಕರಿಸಿದ ಮೊತ್ತವು ಸುಮಾರು 600 ಕೋಟಿ ರೂ. ಹೆಚ್ಚಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019ರ ಏಪ್ರಿಲ್ 12ರಿಂದ ಪ್ರಾರಂಭವಾಗುವ ಡೇಟಾವನ್ನು ಮಾತ್ರ ಬಿಡುಗಡೆ ಮಾಡಿದೆ. ಹೀಗಾಗಿಯೇ ಈ ವ್ಯತ್ಯಾಸವಾಗಿರಬಹುದು ಎಂದು ‘ಟ್ರಾನ್ಸ್‌ಪೆರೆನ್ಸಿ ರೈಟ್ಸ್‌’ (ಪಾರದರ್ಶಕತೆ ಹಕ್ಕುಗಳ) ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಹೇಳಿದ್ದಾರೆ.

”ಚುನಾವಣಾ ಬಾಂಡ್‌ಗಳು ಖರೀದಿಸಿದ ದಿನಾಂಕದಿಂದ ಕೇವಲ 15 ದಿನಗಳವರೆಗೆ ಮಾತ್ರ ಮಾನ್ಯವಾಗಿರುತ್ತವೆ. ಆದ್ದರಿಂದ, ಏಪ್ರಿಲ್ ಆರಂಭದಲ್ಲಿ ಖರೀದಿಸಿದ ಬಾಂಡ್‌ಗಳಲ್ಲಿ ಕೆಲವನ್ನು ಏಪ್ರಿಲ್ 12ರ ನಂತರ ಪಕ್ಷಗಳು ನಗದೀಕರಿಸಿರಬಹುದು. ಹೀಗಾಗಿ, ನಗದೀಕರಿಸಿದ ಡೇಟಾ ಲಭ್ಯವಾಗಿದೆ. ಆದರೆ, ಕೆಲವು ಏಪ್ರಿಲ್ 12ಕ್ಕಿಂತ ಮುಂಚೆ ಮಾರಾಟವಾದ ಡೇಟಾವನ್ನು ಎಸ್‌ಬಿಐ ಬಿಡುಗಡೆ ಮಾಡಿಲ್ಲ” ಎಂದು ಅವರು ಊಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಈ ವ್ಯತ್ಯಾಸವನ್ನು ಅಂಜಲಿ ಅವರ ಊಹೆಯಂತೆ ವಿವರಿಸಬಹುದೇ ಎಂಬುದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾತ್ರ ಸ್ಪಷ್ಟಪಡಿಸಬೇಕಾಗುತ್ತದೆ. ಅದೂ, ಚುನಾವಣಾ ಬಾಂಡ್‌ಗಳ ಯೋಜನೆಯ ಮೊದಲ ವರ್ಷದಲ್ಲಿ ಮಾರಾಟ ಮಾಡಿ, ಮಾಹಿತಿಯಲ್ಲಿ ಸಿಗದೇ ಇರುವ ಡೇಟಾವನ್ನು ಎಸ್‌ಬಿಐ ಬಿಡುಗಡೆ ಮಾಡುವ ಮೂಲಕವೇ ಆ ಸ್ಪಷ್ಟತೆ ನೀಡಲು ಸಾಧ್ಯ.

ಆದಾಗ್ಯೂ, ಎಸ್‌ಬಿಐ ಎರಡು ಪ್ರತ್ಯೇಕ ಪಟ್ಟಿಗಳನ್ನು ಒದಗಿಸಿರುವುದರಿಂದ – ಬಾಂಡ್‌ಗಳನ್ನು ಖರೀದಿಸಿದವರಲ್ಲಿ ಯಾರು ಯಾವ ಪಕ್ಷಕ್ಕೆ ಬಾಂಡ್‌ಗಳನ್ನು ನೀಡಿದ್ದಾರೆ. ಯಾವ ಪಕ್ಷ ಯಾವ ಕಂಪನಿಯಿಂದ ಪಡೆದ ಚುನಾವಣಾ ಬಾಂಡ್‌ಅನ್ನು ನಗದೀಕರಿಸಿದೆ ಎಂಬುದನ್ನು ತಿಳಿಯಲು ಸಾಧ್ಯವಾಗಿಲ್ಲ. ಆದರೆ, ಅತೀ ಹೆಚ್ಚು ಚುನಾವಣಾ ಬಾಂಡ್‌ಗಳನ್ನು ಪಡೆದು, ಹೆಚ್ಚು ಹಣವನ್ನು ನಗದೀಕರಿಸಿರುವ ಪಕ್ಷ ಆಡಳಿತಾರೂಢ ಬಿಜೆಪಿಯಾಗಿದೆ. ಬಿಜೆಪಿಯು ಬಯೋಬ್ಬರಿ 6,060.50 ಕೋಟಿ ರೂ. ಅಂದರೆ, ಚುನಾವನಾ ಬಾಂಡ್‌ಗಳ ಒಟ್ಟು ಮೊತ್ತದಲ್ಲಿ ಶೇ. 47.46ರಷ್ಟು ಹಣವನ್ನು ಪಡೆದಿದೆ.

ಹೀಗಾಗಿಯೇ, ಬಿಜೆಪಿಗೆ ಯಾವ ಕಂಪನಿ ಎಷ್ಟು ಹಣವನ್ನು ನೀಡಿದೆ ಎಂಬುದು ಸ್ಪಷ್ಟವಾಗಿ ತಿಳಿಯಬಾರದು ಎಂಬ ಕಾರಣಕ್ಕಾಗಿಯೇ, ಈ ರೀತಿ ಎರಡು ಪ್ರತ್ಯೇಕ ಪಟ್ಟಿಗಳನ್ನು ಬಿಡುಗಡೆ ಮಾಡಿ, ಮತದಾರರನ್ನು ದಾರಿ ತಪ್ಪಿಸಿರುವ ಸಾಧ್ಯತೆಗಳೂ ಇವೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು 6,060 ಕೋಟಿ ದೇಣಿಗೆ, ಜೆಡಿಎಸ್‌ಗೂ ಪಾಲು

ಸರ್ಕಾರ ಅಥವಾ ಪಕ್ಷಗಳು ಮತ್ತು ವ್ಯಾಪಾರ ಸಂಸ್ಥೆಗಳು ಅಥವಾ ಕಾರ್ಪೊರೇಟ್ ಕಂಪನಿಗಳ ನಡುವೆ ಯಾವುದೇ ಕೊಡು-ಪಡೆದುಕೊ (ಕ್ವಿಡ್ ಪ್ರೊ ಕೋಆಪರೇಷನ್‌) ಸಂಬಂಧಗಳಿವೆಯೇ ಎಂಬುದು ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇದೆ ಎಂದು ಹೇಳಿದ್ದ ಸುಪ್ರೀಂ ಕೋರ್ಟ್‌, ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...