ಚುನಾವಣಾ ಬಾಂಡ್ | ಬ್ಯಾಂಕ್‌ ಮೂಲಕ ಲಂಚ ನೀಡಬಹುದೆಂದು ಖಚಿತಪಡಿಸಿದೆ: ಕಾಂಗ್ರೆಸ್‌

Date:

‘ಅಪಾರದರ್ಶಕ’ ಚುನಾವಣಾ ಬಾಂಡ್‌ಗಳು ಲಂಚವನ್ನು ಬ್ಯಾಂಕ್‌ ಮೂಲಕ ನೀಡಬಹುದು ಎಂಬುದನ್ನು ಖಚಿತಪಡಿಸಿವೆ ಎಂದಿರುವ ಕಾಂಗ್ರೆಸ್‌, ಚುನಾವಣಾ ಬಾಂಡ್‌ಗಳ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದೆ.

ಪ್ರೀಪೇಯ್ಡ್‌, ಪೋಸ್ಟ್‌ಪೇಯ್ಡ್‌ ರೀತಿಯಲ್ಲಿ ಮಾತ್ರವಲ್ಲದೆ, ದಾಳಿಗಳ ನಡೆದಾಗಲೂ ಚುನಾವಣಾ ಬಾಂಡ್‌ಗಳನ್ನು ಬಳಸಿ ಬ್ಯಾಂಕ್‌ ಮೂಲಕವೇ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಹಗರಣವನ್ನು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಕಪ್ಪುಹಣವನ್ನು ಮರಳಿ ತರುತ್ತೇವೆಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ, ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿದ್ದರು. ಈಗ ಅದನ್ನು ಮರೆಮಾಚಲು ಭಾರೀ ಪ್ರಯತ್ನಿಸುತ್ತಿದ್ದಾರೆ ಮತ್ತು ಹತಾಶರಾಗಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಬಾಂಡ್‌ಗಳ ಕೋಡ್‌ಗಳ ಮೂಲಕ ಯಾವ ಪಕ್ಷಕ್ಕೆ ಯಾರು ದೇಣಿಗೆ ನೀಡಿದ್ದಾರೆ ಎಂಬುದನ್ನು ಕಂಡುಹಿಡಿಯಲು 15 ಸೆಂಕೆಡ್‌ಗಳು ಸಾಕು. ಆದರೆ, ಸುಪ್ರೀಂ ಕೋರ್ಟ್‌ ಮಾಹಿತಿ ಕೇಳಿದಾಗ, ನಾಲ್ಕು ತಿಂಗಳು ಸಮಯಬೇಕೆಂದು ಎಸ್‌ಬಿಐ ಹೇಳಿತ್ತು. ಈ ಕೋಡ್‌ಗಳು ಎಸ್‌ಬಿಐನ ಲಜ್ಜೆಗೆಟ್ಟ ಮತ್ತು ಹಾಸ್ಯಾಸ್ಪದ ಹೇಳಿಕೆಯನ್ನು ಬಹಿರಂಗಪಡಿಸಿವೆ” ಎಂದು ಕಿಡಿಕಾರಿದರು.

“ಚುನಾವಣಾ ಬಾಂಡ್‌ ಹಗರಣದಲ್ಲಿ ಕಾಂಗ್ರೆಸ್‌ ನಾಲ್ಕು ಮಾದರಿಯ ಭ್ರಷ್ಟಾಚಾರವನ್ನು ಗುರುತಿಸಿದೆ. “ಚಂದಾ ದೋ, ಧಂಡಾ ಲೋ (ದೇಣಿಗೆ ನೀಡಿ – ಗುತ್ತಿಗೆ ಪಡೆಯಿರಿ) – ಪ್ರಿಪೇಯ್ಡ್ ಲಂಚ; ತೇಕಾ ಲೋ, ರಿಶ್ವತ್ ದೋ (ಗುತ್ತಿಗೆ ಪಡೆಯಿರಿ – ಲಂಚ ಕೊಡಿ) – ಪೋಸ್ಟ್ ಪೇಯ್ಡ್ ಲಂಚ; ಹಫ್ತಾ ವಸೂಲಿ – ದಾಳಿಯ ನಂತರ ಸುಲಿಗೆ/ಲಂಚ; ಫಾರ್ಜಿ ಕಂಪನಿ – ಶೆಲ್ ಕಂಪನಿಗಳಿಂದ ಲಂಚ” ಎಂದು ಅವರು ವಿವರಿಸಿದರು.

“ಕೇಂದ್ರ ಅಥವಾ ಬಿಜೆಪಿ ಅಧಿಕಾರಿದಲ್ಲಿರುವ ರಾಜ್ಯ ಸರ್ಕಾರಗಳಿಂದ 179 ಪ್ರಮುಖ ಗುತ್ತಿಗೆಗಳು ಮತ್ತು ಯೋಜನೆಗಳ ಅನುಮೋದನೆಗಳನ್ನು 38 ಕಂಪನಿಗಳು ನಡೆದಿವೆ. ಆ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡಿರುವುದು ಕೋಡ್‌ಗಳ ವಿಶ್ಲೇಷಣೆಯಿಂದ ಬೆಳಕಿಗೆ ಬಂದಿದೆ. ಈ ಕಂಪನಿಗಳು ಒಟ್ಟು 3.8 ಲಕ್ಷ ಕೋಟಿ ಮೌಲ್ಯದ ಗುತ್ತಿಗೆ ಮತ್ತು ಒಪ್ಪಂದಗಳನ್ನು ಪಡೆದಿದ್ದು, ಬಿಜೆಪಿಗೆ 2,004 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ನೀಡಿವೆ” ಎಂದು ರಮೇಶ್ ಆರೋಪಿಸಿದ್ದಾರೆ.

ಈ ವರದಿ ಓದಿದ್ಧೀರಾ?: ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

“41 ಕಾರ್ಪೊರೇಟ್ ಕಂಪನಿಗಳು ಒಟ್ಟು 56 ಬಾರಿ ಇಡಿ/ಸಿಬಿಐ/ಐಟಿ ದಾಳಿಗಳನ್ನು ಎದುರಿಸಿವೆ. ಅಲ್ಲದೆ, ಆ ಕಂಪನಿಗಳು ಬಿಜೆಪಿಗೆ 2,592 ಕೋಟಿ ರೂ. ದೇಣಿಗೆ ನೀಡಿವೆ. ಅದರಲ್ಲಿ 1,853 ಕೋಟಿ ರೂ.ಗಳನ್ನು ದಾಳಿಯ ನಂತರ ನೀಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಬಾಂಡ್‌ ಹಗರಣವನ್ನು ಎಸ್‌ಐಟಿ ತನಿಖೆಗೆ ಒಳಪಡಿಸುತ್ತದೆ. ಅಲ್ಲದೆ, ಪಿಎಂ-ಕೇರ್ಸ್ ನಿಧಿಯ ಬಗ್ಗೆಯೂ ಎಸ್‌ಐಟಿ ಮೂಲಕ ತನಿಖೆ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...