ಸಿಎಂ ಬದಲಾವಣೆ ಸೂಚನೆ ಕೊಟ್ಟ ಉಗಾದಿ ಮಣ್ಣಿನ ಗೊಂಬೆ ಭವಿಷ್ಯ

Date:

  • ರಾಜ್ಯ ರಾಜಕಾರಣದಲ್ಲಿ ಗೊಂಬೆ ನುಡಿದ ಭವಿಷ್ಯ ನಿಜವಾಗುತ್ತಾ?
  • ಈ ಹಿಂದೆಯೂ ನುಡಿದಿದ್ದ ಗೊಂಬೆ ಭವಿಷ್ಯ ನಿಜವಾಗಿತ್ತು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭವಿಷ್ಯದ ಬಗೆಗಿನ ಚರ್ಚೆ ಆರಂಭವಾಗಿದೆ. ಮತದಾರದಿಂದ ಹಿಡಿದು ರಾಜಕಾರಣಿಗಳವರೆಗೂ ಮುಂದೇನು ಎನ್ನುವ ಕುತೂಹಲ ಕಾಡುತ್ತಿದೆ.

ಈ ನಡುವೆ ಧಾರವಾಡದ ಗ್ರಾಮವೊಂದರಲ್ಲಿ ನಡೆದ ಯುಗಾದಿ ಆಚರಣೆಯ ವಾಡಿಕೆಯೊಂದು ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಸುಳಿವು ನೀಡಿದ್ದು, ಹೊಸ ಮುಖ್ಯಮಂತ್ರಿಯ ಸಾಧ್ಯತೆಯನ್ನು ಸೂಚಿಸಿದೆ.

ಧಾರವಾಡದ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿ ವರ್ಷ ಯುಗಾದಿಯಂದು ಗೊಂಬೆ ಭವಿಷ್ಯವನ್ನು ಸಂಪ್ರದಾಯದಂತೆ ಆಚರಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತೆ ಯುಗಾದಿ ಅಮವಾಸ್ಯೆಯಂದು ತುಪ್ಪರಿ ಹಳ್ಳದ ದಂಡೆಯ ಮೇಲೆ ಸಮತಟ್ಟಾದ ನೆಲದಲ್ಲಿ ಆಯತಾಕಾರದ ವೇದಿಕೆ ನಿರ್ಮಿಸಿ, ಮಣ್ಣಿನ ಗೊಂಬೆ ರೀತಿಯ ಕಲಾಕೃತಿಗಳನ್ನು ಮಾಡಿ ಅದರೊಳಗೆ ಇರಿಸಲಾಗುತ್ತದೆ. ಇದರ ಹೊರಗೆ ಕಾವಲಿಗಾಗಿ ನಾಲ್ಕೂ ದಿಕ್ಕಿಗೆ ಸೇನಾಧಿಪತಿ ಬೊಂಬೆಗಳನ್ನು ನಿಲ್ಲಿಸಿರುತ್ತಾರೆ. ಒಳ ಆವರಣದಲ್ಲಿ ರೈತರು, ಸೈನಿಕರು ಹಾಗು ಕಾಳುಗಳನ್ನು ಇಡಲಾಗುತ್ತದೆ. ಬಳಿಕ ಇದಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಗ್ರಾಮಸ್ಥರು ನಿರ್ಗಮಿಸುತ್ತಾರೆ.

ಮರುದಿನ ಬೆಳಗ್ಗೆ ಬೊಂಬೆ ನೋಡಲು ಜನ ಬರುತ್ತಾರೆ. ಈ ವೇಳೆ ಅಲ್ಲಿರುವ ಕಲಾಕೃತಿಯ ಯಾವ್ಯಾವ ಭಾಗಕ್ಕೆ ಏಟಾಗಿದೆ ಎಂಬುದನ್ನು ನೋಡಿ ಅದರ ಮೇಲೆ ಭವಿಷ್ಯ ನಿರ್ಧರಿಸುತ್ತಾರೆ. ಅದರಂತೆ ಈ ಬಾರಿಯ ಭವಿಷ್ಯವೂ ಹೊರಬಿದ್ದಿದೆ.

ಪ್ರಸಕ್ತ ವರ್ಷ ನಮ್ಮ ರಾಜ್ಯ ರಾಜಕಾರಣದ ದಿಕ್ಕನ್ನು ಪ್ರತಿನಿಧಿಸುವಂತೆ ನಿಂತಿದ್ದ ಸೇನಾಧಿಪತಿ ಬೊಂಬೆಯ ಬಲಗಾಲಿಗೆ ಪೆಟ್ಟಾಗಿದ್ದು, ತಲೆ ಮೇಲಿನ ಟೋಪಿ ಹಿಂಭಾಗಕ್ಕೆ ಸರಿದಿದೆ. ಇದು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸೂಚನೆ ಎನ್ನುವುದು ಗ್ರಾಮಸ್ಥರ ಅಭಿಮತ

ನಿಜವಾಗಿದ್ದ ಬೊಂಬೆ ಭವಿಷ್ಯ
ಈ ಹಿಂದೆ ಇಂದಿರಾ ಗಾಂಧಿ ಹತ್ಯೆ ಹಾಗೂ ರಾಜಶೇಖರರೆಡ್ಡಿ ವಿಮಾನ ಅಪಘಾತದ ವರ್ಷವೂ ಬೊಂಬೆ ಭವಿಷ್ಯ ನುಡಿದಿದ್ದು, ಆಯಾ ದಿಕ್ಕಿನ ಬೊಂಬೆ ಸಂಪೂರ್ಣ ಹಾಳಾಗಿತ್ತಂತೆ. ಅಂದು ಈ ಬಗ್ಗೆ ಭವಿಷ್ಯ ನುಡಿದಿದ್ದ ಗ್ರಾಮಸ್ಥರು, ಆಯಾಯ ದಿಕ್ಕಿನ ನಾಯಕರ ಜೀವಕ್ಕೆ ಅಪಾಯ ಎಂದಿದ್ದರಂತೆ.

ಹಾಗೆಯೇ ಎರಡು ವರ್ಷದ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆಯೂ ಸಿಕ್ಕ ಗೊಂಬೆ ಭವಿಷ್ಯದಲ್ಲಿ, ರಾಜ್ಯದ ದಿಕ್ಕಿನ ಗೊಂಬೆ ಕಾಲು ಮುರಿದುಕೊಂಡಿತ್ತಂತೆ, ಅದಾದ ನಾಲ್ಕು ತಿಂಗಳಲ್ಲಿ ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದಿದ್ದರೆನ್ನುವುದು ಗಮನಾರ್ಹ.

ಹನುಮಕೊಪ್ಪದ ಜನರ ಗೊಂಬೆ ಭವಿಷ್ಯಕ್ಕೆ ನೂರಾರು ವರ್ಷದ ಇತಿಹಾಸವಿದ್ದು, ಇಲ್ಲಿನ ಜನ ತಲೆತಲಾಂತರದಿಂದ ಈ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿದ್ದಾರೆ. ಹಿಂದೊಮ್ಮೆ ಈ ಗ್ರಾಮದಲ್ಲಿದ್ದ ಚಿದಂಬರ ಶಾಸ್ತ್ರಿ ಎನ್ನುವವರು ಊರಿಗೆ ಬರಗಾಲ ಬಂದಿದ್ದಾಗ ಶೃಂಗ ಋಷಿಯ ಮಣ್ಣಿನ ಗೊಂಬೆ ಮಾಡಿ ತಪಸ್ಸು ಮಾಡಿ, ಇಲ್ಲಿಗೆ ಮಳೆ ತರಿಸಿದ್ದರಂತೆ.

ಬಳಿಕ ಊರಿಗೆ ಯಾವುದೇ ಸಮಸ್ಯೆಯಾಗದಂತೆ ಯುಗಾದಿ ಅಮವಾಸ್ಯೆ ದಿನ ಈ ಸಂಪ್ರದಾಯ ನಡೆಸಿಕೊಂಡು ಬರಲು ತಿಳಿಸಿದ್ದರಂತೆ. ಅಂದು ಆರಂಭವಾದ ಪದ್ಧತಿ ಅನುಸರಣೆ ಇಂದಿಗೂ ಇಲ್ಲಿ ನಡೆದುಕೊಂಡು ಬರುತ್ತಿದೆ ಎನ್ನುವುದು ಗ್ರಾಮಸ್ಥರ ಹೇಳಿಕೆ.

ಒಟ್ಟಿನಲ್ಲಿ ಚುನಾವಣೆ ಕಾವು ಏರುತ್ತಿರುವ ಈ ಸಂದರ್ಭದಲ್ಲಿ ಗೊಂಬೆ ನೀಡಿರುವ ರಾಜಕೀಯ ಭವಿಷ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಜೊತೆಗೆ ಭವಿಷ್ಯ-ಜ್ಯೋತಿಷ್ಯ ನಂಬದವರು ಇದೆಲ್ಲ ಸುಳ್ಳು ಎಂದು ನಿರ್ಲಕ್ಷಿಸಿದ್ದಾರೆ. ಗೊಂಬೆ ಭವಿಷ್ಯದ ಸತ್ಯಾಸತ್ಯತೆ ಚುನಾವಣೆ ಫಲಿತಾಂಶದ ಬಳಿಕ ನಿರ್ಧಾರವಾಗಲಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...