ಚುನಾವಣಾ ಫಲಿತಾಂಶ | ಅಯೋಧ್ಯೆಯಲ್ಲೇ ಮೋದಿಯ ಹುಸಿ ಭಕ್ತಿಗೆ ಬಾಣ ಬಿಟ್ಟ ಶ್ರೀರಾಮ!

Date:

ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದ ಹೆಸರನ್ನು 2018ರಲ್ಲಿ ಅಯೋಧ್ಯೆ ಎಂದು ಬದಲಿಸಲಾಗಿತ್ತು. 2024ರ ಜನವರಿ 22ರಂದು ಇನ್ನೂ ಪೂರ್ಣಗೊಳ್ಳದ ಅಯೋಧ್ಯಾ ರಾಮ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡ್ತಾರೆ.

ಪ್ರಧಾನಿ ಮೋದಿ ಮೇ 17ರಂದು ಉತ್ತರ ಪ್ರದೇಶದ ಬರ್ಬಂಕಿ ಹಾಗೂ ಹಮೀರ್ ಪುರ್‌ನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಉಗ್ರವಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಗೆದ್ದರೆ ಅಯೋಧ್ಯೆ ರಾಮಮಂದಿರದ ಮೇಲೆ ಬುಲ್ಡೋಜರ್ ಹತ್ತಿಸುತ್ತಾರೆ ಎಂಬ ಭಯ ಹುಟ್ಟಿಸುತ್ತಾರೆ ಪ್ರಧಾನಿ ಮೋದಿ.

ಈ ಎಲ್ಲ ಸರಣಿ ವಿದ್ಯಾಮಾನಗಳು ಅಯೋಧ್ಯಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ತಂದು ಕೊಡಲಿದೆ ಎಂದು ಲೆಕ್ಕಹಾಕಲಾಗಿತ್ತು. ಹಾಲಿ ಸಂಸದರಾಗಿದ್ದ ಬಿಜೆಪಿಯ ಲಲ್ಲು ಸಿಂಗ್ 2014 ಹಾಗೂ 2019 ರಲ್ಲಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಚುನಾವಣೆಯಲ್ಲಿ 65,000 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದ ಲಲ್ಲು ಸಿಂಗ್ , 2014ರಲ್ಲಿ 2.82 ಲಕ್ಷದ ಬೃಹತ್ ಅಂತರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿ ಎದುರು ಗೆಲುವು ದಾಖಲಿಸಿದ್ದರು. ಈ ಬಾರಿ ಯೋಗಿ ಮತ್ತು ಮೋದಿಯ ಬುಲ್ಡೋಜರ್ ತನಗೆ 3 ಲಕ್ಷಕ್ಕಿಂತ ದೊಡ್ಡ ಅಂತರದಲ್ಲಿ ಗೆಲುವು ತಂದು ಕೊಡಲಿದೆ ಎಂದು ಲಲ್ಲು ಸಿಂಗ್ ನಿರೀಕ್ಷೆ ಮಾಡಿದ್ದರು.

ಇನ್ನೂ ಮೋದಿ ಪ್ರಚಾರಕ್ಕೆ ಹೋದಲ್ಲಲ್ಲೆ ಅಯೋಧ್ಯೆ ಮತ್ತು ರಾಮ ಮಂದಿರವನ್ನು ಉಲ್ಲೇಖಿಸುತ್ತಿದ್ದರು . ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿ ಕೂಟವು ರಾಮ ಮಂದಿರ ಉದ್ಘಾಟನೆಯ ಆಹ್ವಾನ ತಿರಸ್ಕರಿಸಿ ಹಿಂದು ಧರ್ಮವಿರೋಧಿ ನಿಲುವು ತಾಳಿದೆ ಎಂದು ಉಗ್ರವಾಗಿ ಟೀಕಿಸುತ್ತಿದ್ದರು.

ಅಯೋಧ್ಯೆ ರಾಮಮಂದಿರ ಹಾಗೂ ಶ್ರೀರಾಮನನ್ನು ಚುನಾವಣಾ ದಾಳವಾಗಿ ಬಳಸಿಕೊಂಡ ಮೋದಿಯ ಅನೈತಿಕ ರಾಜಕೀಯಕ್ಕೆ ರಾಮ ಮಂದಿರದ ಬುಡದಲ್ಲೇ ಸರಿಯಾದ ಉತ್ತರ ಲಭಿಸಿದೆ. ಹ್ಯಾಟ್ರಿಕ್ ಕನಸು ಕಾಣುತ್ತಿದ ಅಯೋಧ್ಯೆಯ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೀಶ್ ಪ್ರಸಾದ್ ಎದುರು 54,352 ಮತಗಳ ದೊಡ್ಡ ಅಂತರದ ಸೋಲು ಕಂಡಿದ್ದಾರೆ.

ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎಸ್.ಪಿ. ಅಭ್ಯರ್ಥಿ ಅವಧೀಶ್ ಪ್ರಸಾದ್ 5,52,177 ಮತ ಪಡೆದಿದ್ದಾರೆ. ಬಿಜೆಪಿಯ ಲಲ್ಲು ಸಿಂಗ್ 4,97,825 ಮತ ಪಡೆದರು. ಬಿಎಸ್ಪಿ ಅಭ್ಯರ್ಥಿ ಸಚಿದಾನಂದ ಪಾಂಡೆ 45,993 ಮತ ಪಡೆದಿದ್ದಾರೆ. ಸಿ.ಪಿ.ಐ ಅಭ್ಯರ್ಥಿ ಅರವಿಂದ ಸೇನ್ 15,347 ಮತ ಪಡೆದಿದ್ದಾರೆ. ಇನ್ನೂ ಹತ್ತು ಮಂದಿ ಸಣ್ಣ ಪುಟ್ಟ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದರು , ಈ ಹತ್ತು ಮಂದಿ ಅಭ್ಯರ್ಥಿಗಳು ಒಟ್ಟಾಗಿ ಹದಿನೆಂಟು ಸಾವಿರದಷ್ಟು ಮತ ಪಡೆದಿದ್ದಾರೆ, ವಿಶೇಷ ಅಂದರೆ 7511 ನೋಟಾ ಮತಗಳು ಈ ಕ್ಷೇತ್ರದಲ್ಲಿ ಬಿದ್ದಿವೆ.

ಒಟ್ಟಾರೆಯಾಗಿ ಈ ಕ್ಷೇತ್ರದ ಚುನಾವಣೆಯ ಮತ ಹಂಚಿಕೆಯನ್ನು ಗಮನಿಸಿದಾಗ ಬಿಜೆಪಿಗೆ ನೇರ ಎದುರಾಳಿಯಾಗಿದ್ದ ಸಮಾಜವಾದಿ ಪಕ್ಷವನ್ನು ಹೊರತುಪಡಿಸಿಯೂ ಸುಮಾರು 85 ಸಾವಿರದಷ್ಟು ಮತಗಳು ಬಿಜೆಪಿಗೆ ವಿರುದ್ದವಾಗಿ ಚಲಾವಣೆಯಾಗಿದೆ. ಬಹುಶಃ ಬಿಜೆಪಿ ಮತ್ತು ಮೋದಿಯ ಹುಸಿ ಭಕ್ತಿಯು ರಾಮನಿಗೆ ಅರ್ಥವಾಗಿರಬೇಕು , ಅದಕ್ಕೆ ಎಲ್ಲ ಕೋನಗಳಿಂದ ಬಾಣ ಬಿಟ್ಟಿರಬೇಕು.‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...