ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆ ನಡೆಯಲ್ಲ: ಪತ್ರಕರ್ತ ಜಿ ಪಿ ಬಸವರಾಜು ಕಳವಳ

Date:

2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ದೇಶದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ ಎಂದು ಪತ್ರಕರ್ತ ಜಿ ಪಿ ಬಸವರಾಜು ಕಳವಳ ವ್ಯಕ್ತಪಡಿಸಿದರು.

ಚಾಮರಾಜನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನು ಗಾಳಿಗೆ ತೂರುವ ಕೆಲಸ 10 ವರ್ಷಗಳಿಂದ ನಡೆಯುತ್ತಿದೆ. ಇ.ಡಿ, ಸಿಬಿಐ ಸ್ವಾಯತ್ತ ಸಂಸ್ಥೆಗಳಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರದ ವಿರುದ್ಧ ದನಿ ಎತ್ತಿದವರ ಮೇಲೆ ಆಯುಧವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಗೆ ದೊಡ್ಡ ಅಪಾಯ ಬಂದೊದಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಆರ್‌ಎಸ್‌ಎಸ್ ಸಿದ್ಧಾಂತವೇ ಬಿಜೆಪಿ ಸಿದ್ಧಾಂತ ಎಂದು ಹೇಳಿದ್ದಾರೆ. ಅಂದರೆ ವರ್ಣ ವ್ಯವಸ್ಥೆ, ಜಾತಿ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆಗೆ ಜೋಡಿಸಲಾಗುತ್ತಿದೆ” ಎಂದು ಬೇಸರ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರಮೋದಿಯವರು ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮದವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸೀತೆ, ಲಕ್ಷ್ಮಣ, ಹನುಮಂತನ ಜೊತೆ ಇದ್ದ ರಾಮನನ್ನು ಒಂಟಿ ಮಾಡಲಾಗಿದೆ. ಧರ್ಮವನ್ನು ಸ್ವಾರ್ಥಕ್ಕೆ, ರಾಜಕಾರಣಕ್ಕೆ ಬಳಸಿಕೊಳ್ಳುವುದು ನೀಚತನ. ಪ್ರಧಾನಿ ಸ್ಥಾನದಲ್ಲಿ ಯಾರೂ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದಿರಲಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಯಾರೂ ಬಿಜೆಪಿಗೆ ಮತ ಹಾಕಬೇಡಿ” ಎಂದು ಜನಾಂದೋಲನಗಳ ಮಹಾಮೈತ್ರಿಯ ಸಂಘಟನಾ ಕಾರ್ಯದರ್ಶಿ ಉಗ್ರನರಸಿಂಹೇಗೌಡ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...