ಚುನಾವಣಾ ಬಾಂಡ್ | ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂದ ನಿರ್ಮಲಾ ಸೀತಾರಾಮನ್ ಪತಿ!

Date:

ನಿರಂತರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ, ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು “ಚುನಾವಣಾ ಬಾಂಡ್ ದೇಶದ ಅತೀ ದೊಡ್ಡ ಹಗರಣವಲ್ಲ, ವಿಶ್ವದಲ್ಲೇ ಅತೀ ದೊಡ್ಡ ಹಗರಣ ಇದಾಗಿದೆ” ಎಂದು ಹೇಳಿದರು.

ಚುನಾವಣಾ ಬಾಂಡ್ ವಿಚಾರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಚುನಾವಣಾ ಬಾಂಡ್ ಅತೀ ಪ್ರಮುಖ ಚರ್ಚೆಯ ವಿಷಯವಾಗುತ್ತದೆ. ಇದು ಬಿಜೆಪಿ ಮತ್ತು ಇತರೆ ಪಕ್ಷ ಅಥವಾ ಬಿಜೆಪಿ ಮತ್ತು ಇತರೆ ಮೈತ್ರಿಕೂಟಗಳ ನಡುವೆ ನಡೆಯುವ ಸಮರವಲ್ಲ, ಚುನಾವಣಾ ಬಾಂಡ್ ವಿಚಾರವು ಬಿಜೆಪಿ ಮತ್ತು ಭಾರತದ ಜನರ ನಡುವಿನ ಹೋರಾಟಕ್ಕೆ ಕಾರಣವಾಗಲಿದೆ” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ – ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯ ಚುನಾವಣಾ ಬಾಂಡ್‌ ಬಗ್ಗೆ ಎಷ್ಟು ವೇಗವಾಗಿ ಚರ್ಚೆ, ಸುದ್ದಿಯಾಗುತ್ತಿದೆಯೋ ಅದಕ್ಕೂ ಅಧಿಕ ವೇಗವಾಗಿ ಸುದ್ದಿ ಮುಂದಿನ ದಿನಗಳಲ್ಲಿ ಆಗಬಹುದು. ಈ ಹಗರಣದ ಸುದ್ದಿಯು ಈಗಾಗಲೇ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಹತೋಟಿ ಮೀರಿ ಹೋಗುತ್ತಿದೆ” ಎಂದು ಹೇಳಿದರು.

“ಪ್ರಸ್ತುತ ಚುನಾವಣಾ ಬಾಂಡ್ ವಿಚಾರವು ಸಾಮಾನ್ಯ ಜನರಿಗೆ ಶೀಘ್ರವಾಗಿ ತಲುಪುತ್ತಿದೆ. ಇದು ದೇಶದಲ್ಲೇ ಅತೀ ದೊಡ್ಡ ಹಗರಣವಲ್ಲ ಬದಲಾಗಿ ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂಬುದನ್ನು ಜನರು ನಿಧಾನವಾಗಿ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಈ ಚುನಾವಣಾ ಬಾಂಡ್ ವಿಚಾರದಿಂದಾಗಿ ಕೇಂದ್ರ ಸರ್ಕಾರವು ಮತದಾರರಿಂದ ಕಠಿಣ ಶಿಕ್ಷೆಗೆ ಒಳಗಾಗಲಿದೆ” ಎಂದು ಪರಕಾಲ ಪ್ರಭಾಕರ್ ಹೇಳಿದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಚುನಾವಣಾ ಬಾಂಡ್ ಅನ್ನು ಸುಪ್ರೀಂ ಕೋರ್ಟ್ ಅಸಂವಿಧಾನಿಕ ಎಂದು ಕರೆದಿದೆ. ಹಾಗೆಯೇ ಈ ಬಾಂಡ್‌ನ ಎಲ್ಲ ಮಾಹಿತಿ ಬಹಿರಂಗಪಡಿಸಲು ಎಸ್‌ಬಿಐಗೆ ತಿಳಿಸಿದೆ. ಹೆಚ್ಚುವರಿ ಕಾಲಾವಕಾಶ ಕೋರಿದ್ದ ಎಸ್‌ಬಿಐ ಸುಪ್ರೀಂ ತರಾಟೆಯ ಬಳಿಕ ಬಾಂಡ್ ಮಾಹಿತಿ ಚುನಾವಣಾ ಆಯೋಗಕ್ಕೆ ನೀಡಿದ್ದು, ಆಯೋಗ ಮಾಹಿತಿ ಪ್ರಕಟಿಸಿದೆ. ಇಡಿ, ಸಿಬಿಐ, ಐಟಿ ದಾಳಿಗಳ ಬಳಿಕ ಬಿಜೆಪಿಗೆ ಕಾರ್ಪೊರೇಟ್ ಸಂಸ್ಥೆಗಳು ದೇಣಿಗೆ ನೀಡಿರುವುದು, ಸರ್ಕಾರಿ ಗುತ್ತಿಗೆ ಪಡೆದ ಸಂಸ್ಥೆಗಳು ಬಿಜೆಪಿ, ಇತರೆ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವ ಮಾಹಿತಿ ಬಹಿರಂಗವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...