ಚುನಾವಣಾ ಬಾಂಡ್ ಹಗರಣ | ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು

Date:

ಚುನಾವಣಾ ಬಾಂಡ್‌ ಹಗರಣವು ಸ್ವತಂತ್ರ್ಯ ಭಾರತದ ಅತಿ ದೊಡ್ಡ ಹಗರಣವಾಗಿದೆ. ಈ ಹಗರಣದ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜಕೀಯ ಪಕ್ಷಗಳು ಮತ್ತು ಕಂಪನಿಗಳ ನಡುವಿನ ಅಪವಿತ್ರ ಮೈತ್ರಿ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ವಕೀಲರು ಮತ್ತು ಹೋರಾಟಗಾರರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಶುಕ್ರವಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ವಕೀಲರು-ಹೋರಾಟಗಾರರ ತಂಡ, “ಹಲವು ಕಂಪನಿಗಳು ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹಣ ನೀಡಿ, ತಮಗೆ ಬೇಕಾದ ಅನುಕೂಲಗಳನ್ನು ಪಡೆದುಕೊಂಡಿವೆ. ಆಡಳಿತಾರೂಢ ಬಿಜೆಪಿಗೆ ಹಣ ಕೊಟ್ಟು, ಕಂಪನಿಗಳು ನಾನಾ ರೀತಿಯ ನೆರವು ಪಡೆದಿವೆ. ಈ ಅಪವಿತ್ರ ಮೈತ್ರಿಯು ಬಹಿರಂಗವಾಗಬೇಕು” ಎಂದು ಒತ್ತಾಯಿಸಿದೆ.

“ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂ. ದೇಣಿಗೆ ಪಡೆದಿರುವ ಬಿಜೆಪಿ, ಬೃಹತ್ ಮೊತ್ತದ ಯೋಜನೆಗಳನ್ನು ತಮಗೆ ಹಣ ನೀಡಿದ ಕಂಪನಿಗಳಿಗೆ ಕೊಟ್ಟಿದೆ. ಹಲವು ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿ, ತನಿಖಾ ಸಂಸ್ಥೆಗಳ ತನಿಖೆಯಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“33 ಕಂಪನಿಗಳು ಬಿಜೆಪಿಗೆ 1,751 ಕೋಟಿ. ರೂ. ದೇಣಿಗೆ ನೀಡಿ, 3.7 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಗುತ್ತಿಗೆ ಪಡೆದಿವೆ. ತನಿಖಾ ಸಂಸ್ಥೆಗಳ ತನಿಖೆಯಿಂದ ತಪ್ಪಿಸಿಕೊಳ್ಳಲು 41 ಕಂಪನಿಗಳು ಬಿಜೆಪಿಗೆ 2,471 ಕೋಟಿ ರೂ. ದೇಣಿಗೆ ನೀಡಿವೆ. ಈ ಹಣದಲ್ಲಿ ಅರ್ಧದಷ್ಟು ಮೊತ್ತವು ಇಡಿ/ಐಟಿ ದಾಳಿಗಳ ಬಳಿಕ ಬಿಜೆಪಿಗೆ ಬಂದಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

“ಈ ಹಿಂದೆ, 2ಜಿ ಹಗರಣ ಅಥವಾ ಕಲ್ಲಿದ್ದಲು ಹಗರಣದಲ್ಲಿ ಹಣದ ಅವ್ಯವಹಾರ ನಡೆದಿರಲಿಲ್ಲ. ಅದರೂ, ಆ ಎರಡು ಹಗರಣಗಳ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲಾಗಿತ್ತು. ಚುನಾವಣಾ ಬಾಂಡ್‌ ಯೋಜನೆಯಲ್ಲಿ ಭಾರೀ ಹಗರಣ ನಡೆದಿದೆ. ಹೀಗಾಗಿ, ಕಾರ್ಪೊರೇಟ್-ರಾಜಕೀಯ ಸಂಬಂಧ ಹಾಗೂ ಚುನಾವಣಾ ಬಾಂಡ್ ಹಗರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು” ಎಂದು ಪ್ರಶಾಂತ್ ಭೂಷಣ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...