ಚುನಾವಣಾ ಬಾಂಡ್ | ನಮ್ಮ ತೀರ್ಪನ್ನು ಮೂರನೇಯವರು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್‌

Date:

ಚುನಾವಣಾ ಬಾಂಡ್‌ಗೆ ಕುರಿತಾದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಗೊಳಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಅಲ್ಲದೆ, ಯೋಜನೆಯನ್ನು ರದ್ದುಗೊಳಿಸಲಾದ ತೀರ್ಪನ್ನು ವಿವಿಧ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಕೇಂದ್ರ ಸರ್ಕಾರ ವ್ಯಕ್ತಪಡಿಸಿದ್ದ ಕಳವಳವನ್ನು ಸಹ ಸುಪ್ರೀಂ ಕೋರ್ಟ್‌ ಇದೇ ವೇಳೆ ತಳ್ಳಿಹಾಕಿದೆ.

ಚುನಾವಣಾ ಬಾಂಡ್‌ ಮೂಲಕ ಬಹಿರಂಗಪಡಿಸಲಾದ ಎಲ್ಲಾ ವಿವರಗಳನ್ನು ತಮ್ಮ ಕಾರ್ಯಸೂಚಿಗೆ ತಕ್ಕಂತೆ ತಿರುಚಲಾಗುತ್ತಿದ್ದು,  ಇದರಿಂದಾಗಿ ನ್ಯಾಯಾಲಯ ಮುಜುಗರಕ್ಕೊಳಗಾಗುತ್ತಿದೆ ಎಂದು ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದರು.

ಈ ವಾದವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್‌ ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಐವರು ಸದಸ್ಯರ ಪೀಠ, ತನ್ನ ತೀರ್ಪುಗಳನ್ನು ಮೂರನೆಯವರು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಪ್ಪು ಹಣ ನಿಗ್ರಹಿಸುವುದು ಅಂತಿಮ ಗುರಿಯಾಗಿದ್ದು, ತೀರ್ಪನ್ನು ನ್ಯಾಯಾಲಯದ ಹೊರಗೆ ಹೇಗೆ ಬಳಸಿಕೊಳ್ಳಲಾಗುತ್ತದೆ ಎಂಬದರ ಬಗ್ಗೆ ಈ ನ್ಯಾಯಾಲಯಕ್ಕೆ ತಿಳಿದಿರಬೇಕಿತ್ತು. ಕಿರುಕುಳ ಎಂಬುದು ಕೇಂದ್ರ ಸರ್ಕಾರದ ಮಟ್ಟದಲ್ಲಿ ಅಲ್ಲ ಬದಲಿಗೆ ಬೇರೊಂದು ನೆಲೆಯಲ್ಲಿ ಆರಂಭವಾಗಿದೆ. ನ್ಯಾಯಾಲಯದ ಮುಂದೆ ಇದ್ದವರು ಪತ್ರಿಕಾ ಸಂದರ್ಶನಗಳನ್ನು ನೀಡಲು ಪ್ರಾರಂಭಿಸಿ, ಉದ್ದೇಶಪೂರ್ವಕವಾಗಿ ನ್ಯಾಯಾಲಯವನ್ನು ಮುಜುಗರಕ್ಕೀಡು ಮಾಡಿದರು. ಇದು ನ್ಯಾಯಸಮ್ಮತವಲ್ಲ” ಎಂದು ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದರು.

“ಮುಜುಗರ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳ ಸುರಿಮಳೆ ನೀಡಲಾಗುತ್ತಿದೆ. ಮಾಹಿತಿ ತೆರೆದ ಬಯಲಾಗಿದ್ದು, ಜನ ತಮಗೆ ಬೇಕಾದಂತೆ ಅಂಕಿ ಅಂಶ ತಿರುಚಬಹುದು. ಅಂಕಿ-ಅಂಶಗಳ ಆಧಾರದ ಮೇಲೆ ಬೇಕಾದಂತೆ ಹೇಳಿಕೆ ನೀಡಲಾಗುತ್ತಿದೆ” ಎಂದು ತುಷಾರ್ ಮೆಹ್ತಾ ತಿಳಿಸಿದರು.

“ನ್ಯಾಯಮೂರ್ತಿಗಳಾಗಿ ನಾವು ಕಾನೂನು ಪರಿಪಾಲನೆಯನ್ನು ಮಾತ್ರವೇ ಪರಿಗಣಿಸುತ್ತೇವೆ, ಸಂವಿಧಾನದ ಪ್ರಕಾರ ಕೆಲಸ ಮಾಡುತ್ತೇವೆ. ರಾಜ್ಯಾಡಳಿತ ವ್ಯವಸ್ಥೆಯಲ್ಲಿ ಕಾನೂನು ಪರಿಪಾಲನೆಗಾಗಿ ಮಾತ್ರವೇ ನಮ್ಮ ನ್ಯಾಯಾಲಯವು ಕೆಲಸ ಮಾಡುತ್ತದೆ. ನ್ಯಾಯಮೂರ್ತಿಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾತನಾಡಲಾಗುತ್ತದೆ. ಆದರೆ ಆ ಮಾತುಗಳನ್ನು ಸಹಿಸುವಷ್ಟು ನ್ಯಾಯಾಂಗದ ಭುಜಗಳು ವಿಶಾಲವಾಗಿವೆ. ತೀರ್ಪಿನ ಪ್ಯಾರಾ ಬಿ ಮತ್ತು ಸಿಯಲ್ಲಿ ನೀಡಲಾದ ನಿರ್ದೇಶನಗಳನ್ನು ಜಾರಿಗೊಳಿಸಲಾಗಿದೆಯೇ ಎಂಬುದನ್ನಷ್ಟೇ ತಾನು ಗಮನಿಸುತ್ತೇನೆ” ಎಂದು ನ್ಯಾಯಾಲಯ ತಿಳಿಸಿತು. ಆ ಮೂಲಕ ಕೇಂದ್ರ ಸರ್ಕಾರ ವ್ಯಕ್ತಪಡಿಸಿದ್ದ ಕಳವಳವನ್ನು ಸಹ ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

ಬಾಂಡ್‌ಗಳಿಗೆ ಎಸ್‌ಬಿಐ ನೀಡಿದ್ದ ಆಲ್ಫಾ ನ್ಯೂಮರಿಕ್‌ ಸಂಖ್ಯೆಗಳ ವಿವರ ಸೇರಿದಂತೆ ಅವುಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಇದೇ ವೇಳೆ ನ್ಯಾಯಾಲಯ ಎಸ್‌ಬಿಐಗೆ ತಾಕೀತು ಮಾಡಿತು.

ಬಾಂಡ್‌ಗಳನ್ನು ನಗದೀಕರಿಸಿಕೊಂಡ ಮತ್ತು ಅವುಗಳನ್ನು ಪಡೆದವರನ್ನು ಗುರುತಿಸಲು ಸಹಾಯವಾಗುವಂತೆ ಚುನಾವಣಾ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸದೆ ಇರುವ ಬಗ್ಗೆ ಮಾ. 15ರಂದು ನ್ಯಾಯಾಲಯ ಎಸ್‌ಬಿಐ ಪ್ರತಿಕ್ರಿಯೆ ಕೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...