ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

Date:

  • ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ
  • ಸಾಕಷ್ಟು ಪ್ರಮಾಣದಲ್ಲಿ ಸಿಬ್ಬಂದಿ ಹಾಗೂ ಸಂಪನ್ಮೂಲಗಳ ಲಭ್ಯತೆ ಇಲ್ಲ’ ಎಂದ ಅಧಿಕಾರಿಗಳು

ಭಾರತದಲ್ಲಿ ಕಾರ್ಯಾಚರಿಸುತ್ತಿದ್ದ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ಅ.1ರ ಭಾನುವಾರದಿಂದ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.

ಮುಚ್ಚಲು ನಿರ್ಧರಿಸಿರುವ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಗಳು, ಭಾರತ ಸರ್ಕಾರದಿಂದ ಸಾಕಷ್ಟು ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಅಫ್ಘಾನಿಸ್ತಾನದ ಹಿತಾಸಕ್ತಿಗಳನ್ನು ಪೂರೈಸುವ ನಿರೀಕ್ಷೆಯನ್ನು ನಮಗೆ ತಲುಪಲು ಸಾಧ್ಯವಾಗುತ್ತಿಲ್ಲ. ಜೊತೆಗೆ ರಾಯಭಾರ ಕಚೇರಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಿಬ್ಬಂದಿ ಹಾಗೂ ಸಂಪನ್ಮೂಲಗಳ ಲಭ್ಯತೆ ಇಲ್ಲ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಶುರುವಾಗುವುದಕ್ಕೂ ಮುಂಚೆ ಇದ್ದ ಅಶ್ರಫ್ ಘನಿ ಸರ್ಕಾರ ನೇಮಕ ಮಾಡಿದ್ದ ರಾಯಭಾರಿ ಫರೀದ್ ಮಮುಂಡ್‌ಜಾಯ್ ನೇತೃತ್ವದಲ್ಲಿ ರಾಯಭಾರ ಕಚೇರಿಯು ಕಾರ್ಯ ನಿರ್ವಹಣೆ ಮಾಡುತ್ತಿತ್ತು. 2021ರಲ್ಲಿ ತಾಲಿಬಾನ್ ಆಳ್ವಿಕೆ ಶುರುವಾದ ಬಳಿಕವೂ ಅದನ್ನು ಮುಂದುವರಿಸಲಾಗಿತ್ತು. ಈ ನಡುವೆ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಇಂದಿನಿಂದ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಅಫ್ಘಾನಿಸ್ತಾನ ಮತ್ತು ಭಾರತದ ನಡುವಿನ ದೀರ್ಘಕಾಲದ ಬಾಂಧವ್ಯ ಮತ್ತು ಸ್ನೇಹವನ್ನು ಪರಿಗಣಿಸಿ ಎಚ್ಚರಿಕೆಯಿಂದ ಯೋಚಿಸಿದ ನಂತರವೇ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಆಫ್ಘಾನಿಸ್ತಾನ ರಾಯಭಾರ ಕಚೇರಿ ತಿಳಿಸಿದೆ.

“ನವದೆಹಲಿಯಲ್ಲಿರುವ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವ ಈ ನಿರ್ಧಾರವನ್ನು ಪ್ರಕಟಿಸಲು ಆಳವಾದ ದುಃಖ, ವಿಷಾದ ಮತ್ತು ನಿರಾಶೆಯಾಗಿದೆ” ಎಂದು ರಾಯಭಾರ ಕಚೇರಿಯ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ನ್ಯೂನತೆಗಳನ್ನು ನಾವು ಒಪ್ಪಿಕೊಳ್ಳುತ್ತೇವೆ’ ಎಂದಿರುವ ರಾಯಭಾರ ಕಚೇರಿಯು, ಭಾರತದ ಅಸಹಕಾರವಲ್ಲದೆ, ಇನ್ನಿತರ ಕೆಲವು ಅಂಶಗಳನ್ನುಕೂಡ ಪಟ್ಟಿ ಮಾಡಿದೆ.

“ಭಾರತದಲ್ಲಿ ರಾಜತಾಂತ್ರಿಕ ಬೆಂಬಲದ ಕೊರತೆ ಮತ್ತು ಕಾಬೂಲ್‌ನಲ್ಲಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುವ ಸರ್ಕಾರದ ಅನುಪಸ್ಥಿತಿಯಿಂದಾಗಿ ಅಫ್ಘಾನಿಸ್ತಾನ ಮತ್ತು ಅದರ ನಾಗರಿಕರ ಉತ್ತಮ ಹಿತಾಸಕ್ತಿಗಳನ್ನು ಪೂರೈಸಲು ಅಗತ್ಯವಾದ ನಿರೀಕ್ಷೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸುವಲ್ಲಿ ನಮ್ಮ ನ್ಯೂನತೆಗಳನ್ನು ನಾವು ಒಪ್ಪಿಕೊಳ್ಳುತ್ತೇವೆ” ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಅಫ್ಘಾನಿಸ್ತಾನ ಹಾಗೂ ಅದರ ನಾಗರಿಕರ ಹಿತಾಸಕ್ತಿಗೆ ಅನುಗುಣವಾಗಿ ಅಗತ್ಯವಾದ ಕೆಲಸಗಳು ಹಾಗೂ ನಿರೀಕ್ಷೆಗಳನ್ನು ನಡೆಸುವುದು ನಮಗೆ ಸಾಧ್ಯವಾಗುತ್ತಿಲ್ಲ ಎಂಬ ವೈಫಲ್ಯವನ್ನು ಕೂಡ ಒಪ್ಪಿಕೊಳ್ಳುತ್ತೇವೆ” ಎಂದು ಅಫ್ಘಾನಿಸ್ತಾನ ರಾಯಭಾರ ಕಚೇರಿ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...