ಕೈಗಾರಿಕೆಗಳಿಗೆ ಉತ್ತೇಜನ ಎಲ್ಲ ರಾಜ್ಯಗಳಿಗೂ ಸಮಾನವಾಗಿರಲಿ:‌ ಎಚ್‌ಡಿಕೆ ಮಾತಿಗೆ ಎಂ ಬಿ ಪಾಟೀಲ್ ಸಹಮತ

Date:

ಗುಜರಾತಿನ ಸಾನಂದ್‌ನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿ ಕಂಪನಿ ಸೃಷ್ಟಿಸಲಿರುವ ಪ್ರತೀ ಉದ್ಯೋಗಕ್ಕೆ ದೇಶದ ಬೊಕ್ಕಸದಿಂದ 3.20 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ಕೊಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿರುವುದು ಸರಿಯಾಗಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆಡಿರುವ ಮಾತುಗಳನ್ನು ಬೆಂಬಲಿಸಿ ‘ಎಕ್ಸ್’ ತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ” ಇದೇ ನೀತಿ ಮುಂದುವರಿಯುವುದಾದರೆ, ದೇಶದ ಎಲ್ಲ ರಾಜ್ಯಗಳಿಗೂ ಇದೇ ರೀತಿಯ ಸಮಾನ ಸೂತ್ರ ಮತ್ತು ಅವಕಾಶ ಸಿಗಲಿ” ಎಂದಿದ್ದಾರೆ.

“ಮೈಕ್ರಾನ್ ಕಂಪನಿ 2.70 ಬಿಲಿಯನ್ ಡಾಲರ್ ವೆಚ್ಚದಲ್ಲಿ ಗುಜರಾತಿನಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, 5,000 ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದೆ. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಶೇಕಡಾ 50 ಮತ್ತು ಗುಜರಾತ್ ಸರಕಾರದಿಂದ ಶೇಕಡ 20ರಷ್ಟು ಪ್ರೋತ್ಸಾಹ ಧನವನ್ನು ಅದು ಪಡೆಯುತ್ತಿದೆ. ಅಂದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೊಕ್ಕಸದಿಂದ ಕಂಪನಿಗೆ 2 ಬಿಲಿಯನ್ ಡಾಲರ್ ಸಂದಾಯ ಆಗುತ್ತಿದೆ. ಇದರ ಹಿಂದಿರುವ ತರ್ಕ ಸಮರ್ಥನೀಯವಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟೊಂದು ಭಾರೀ ಪ್ರಮಾಣದ ಪ್ರೋತ್ಸಾಹಕ ಧನವನ್ನು ಸರಕಾರದ ಬೊಕ್ಕಸದಿಂದಲೇ ನೀಡುತ್ತಿದ್ದರೆ ಇದನ್ನು ಸಾರ್ವಜನಿಕ ವಲಯದ ಉದ್ಯಮವೆಂದೇ ಪರಿಗಣಿಸಬಹುದು” ಎಂದು ಎಂ ಬಿ ಪಾಟೀಲ್‌ ಹೇಳಿದ್ದಾರೆ.

ಕೈಗಾರಿಕಾ ಬೆಳವಣಿಗೆಗೆ ಸೂಕ್ತವಾದ ಕಾರ್ಯ ಪರಿಸರ ಸೃಷ್ಟಿಸಲು ಈ ರೀತಿಯ ಪ್ರೋತ್ಸಾಹ ಧನ ನೀಡುತ್ತಿದ್ದರೆ ಅದು ಸ್ವಾಗತಾರ್ಹ. ಇದು ವಾಸ್ತವವಾಗಿದ್ದರೆ, ಎಲ್ಲ ರಾಜ್ಯಗಳಿಗೂ ಇಂತಹ ಸಮಾನ ಅವಕಾಶ ಸಿಗಬೇಕು. ಆಗ ಮಾತ್ರ ದೇಶದೆಲ್ಲೆಡೆ ಕೈಗಾರಿಕಾ ಬೆಳವಣಿಗೆ ಕಾಣಬಹುದು. ಆದರೆ ಕೇಂದ್ರದ ಈಗಿನ ನೀತಿಯು ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನ ಬಗ್ಗೆ ಮಾತ್ರ ವಿಶೇಷ ಒಲವನ್ನು ತೋರಿಸುವಂತಿದೆ. ಇದು ತಾರತಮ್ಯ ‌ಮತ್ತು ಅಸಮಾನತೆಗೆ ದಾರಿ ಮಾಡಿಕೊಡಲಿದೆ ಅಷ್ಟೇ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...