ಗ್ಯಾರಂಟಿ ಯೋಜನೆ | ಸರ್ಕಾರ ಹೇಳಿದ್ದೊಂದು, ಮಾಡುತ್ತಿರುವುದೊಂದು: ಬೊಮ್ಮಾಯಿ ಟೀಕೆ

Date:

  • ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಅನುಷ್ಠಾನ ಲೇವಡಿ ಮಾಡಿದ ಬೊಮ್ಮಾಯಿ
  • ನಮ್ಮ ಯೋಜನೆ ಲಾಭ ಪಡೆದು ಅವರ ಗ್ಯಾರಂಟಿ ಜಾರಿ ಮಾಡುತ್ತಿದ್ದಾರೆ

ಕಾಂಗ್ರೆಸ್ ಸರ್ಕಾರ ಇಂದು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬೊಮ್ಮಾಯಿ, “ಚುನಾವಣೆ ವೇಳೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರು. ಆದರೆ ಈಗ 200 ಯೂನಿಟ್ ಒಳಗೆ ಬಳಸಿದರೆ ಮಾತ್ರ ಉಚಿತ ಎನ್ನುತ್ತಿದ್ದಾರೆ. ಈಗ ಸಿಎಂ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ಕೊಡುವುದಾಗಿ ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯೂನಿಟ್ ವ್ಯತ್ಯಾಸವಾಗುತ್ತದೆ.‌ ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು.

“ಸಿದ್ದರಾಮಯ್ಯ ಅವರದ್ದು ಚುನಾವಣೆ ಮೊದಲು ಒಂದು ಮಾತು ಈಗ ಒಂದು ಮಾತು. ಅನ್ನಭಾಗ್ಯ ಯೋಜನೆ ಜಾರಿಯಲ್ಲೂ ಸ್ಪಷ್ಟತೆ ಇಲ್ಲ. ಮೊದಲು ನಾವೇ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಆಹಾರ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಉಚಿತ ಅಕ್ಕಿಯನ್ನೂ ಬಳಸಿಕೊಂಡು ತಮ್ಮ ಕ್ರೆಡಿಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಿದೆ. 10 ಕೆಜಿಯಲ್ಲಿ ರಾಗಿ, ಜೋಳ ಸೇರಿದೆಯಾ, ಇಲ್ಲಾ ಹೆಚ್ಚುವರಿ ಕೊಡ್ತಾರಾ..?” ಎಂದು ಮಾಜಿ ಸಿಎಂ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ದೋಖಾ ಇದೆ. ವಿಶೇಷವಾಗಿ ಬಡವರ ಮನೆಯಲ್ಲಿ ಹಿರಿಯ ಮಹಿಳೆಯರಿರುತ್ತಾರೆ. ಆನ್‌ಲೈನ್ ಅರ್ಜಿ ಹಾಕಲು ಹೇಳಿ ಅವರಿಗೆ ಯೋಜನೆ ಲಾಭ ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಎಲ್ಲ ಪಂಚಾಯತಿಗಳಲ್ಲಿ ಪಿಡಿಒಗಳಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಿ ಕೊಡಬೇಕಿತ್ತು. ಅರ್ಜಿ ಹಾಕಲು ಒಂದು ತಿಂಗಳು, ಪ್ರಕ್ರಿಯೆ ಮಾಡಲು ಒಂದು ತಿಂಗಳು ಕಾಲಹರಣ ಮಾಡುವ ಲೆಕ್ಕ ಇದರಲ್ಲಿ ಅಡಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರವೇ ಎಲ್ಲರ ಮನೆಗಳಿಗೆ ಹೋಗಿ ಮಾಹಿತಿ ಪಡೆದು ಯೋಜನೆ ಜಾರಿ ಮಾಡಬೇಕು. ಇನ್ನು ಎಸಿ ಬಸ್ಸು, ಲಗ್ಜುರಿ ಬಸ್ ಇಲ್ಲ ಅಂತ ಹೇಳಿದ್ದಾರೆ. ಕೆಂಪು ಬಸ್ ಮಾತ್ರ ಗ್ಯಾರಂಟಿ ಅಂತ ಆಯಿತು. ಯುವ ನಿಧಿ ಯೋಜನೆಯನ್ನು 2022-23 ಪಾಸಾದ ಡಿಗ್ರಿ ಹೋಲ್ಡರ್ಸ್‌ಗೆ ಕೊಡುವುದಾಗಿ ಹೇಳುತ್ತಾರೆ. ಡಿಗ್ರಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಹೀಗಾಗಿ ಹೆಚ್ಚಿನ ನಿರುದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ಮತ್ತೆ ಈ ಯೋಜನೆಗಳ ಜಾರಿಗೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ಹೇಳಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ?:ಶೋಭಕ್ಕ, ಕಟೀಲಣ್ಣ, ಬೊಮ್ಮಾಯಿ ಸಾಹೇಬ್ರಿಗೂ ಫ್ರೀ; ಗ್ಯಾರಂಟಿ ಜಾರಿ ಮಾಡಿ ಬಿಜೆಪಿ ಕುಟುಕಿದ ಕಾಂಗ್ರೆಸ್

“ಸರ್ಕಾರ ಹೆಚ್ಚಿನ ಆದಾಯ ತರದೇ ಇರುವ ಹಣವನ್ನೇ ಖರ್ಚು ಮಾಡಿದರೆ, ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡದೇ ಹೋದರೆ, ಆರ್ಥಿಕ ಹೊರೆ ಬೀಳಲಿದೆ. ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು” ಎಂದರು.

“ಇವರು ತಾವು ಮಾಡುವ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಅವರು ಮಾತಿಗೆ ತಪ್ಪಿದ್ದಾರೆ‌. ಹೇಳುವುದೊಂದು ಮಾಡುವುದೊಂದು ಮಾಡಿದ್ದಾರೆ. ರಾಜ್ಯದ ಜನತೆ ಇದೆಲ್ಲವನ್ನು ಗಮನಿಸುತ್ತಿದೆ. ರಾಜ್ಯದ ಜನರ ನಿರೀಕ್ಷೆಗಳು ಹುಸಿಯಾಗಿವೆ. ಒಟ್ಟಿನಲ್ಲಿ ರಾಜ್ಯದ ಜನರ ತೆರಿಗೆ ಹಣ ಅಭಿವೃದ್ದಿ ಯೋಜನೆಗೆ ಖರ್ಚಾಗಲಿ” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...