ಸರ್ವರಿಗೂ ಸಮಪಾಲು-ಸಮಬಾಳು, ಇದುವೆ ‘ಸಿದ್ ಎಕನಾಮಿಕ್ಸ್’: ಎಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು

Date:

ಸದನದಲ್ಲಿ ‘ಸಿದ್ದನಾಮಿಕ್ಸ್’ ಎಂದ ಟೀಕೆ ಮಾಡಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಸರ್ವರನ್ನೂ ಒಳಗೊಂಡಿರುವ, ಸರ್ವರನ್ನೂ ಬೆಸೆಯುವ ಮತ್ತು ಸರ್ವರಿಗೂ ಸಮಪಾಲು – ಸಮಬಾಳು ನೀಡುವುದನ್ನೇ ಗುರಿಯಾಗಿಟ್ಟುಕೊಂಡ ಸರ್ವೋದಯ ಅಭಿವೃದ್ದಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದಿದ್ದಾರೆ.

“ಬಹುಧರ್ಮ, ಬಹುಸಂಸ್ಕೃತಿ ಮತ್ತು ಬಹುಭಾಷೆಗಳನ್ನೊಳಗೊಂಡ ಬಹುತ್ವವನ್ನು ಗೌರವಿಸುವ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಸಿಎಂ ಹೇಳಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಯಕದ ಮಹತ್ವವನ್ನು ವಿಶ್ವಕ್ಕೆ ಸಾರಿದ ಬಸವಣ್ಣ, ಗ್ರಾಮಸ್ವರಾಜ್ಯದ ಹರಿಕಾರ ಮಹಾತ್ಮ ಗಾಂಧೀಜಿ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯ ಎಚ್ಚರಿಕೆಯ ಸಂದೇಶ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳ ಮೂಸೆಯಿಂದ ರೂಪುಗೊಂಡ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಕುಮಾರಸ್ವಾಮಿಗೆ ಕುಟುಕಿದ್ದಾರೆ.

“ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು ಎಲ್ಲ ಜಾತಿ-ಧರ್ಮಗಳ ಬಡವರ ಜೊತೆಗಿನ ಒಡನಾಟದ ಅನುಭವದ ಮೂಲಕ ರೂಪುಗೊಂಡ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಜನರ ಬೆವರಗಳಿಕೆಯ ತೆರಿಗೆ ಹಣದ ಪೈಸೆ ಪೈಸೆ ಕೂಡಾ ಆ ಜನರ ಕಲ್ಯಾಣಕ್ಕಾಗಿಯೇ ವಿನಿಯೋಗವಾಗಬೇಕು ಎನ್ನುವ ಎಚ್ಚರ ಮತ್ತು ನುಡಿದಂತೆ ನಡೆಯುವ ಬದ್ಧತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಒಳಗೊಂಡ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...