ಬಿಜೆಪಿ ಟಿಕೆಟ್ | ಯಡಿಯೂರಪ್ಪ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿದ್ದಾರೆ: ಕೆ.ಎಸ್. ಈಶ್ವರಪ್ಪ

Date:

ಬಿಜೆಪಿ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ “ಚರ್ಚೆ ನಡೆಸಿ ಪಕ್ಷೇತರ ನಿಲ್ಲುವ ತೀರ್ಮಾನ” ಮಾಡುವುದಾಗಿ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, “ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡ, ಪ್ರತಾಪ್​ ಸಿಂಹ, ಸಿಟಿ ರವಿ ಹೀಗೆ ಹಲವರಿಗೆ ಅನ್ಯಾಯವಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಲಾಗುತ್ತಿದೆ. ಈ ಕೆಲಸವನ್ನ ಯಡಿಯೂರಪ್ಪನವರು ಮಾಡುತ್ತಿದ್ದಾರೆ ಎಂಬ ಅಭಿಪ್ರಾಯ ಹಲವರಿಗೆ ಇದೆ” ಎಂದರು.

“ಪಕ್ಷೇತರರಾಗಿ ನೀವು ನಿಲ್ಲಬೇಕು, ನಿಮ್ಮನ್ನು ನಾವು ಗೆಲ್ಲಿಸುತ್ತೇವೆ ಎಂದು ಒತ್ತಡ ಹಾಕಲಾಗುತ್ತಿದೆ. ಈ ವಿಚಾರದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ನಾನು ಪಕ್ಷ ತೊರೆಯುತ್ತೇನೆ ಎಂದಾಗಲಿ ಅಥವಾ ಪಕ್ಷೇತರನಾಗಿ ನಿಲ್ಲುತ್ತೇನೆ ಎಂದು ಹೇಳಿಲ್ಲ. ಅಭಿಪ್ರಾಯ ಸಂಗ್ರಹ ಮಾಡಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕಾರ್ಯಕರ್ತರಿಗೆ ಹೇಳಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ “ನಿಮ್ಮ ಮಗ ಹಾವೇರಿಯಲ್ಲಿ ಚುನಾವಣೆ ಸಿದ್ಧತೆ ಮಾಡಲಿ, ನಾನು ಟಿಕೆಟ್ ಕೊಡಿಸುತ್ತೇನೆ. ನಾನೇ ಅಲ್ಲಿ ಪ್ರಚಾರ ಮಾಡಿ ನಿಮ್ಮ ಮಗನನ್ನು ಗೆಲ್ಲಿಸುತ್ತೇನೆ ಎಂದು ಬಿಎಸ್‌ವೈ ಹೇಳಿದ್ದರು. ಆದರೆ ಈಗ ಮೋಸ ಮಾಡಿದ್ದಾರೆ, ಅವರೇ ಟಿಕೆಟ್ ತಪ್ಪಿಸಿದ್ದಾರೆ” ಎಂದು ಆರೋಪಿಸಿದರು.

“ಯಡಿಯೂರಪ್ಪ ಭರವಸೆ ನೀಡಿ ಈಗ ಯಾಕೆ ಮೋಸ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಇದರಿಂದಾಗಿ ನಮ್ಮ ಕಾರ್ಯಕರ್ತರಿಗೆ ನೋವಾಗಿದೆ. ಈಗ ನಮ್ಮ ಪಕ್ಷವೂ ಉಳಿಯಬೇಕು, ಕಾರ್ಯಕರ್ತರ ನೋವೂ ದೂರವಾಗಬೇಕು. ನಾನು ಕಾರ್ಯಕರ್ತರ ತೀರ್ಮಾನದ ಬಗ್ಗೆ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರ ಜೊತೆಗೆ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತೇನೆ” ಎಂದರು.

“ಈಗ ನನ್ನನ್ನು ರಾಧಾ ಮೋಹನ್ ಅಗರ್​ ಲಾಲ್ ಬೆಂಗಳೂರಿಗೆ ಕರೆದಿದ್ದಾರೆ. ಆದರೆ ಈಗಾಗಲೇ ಟಿಕೆಟ್ ಘೋಷಣೆ ಮಾಡಿಯಾಗಿದೆ, ಈಗ ಯಾಕೆ ಹೋಗುವುದು, ಇನ್ನು ಮಾತನಾಡಿ ಏನು ಲಾಭವಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿ ನಾಯಕರಿಗೆ ಯಡಿಯೂರಪ್ಪನವರು ಮೋಸ ಮಾಡಿದ್ದಾರೆ. ಬೊಮ್ಮಾಯಿ, ಕರಂದ್ಲಾಜೆಯವರ ಟಿಕೆಟ್ ಯಾರ ಕೈಯಲ್ಲಿ ಇದೆ” ಎಂದು ಪ್ರಶ್ನಿಸಿದ ಈಶ್ವರಪ್ಪ, “ಬೊಮ್ಮಾಯಿಯವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದರು. ಬಸವರಾಜ್ ಬೊಮ್ಮಾಯಿಯವರೇ ಚುನಾವಣಾ ಸಮಿತಿಯಲ್ಲಿ ಕಾಂತೇಶ್ ​ಅವರನ್ನು ಹಾವೇರಿಯಲ್ಲಿ ನಿಲ್ಲಿಸಿ ಎಂದು ಹೇಳಿದ್ದರು. ಆದರೆ ಈಗ ಅವರಿಗೆ ಟಿಕೆಟ್ ಕೊಡಲಾಗಿದೆ. ಕುತ್ತಿಗೆ ಹಿಚುಕುವ ಕಾರ್ಯ ಮಾಡಲಾಗುತ್ತಿದೆ” ಎಂದು ದೂರಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...