ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಆಹಾರ ಪಾರ್ಕ್ ಸ್ಥಾಪನೆ: ಸಚಿವ ಚಲುವರಾಯಸ್ವಾಮಿ

Date:

ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಉತ್ತೇಜಿಸಲು ಸರ್ಕಾರ ಗರಿಷ್ಠ ನೆರವು ಒದಗಿಸುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯರಾದ ಟಿ ಬಿ ಜಯಚಂದ್ರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸದ ಸಚಿವರು, “ರಾಜ್ಯದಲ್ಲಿ ಪುಡ್ ಪಾರ್ಕ್‌ಗಳ ಸ್ಥಾಪನೆಗೆ ಪ್ರೋತ್ಸಾಹದ ಜೊತೆಗೆ ಬ್ರಾಂಡಿಗೂ ನೆರವು ಒದಗಿಸಲಾಗುವುದು” ಎಂದರು.

“ಆಹಾರ ಪಾರ್ಕ್‍ಗಳ ಅನುಷ್ಠಾನಕ್ಕೆ ಹಾಗೂ ಮೇಲುಸ್ತುವಾರಿ ನಿರ್ವಹಿಸಲು ಆಹಾರ ಕರ್ನಾಟಕ ನಿಯಮಿತ ಎಂಬ ವಿಶೇಷ ಉದ್ದೇಶ ಸಂಸ್ಥೆಯನ್ನು 2003ರಲ್ಲಿ ಕಂಪನಿ ಕಾಯ್ದೆ 1956ರಡಿಯಲ್ಲಿ ಸ್ಥಾಪಿಸಲಾಗಿದೆ. ಆಹಾರ ಕರ್ನಾಟಕ ನಿಯಮಿತವು ಈ ಹಿಂದೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಡಿಯಲ್ಲಿದ್ದು, ಪ್ರಸ್ತುತ ಕೃಷಿ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹತ್ತನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ನಾಲ್ಕು ಆಹಾರ ಪಾರ್ಕ್‌ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅಕ್ಷಯ ಫುಡ್‌ ಪಾರ್ಕ್‌, ಬಾಗಲಕೋಟೆಯಲ್ಲಿ ಗ್ರೀನ್‌ ಫುಡ್‌ ಪಾರ್ಕ್‌, ಕೋಲಾರ ಜಿಲ್ಲೆ ಮಾಲೂರಿನಲ್ಲಿ ಇನ್ನೋವಾ ಅಗ್ರಿ ಬಯೋಪಾರ್ಕ್‌ ಹಾಗೂ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಫುಡ್‌ ಪಾರ್ಕ್‌ ಸ್ಥಾಪಿಸಲಾಗಿದೆ” ಎಂದು ಹೇಳಿದರು.

“ಈಗ ಉದ್ದೇಶಿತ ಯೋಜನೆಯನ್ವಯ ಪ್ರತಿ ಆಹಾರ ಪಾರ್ಕ್ ಸ್ಥಾಪನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಲ್ಲಿ ಒಟ್ಟು 800 ಲಕ್ಷ ರೂ. ಸಹಾಯ ಧನ/ಬಡ್ಡಿ ರಹಿತ ಅಸುರಕ್ಷಿತ ಸಾಲದ ರೂಪದಲ್ಲಿ ಮಂಜೂರು ಮಾಡಿರುತ್ತದೆ” ಎಂದು ಕೃಷಿ ಸಚಿವರು ಹೇಳಿದರು.

“ಘಟಕ ಪ್ರಾರಂಭಿಸಲು ಆಸಕ್ತಿ ವಹಿಸದ ಉದ್ದಿಮೆದಾರರಿಂದ ಕೈಗಾರಿಕಾ ನಿವೇಶನಗಳನ್ನು ಮರು ಹಂಚಿಕೆ ಮಾಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಹಯೋಗದೊಂದಿಗೆ ಕ್ರಮವಹಿಸಲು ಸೂಚಿಸಲಾಗಿದೆ” ಎಂದು ಇದೇ ವೇಳೆ ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...