ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.

‘ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಮ್ಮ ಮನುಷ್ಯನನ್ನು ದ್ವೇಷಿಸಬಾರದು’ ಎಂದು ಸಿಎಂ ಸಲಹೆ ನೀಡಿದರು.

‘ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ. ಕನಕದಾಸರು, ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಬಯಸಿದ್ದರು. ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು’ ಎಂದರು.

‘ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ,ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ’ ಎಂದು ತಿಳಿಸಿದರು.

‘ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು, ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...