ಜೈಲಲ್ಲಿದ್ದರೂ ಹಾಸನದ ಅಭಿವೃದ್ಧಿಯದ್ದೇ ಚಿಂತೆ: ರೇವಣ್ಣ ಭೇಟಿ ಬಳಿಕ ಜಿ ಟಿ ದೇವೇಗೌಡ ಹೇಳಿಕೆ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ ಮಾಜಿ ಸಚಿವ ಎಚ್‌ ಡಿ ರೇವಣ್ಣ ಅವರನ್ನು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ ಟಿ ದೇವೇಗೌಡ ಇಂದು ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ದೇವೇಗೌಡ ತಿಳಿಸಿದ್ದಾರೆ.

ರೇವಣ್ಣ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ ಟಿ ದೇವೇಗೌಡ, “ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂಬ ನೋವಿನಲ್ಲಿ ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದರು” ಎಂದು ತಿಳಿಸಿದರು.

“ರೇವಣ್ಣ ಜೈಲಿಗೆ ಹೋದ ದಿನದಿಂದ ಬಂದಿರಲಿಲ್ಲ. ಅವರ ಆರೋಗ್ಯ ವಿಚಾರಿಸಲು ಬರಬೇಕೆಂದು ಮೂರು ದಿನದಿಂದ ಮನಸ್ಸಲ್ಲಿತ್ತು. ಭಾನುವಾರ ರಜೆ, ಬಿಡೋದಿಲ್ಲ ಅಂತ ಹೇಳಿದ್ದರು. ಅದಕ್ಕೆ ಇಂದು ಮಾತನಾಡಲು ಬಂದಿದ್ದೇನೆ. ಅವರು ಆರಾಮವಾಗಿ ಕುಳಿತಿದ್ದು, ಜೊತೆಯಲ್ಲಿ ಚಹಾ ಕುಡಿದೆವು. ಹಳೆ ವಿಚಾರಗಳನ್ನೆಲ್ಲ ಮೆಲುಕು ಹಾಕಿದರು. ಜೈಲಲ್ಲಿದ್ದರೂ ಈಗಲೂ ಕೂಡ ಹಾಸನ ಅಭಿವೃದ್ಧಿ ಕಾರ್ಯಕ್ರಮಗಳದ್ದೇ ಚಿಂತೆ” ಎಂದು ಜಿ ಟಿ ದೇವೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೇವಣ್ಣರಿಗೆ ಒಂದೇ ಯೋಚನೆ, ನಾನೇನೂ ತಪ್ಪು ಮಾಡಿದ್ದೀನಿ ಎಂದು ಕೇಳಿದರು. ಸಂತ್ರಸ್ತ ಮಹಿಳೆ ಜೊತೆ ಮಾತನಾಡಿ ಆರು ವರ್ಷವಾಗಿದೆ. ನನ್ನನ್ನು ಈ ಪ್ರಕರಣದಲ್ಲಿ ಸೇರಿಸಿ ಹೀಗೆ ಮಾಡಿದ್ದಾರೆ. ನಾನು ತಪ್ಪು ಮಾಡಿದ್ದಿದ್ದರೆ ಶಿಕ್ಷೆ ಕೊಟ್ಟರೆ ಅನುಭವಿಸಬಹುದಿತ್ತು. ಏನೂ ತಪ್ಪು ಮಾಡದೇ ಜೈಲಿಗೆ ಹಾಕಿದ್ದಾರಲ್ಲಾ ಎಂಬ ಕೊರಗು ರೇವಣ್ಣನಿಗೆ ಕಾಡುತ್ತಿದೆ. ಅದನ್ನು ನೆನೆಸಿಕೊಂಡು ದುಃಖಪಡುತ್ತಿದ್ದಾರೆ ಪ್ರಜ್ವಲ್ ರೇವಣ್ಣ ವಿಚಾರವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ರೇವಣ್ಣ ಕೂಡ ಪ್ರಜ್ವಲ್ ಬಗ್ಗೆ ಏನೂ ಹೇಳಲಿಲ್ಲ” ಎಂದರು.

ಇದನ್ನು ಓದಿದ್ದೀರಾ? ಸಂತ್ರಸ್ತೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಬಗ್ಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ, “ಎಲ್ಲವೂ ಕೂಡ ತನಿಖೆ ಮೂಲಕ ಎಸ್ಐಟಿ ಪತ್ತೆ ಮಾಡುತ್ತಾರೆಂದು ಸಿಎಂ ಬೆನ್ನು ತಟ್ಟಿಕೊಂಡಿದ್ದಾರೆ. ಸಿಎಂ ಹೇಳಿದ್ದಾರೆ, ನಮಗೂ ಕೂಡ ನಂಬಿಕೆ ಬಂದಿದೆ. ಪೆನ್‌ಡ್ರೈವ್ ರಿಲೀಸ್ ಮಾಡಿದವರ ಬಗ್ಗೆ ತನಿಖೆ ಪ್ರಾರಂಭ ಮಾಡಿದ್ದಾರೆ. ಎಲ್ಲರದೂ ಹೊರಗಡೆ ಬರುತ್ತೆ. ಸ್ವಲ್ಪ ದಿನ ಕಾಯಬೇಕು” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...