ನೂರು ಎಫ್‌ಐಆರ್‌ ದಾಖಲಾದರೂ ಧೃತಿಗೆಡಲ್ಲ, ಇದೊಂದು ಷಡ್ಯಂತ್ರ: ಹೆಚ್‌ ಡಿ ಕುಮಾರಸ್ವಾಮಿ

Date:

ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ. ಇಂತಹ ನೂರು ಎಫ್‌ಐಆರ್‌ಗಳು ದಾಖಲಾದರೂ ನಾವು ಧೃತಿಗೆಡಲ್ಲ ಎಂದು ಕೇಂದ್ರ ಸಚಿವರ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರದ ವೇಳೆ ಅಕ್ಕೂರು ಹೊಸಹಳ್ಳಿ ಗ್ರಾಮದಲ್ಲಿ ಲೋಕಾಯುಕ್ತ ಎಸ್‌ಐಟಿಯ ಎಡಿಜಿಪಿ ಚಂದ್ರಶೇಖರ್‌ ದೂರಿನ ಮೇಲೆ ಕುಮಾರಸ್ವಾಮಿ, ನಿಖಿಲ್‌ ಹಾಗೂ ಸುರೇಶ್‌ ಬಾಬು ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಉಪ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ” ಎಂದರು.

“ಎಫ್‌ಐಆರ್ ಪ್ರತಿಯನ್ನು ಓದಿದೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಯಿತು. ಅಲ್ಲಿ ದೂರುದಾರರೇ ಹೇಳಿಕೊಂಡಿದ್ದಾರೆ, ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದರು. ಅದಕ್ಕೆ ಕ್ರಮ ಕೈಗೊಳ್ಳಿ ಎಂದು ಕೇಳಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದ್ಧೇನೆ ಎಂದು ಹೇಳಿಕೊಂಡಿದ್ದಾರೆ? ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ ನೋಡಿಕೊಳ್ಳಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು‌ ವಿರುದ್ಧ ಎಫ್‌ಐಆರ್‌

“ನಾನು ಪ್ರೆಸ್ ಮೀಟ್ ಮಾಡಿದೆ ಎಂದು ಎಫ್ಐಆರ್ ಮಾಡಿಸಿದ್ದಾರೆ. ಹೇಳಿಕೆ ನೀಡಿದರು ಎಂದು ಚನ್ನಪಟ್ಟಣದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಹಾಗಾದರೆ, ಯಾರೂ ಯಾರ ವಿರುದ್ಧವೂ ಮಾತನಾಡಬಾರದು, ದೂರು ನೀಡಬಾರದು ಎಂದು ಕಾನೂನಿನಲ್ಲಿ ಇದೆಯೇ? ನಮ್ಮ ಬಾಯಿ ಮುಚ್ಚಿಸಲು ಇವರಿಂದ ಸಾಧ್ಯವಿಲ್ಲ” ಎಂದು ಕಿಡಿ ಕಾರಿದರು.

“ಇದೊಂದು ಷಡ್ಯಂತ್ರ ಹಾಗೂ ಕುತಂತ್ರದ ಭಾಗ. ಯಾವಾಗ ಚನ್ನಪಟ್ಟಣದಲ್ಲಿ ಇವರ ಮೋಸ ಕುತಂತ್ರ ನಡೆಯಲ್ಲ ಎಂದು ಗೊತ್ತಾಯಿತೋ ಹೊಸ ಕುತಂತ್ರಕ್ಕೆ ಮುಂದಾಗಿದ್ದಾರೆ. ನಮಗೆ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ಕಾನೂನಿನ ಮೇಲೆ ಗೌರವ ಇದೆ. ಚನ್ನಪಟ್ಟಣದ ಜನರ ಮೇಲೆ ವಿಶ್ವಾಸ ಇದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...