ಕಾಂಗ್ರೆಸ್ ಸರ್ಕಾರ ಹನಿಮೂನ್‌ ಅವಧಿ ಮುಗಿಸಿದ್ದರೂ ಅಭಿವೃದ್ಧಿ ಕೆಲಸ ಮಾತ್ರ ಶೂನ್ಯ: ವಿಜಯೇಂದ್ರ ಟೀಕೆ

Date:

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು‌ ಒಂದು ವರ್ಷ ಪೂರೈಸಿದೆ. ಒಂದು ಅರ್ಥದಲ್ಲಿ ರಾಜ್ಯ ಸರ್ಕಾರದ ಹನಿಮೂನ್‌ ಅವಧಿ ಮುಗಿಸಿದೆ. ಆದರೆ, ಅಭಿವೃದ್ಧಿ ಕೆಲಸ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಳೆದ ಒಂದು ವರ್ಷದಲ್ಲಿ ಯಾವ ಸಚಿವ, ಶಾಸಕರು ಸಹ ಗುದ್ದಲಿ ಪೂಜೆ ಮಾಡಲಿಲ್ಲ. ಹೊಸ ಅಭಿವೃದ್ಧಿ ಕೆಲಸ‌ ಮಾಡಲಿಲ್ಲ” ಎಂದು ಹರಿಹಾಯ್ದರು.

“ಬರ ಪರಿಹಾರ ವಿತರಣೆ ಸಮರ್ಪಕವಾಗಿ ಆಗಿಲ್ಲ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದ್ರು ರೈತರಿಗೆ ಹಣ ನೀಡುತ್ತಿಲ್ಲ. ಟೆಕ್ನಿಕಲ್ ಕಾರಣ ಹೇಳಿ ಎಲ್ಲ ರೈತರಿಗೆ ಪರಿಹಾರ ನೀಡಿಲ್ಲ. ಕಣ್ಣು, ಕಿವಿ, ಹೃದಯ ಮೂರೂ ಇಲ್ಲದ `ಕೈ’ ಸರ್ಕಾರ ಇದು. ಇಲ್ಲಿ ಸಿಎಂ ಮಾತಿಗೂ ಕಿಮ್ಮತ್ತಿಲ್ಲ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಭ್ರಷ್ಟಾಚಾರ ಪಿತಾಮಹ

“ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ‌ನಿಗಮದಲ್ಲಿ ರೂ. 85 ಕೋಟಿ ರೂಪಾಯಿ ಹಗರಣ ನಡೆದಿದೆ. ಒಬ್ಬ ಎಂಜಿನಿಯರ್ ಸುಸೈಡ್ ಮಾಡಿಕೊಂಡಿದ್ದಾನೆ. ಎಲ್ಲಿ ಹೋಯಿತು ಕಾಂಗ್ರೆಸ್‌ ಭ್ರಷ್ಟಾಚಾರ ತಡೆ ನಿಲುವು. ಭ್ರಷ್ಟಾಚಾರದ ಪಿತಾಮಹ ಯಾರೆಂದ್ರೆ ಅದು ಕಾಂಗ್ರೆಸ್. ಡೆತ್‌ನೋಟ್‌ನಲ್ಲಿ ಕೆಲ ಉನ್ನತ ಅಧಿಕಾರಿಗಳ ಹೆಸರು ಹೇಳಲಾಗಿದೆ. ಸರ್ಕಾರ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣ ತನಿಖೆಗೆ ಕೊಡಲಿ” ಎಂದು ಆಗ್ರಹಿಸಿದರು.

ಚನ್ನಗಿರಿ ಘಟನೆಗೆ ಸಂಬಂಧಿಸಿ ಹರಿಹಾಯ್ದ ಅವರು, “ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆಗುತ್ತಿದೆ. ಚನ್ನಗಿರಿಯಲ್ಲಿ ನಡೆದ ಘಟನೆ ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡೋ ಪರಿಸ್ಥಿತಿ ಬಂದಿದೆ. ಚನ್ನಗಿರಿಯಲ್ಲಿ ನಡೆದ ಘಟನೆ ಮಟ್ಕಾಗೆ ಸಂಬಂಧಪಟ್ಟಿದ್ದು. ಅರೆಸ್ಟ್ ಆದ ವ್ಯಕ್ತಿ ಮೃತನಾಗಿದ್ದಾನೆ. ಇದರ ಬೆನ್ನಲ್ಲೇ ಸಾವಿರಾರು ಜನ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಇದೆಲ್ಲ ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿಗೆ ಬಂದು ಮುಟ್ಟಿದೆ ಅನ್ನೊದು ತಿಳಿಯುತ್ತದೆ. ಈ ರಾಜ್ಯದಲ್ಲಿ ಗೃಹ ಸಚಿವರು ಇದ್ದಾರೆ ಅನ್ನುವ ಅನುಮಾನ ಮೂಡುತ್ತಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...