‘ಪ್ರತಿಯೊಬ್ಬ ಭಾರತೀಯರೂ ನಮ್ಮ ಮತಬ್ಯಾಂಕ್’; ಪ್ರಧಾನಿ ಮೋದಿಗೆ ಖರ್ಗೆ ಮತ್ತೊಂದು ಪತ್ರ

Date:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ‘ದ್ವೇಷದ ಭಾಷಣ ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರ ಮಾಡಿದ ಸಾಧನೆಯ ಬಗ್ಗೆ ಮತ ಕೇಳುವುದು ಉತ್ತಮ’ ಎಂದು ಮೋದಿಗೆ ತಾಕೀತು ಮಾಡಿದ್ದಾರೆ.

ಮೋದಿಗೆ  ಬರೆದ ಪತ್ರವನ್ನು ಟ್ವೀಟ್ ಮಾಡಿರುವ ಖರ್ಗೆ, “ಚುನಾವಣಾ ಪ್ರಚಾರದಲ್ಲಿ ಮೋದಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ನೀವು ಮತದಾರರಿಗೆ ಏನು ಹೇಳಲು ಹೊರಟಿದ್ದೀರಿ ಎಂಬುದರ ಬಗ್ಗೆ ಎನ್‌ಡಿಎ ಅಭ್ಯರ್ಥಿಗಳಿಗೆ ನೀವು ಬರೆದಿರುವ ಪತ್ರವನ್ನು ಮಗನಿಸಿದ್ದೇನೆ. ನಿಮ್ಮ ಪತ್ರವು ನಿಮ್ಮಲ್ಲಿ ಸಾಕಷ್ಟು ಹತಾಶೆ ಮತ್ತು ಚಿಂತೆ ಇದೆ ಎಂಬುದನ್ನು ಸೂಚಿಸುತ್ತದೆ” ಎಂದು ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಯಿಂದ ಮೀಸಲಾತಿಯನ್ನು ಕಿತ್ತು ‘ನಮ್ಮ ಮತಬ್ಯಾಂಕ್’ಗೆ ನೀಡಲಾಗುತ್ತದೆ ಎಂದು ನೀವು ಆರೋಪಿಸುತ್ತಿದ್ದೀರಿ. ನಮ್ಮ ಮತಬ್ಯಾಂಕ್ ಪ್ರತಿಯೊಬ್ಬ ಭಾರತೀಯ – ಬಡವರು, ಅಂಚಿನಲ್ಲಿರುವವರು, ಮಹಿಳೆಯರು, ಉದ್ಯೋಗಾಕಾಂಕ್ಷಿ ಯುವಜನರು, ಕಾರ್ಮಿಕ ವರ್ಗ, ದಲಿತರು – ನಮ್ಮ ಮತಬ್ಯಾಂಕ್. ಅಲ್ಲದೆ, 1947ರಿಂದ ಪ್ರತಿ ಹಂತದಲ್ಲೂ ಮೀಸಲಾತಿಯನ್ನು ವಿರೋಧಿಸಿದವರು ಆರ್‌ಎಸ್‌ಎಸ್ ಮತ್ತು ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

“ನಿಮ್ಮ ಅಭ್ಯರ್ಥಿಗಳು ಕೂಡ ನಿಮ್ಮ ಸುಳ್ಳನ್ನು ಪದೇ ಪದೇ ಪುನರುಚ್ಚಾರ ಮಾಡಬೇಕೆಂದು ನೀವು ಬಯಸುತ್ತೀರಿ. ಸುಳ್ಳನ್ನು ಸಾವಿರ ಬಾರಿ ಮತ್ತೆ ಮತ್ತೆ ಹೇಳುವುದರಿಂದ ಅದು ಸತ್ಯವಾಗುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.

“ಮತದಾರರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿದೆ ಮತ್ತು ಯಾವ ಭರವಸೆಗಳಿವೆ ಎಂಬುದನ್ನು ಸ್ವತಃ ಓದುವ ಮತ್ತು ಅರ್ಥಮಾಡಿಕೊಳ್ಳುವಷ್ಟು ಬುದ್ಧಿವಂತರಿದ್ದಾರೆ. ನಮ್ಮ ಪ್ರಣಾಳಿಕೆಯು ನ್ಯಾಯ ಮತ್ತು ಸಮಾಜದ ಎಲ್ಲ ವರ್ಗದ ಬೆಳವಣಿಗೆಯನ್ನು ಖಾತ್ರಿಪಡಿಸುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...