ಬಿಹಾರ ವಿಧಾನಸಭೆ | ನಮ್ಮಿಂದಾಗಿಯೇ ಕಾಂಗ್ರೆಸ್‌ಗೆ ಕೆಲವು ಸ್ಥಾನಗಳ ಗೆಲ್ಲಲು ಸಾಧ್ಯವಾಗಿದೆ: ಆರ್‌ಜೆಡಿ ಅಧ್ಯಕ್ಷ

Date:

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿಯಿಂದಾಗಿಯೇ ಕಾಂಗ್ರೆಸ್ ಕೆಲವು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ನಮ್ಮ ಬೆಂಬಲದಿದ್ದಾಗಿಯೇ ಕಾಂಗ್ರೆಸ್ ಗೆದ್ದಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯ ಅಧ್ಯಕ್ಷ ಮಂಗನಿ ಲಾಲ್ ಮಂಡಲ್ ಶನಿವಾರ ಹೇಳಿದ್ದಾರೆ.

ಡಿಸೆಂಬರ್ 1ರಿಂದ ಪ್ರಾರಂಭವಾಗುವ ಬಿಹಾರ ವಿಧಾನಸಭೆಯ ವಿಶೇಷ ಅಧಿವೇಶನಕ್ಕಾಗಿ ಕಾರ್ಯತಂತ್ರವನ್ನು ಚರ್ಚಿಸಲು ಪಟನಾದಲ್ಲಿ ಇಂಡಿಯಾ ಒಕ್ಕೂಟದ ಜಂಟಿ ಸಭೆ ನಡೆಯುವ ಕೆಲವೇ ಗಂಟೆಗಳ ಮುನ್ನ ಆರ್‌ಜೆಡಿ ನಾಯಕರು ಈ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ವಿಧಾನಸಭೆ ಚುನಾವಣೆ | ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿಯಾದ ತೇಜಸ್ವಿ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಲ್, “ಬಿಹಾರ ಕಾಂಗ್ರೆಸ್ ‘ವಿಭಿನ್ನ’ ಮಾರ್ಗವನ್ನು ಅಳವಡಿಸಿಕೊಳ್ಳಲು ಉದ್ದೇಶ ಹೊಂದಿದ್ದರೆ, ಮುಕ್ತವಾಗಿ ಬೇರೆ ಮಾರ್ಗ ಕಂಡಿಕೊಳ್ಳಬಹುದು. ಏಕಾಂಗಿಯಾಗಿ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಕಾಂಗ್ರೆಸ್‌ಗೆ ಅದರ ನಿಜವಾದ ಬಲ ತಿಳಿಯುತ್ತದೆ” ಎಂದು ಟೀಕಿಸಿದರು.

“ಆರ್‌ಜೆಡಿ ಬಿಹಾರದಲ್ಲಿ ಬಲವಾದ ಬೆಂಬಲ ನೆಲೆಯನ್ನು ಹೊಂದಿದೆ. ಅದು ಚುನಾವಣಾ ಫಲಿತಾಂಶಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ಆರ್‌ಜೆಡಿಯ ಮೈತ್ರಿಕೂಟದವರು ಇದರಿಂದಾಗಿಯೇ ಪ್ರಯೋಜನ ಪಡೆಯುತ್ತಾರೆ. ಹಿಂದಿನ 2020ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 71 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು ಮತ್ತು ಆರ್‌ಜೆಡಿಯ ನಿರಂತರ ಬೆಂಬಲದಿಂದಾಗಿ ಅದು ಕೇವಲ 19 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು” ಎಂದು ಹೇಳಿದರು.

ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕಾಂಗ್ರೆಸ್ 2025ರ ಚುನಾವಣೆಯಲ್ಲಿ ಕಳಪೆ ಪ್ರದರ್ಶನವನ್ನು ಪರಿಶೀಲಿಸಿದೆ. ಅದರಲ್ಲಿ ಕಾಂಗ್ರೆಸ್ ಸೋಲಿಗೆ ಆರ್‌ಜೆಡಿ ಕಾರಣ ಎಂದು ಆರೋಪಿಸಿದೆ ಎಂದೂ ಮಂಡಲ್ ದೂರಿದ್ದಾರೆ.

ಆದರೆ ಆರ್‌ಜೆಡಿ ರಾಜ್ಯ ಅಧ್ಯಕ್ಷರ ಹೇಳಿಕೆಯನ್ನು ತಳ್ಳಿಹಾಕಿದ ಕಾಂಗ್ರೆಸ್ ವಕ್ತಾರ ಅಸಿತ್‌ನಾಥ್ ತಿವಾರಿ, “ಬಿಹಾರದಲ್ಲಿ ಕಾಂಗ್ರೆಸ್ ಒಂದು ವ್ಯರ್ಥ ಶಕ್ತಿಯಾಗಿದ್ದರೆ ಆರ್‌ಜೆಡಿ ನಮ್ಮ ಅತಿ ಹಳೆಯ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಏಕೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ವಿಧಾನಸಭೆ ಚುನಾವಣೆ | ಮತ ಎಣಿಕೆ ಆರಂಭ; ಯಾರ ತೆಕ್ಕೆಗೆ ಅಧಿಕಾರ?

ಇನ್ನು ಕಾಂಗ್ರೆಸ್ ನಾಯಕ ಗ್ಯಾನ್ ರಂಜನ್, “ಮಂಡಲ್ ಏನನ್ನಾದರೂ ಹೇಳಬೇಕಾದರೆ ಅದನ್ನು ಮಾಧ್ಯಮಗಳ ಮುಂದೆ ಹೇಳುವುದಲ್ಲ. ಅದಕ್ಕೆ ಸರಿಯಾದ ವೇದಿಕೆಗಳಿವೆ. ಅಲ್ಲಿ ಮಾತನಾಡಬೇಕು. ಮಂಡಲ್ ತಮ್ಮ ಅನಿಸಿಕೆ, ಅಭಿಪ್ರಾಯ, ಭಾವನೆಗಳನ್ನು ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯ ಅಧ್ಯಕ್ಷ ಅಧ್ಯಕ್ಷ ತೇಜಸ್ವಿ ಪ್ರಸಾದ್ ಯಾದವ್ ಅವರಿಗೆ ತಿಳಿಸಬೇಕು” ಎಂದು ಅಭಿಪ್ರಾಯಿಸಿದರು.

ಇನ್ನು ಕಾಂಗ್ರೆಸ್ ಆರ್‌ಜೆಡಿಯೊಂದಿಗೆ ಬೇರ್ಪಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಸಂಸದ ಮತ್ತು ಮಾಜಿ ರಾಜ್ಯ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ನಿರ್ಧಾರವು ಸಂಪೂರ್ಣವಾಗಿ ಪಕ್ಷದ ಕೇಂದ್ರ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಹೇಳಿದರು.

2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ 61 ಸ್ಥಾನಗಳಲ್ಲಿ ಕೇವಲ ಆರು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ಆರ್‌ಜೆಡಿ 143 ಸ್ಥಾನಗಳಲ್ಲಿ ಸ್ಪರ್ಧಿಸಿ 25 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...