ಮಧ್ಯಪ್ರದೇಶ | ಹಿರಿಯ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್ ಹಾಗೂ ಪುತ್ರ ಬಿಜೆಪಿ ಸೇರುವ ಸಾಧ್ಯತೆ

Date:

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿ ಜೊತೆಗೆ ಕಾಂಗ್ರೆಸ್‌ ಪಕ್ಷಕ್ಕೆ ಒಂದೊಂದು ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಂಕಷ್ಟ ತಂದೊಡ್ಡುತ್ತಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಮಧ್ಯಪ್ರದೇಶದಲ್ಲೂ ಕೂಡ ಹೊಸ ಬೆಳವಣಿಗೆ ನಡೆಯುತ್ತಿದ್ದು, ಹಿರಿಯ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್ ಹಾಗೂ ಪುತ್ರ ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಿಷ್ಠಾವಂತ ನಾಯಕ ಕಮಲ್‌ನಾಥ್ ಪುತ್ರ ಸಂಸದ ನಕುಲ್ ಕಮಲ್ ನಾಥ್ ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ. ಬಿಜೆಪಿಯ ಮುಖಂಡರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂದ್ವಾರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದನಾಗಿರುವ ನಕುಲ್ ಕಮಲ್ ನಾಥ್ ಇದೀಗ ಬಿಜೆಪಿ ಸೇರಲು ಆಸಕ್ತಿ ತೋರಿರುವುದಾಗಿ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ನಕುಲ್ ಕಮಲ್ ನಾಥ್ ಸಾಮಾಜಿಕ ಮಾಧ್ಯಮಗಳ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆ, ಹೆಸರು ಮಾಯವಾಗಿದೆ. ಚಿಂದ್ವಾರ ಸಂಸದ ಅನ್ನುವ ಮಾಹಿತಿ ಮಾತ್ರ ಹಾಕಿದ್ದಾರೆ.

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ ಮಧ್ಯಪ್ರದೇಶ ಪ್ರವೇಶ ಪಡೆಯುತ್ತಿದ್ದಂತೆ ನಕುಲ್ ಕಮಲ್ ನಾಥ್ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಆ ಮೂಲಕ ಕಾಂಗ್ರೆಸ್‌ಗೆ ಶಾಕ್ ನೀಡಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಮಲ್‌ನಾಥ್ ಸಂಪರ್ಕಿಸದೆ ಗ್ವಾಲಿಯರ್ ಚಂಪಾಲ್ ನಾಯಕ ಅಶೋಕ್ ಸಿಂಗ್‌ಗೆ ಟಿಕೆಟ್ ನೀಡಿದ್ದಾರೆ. ಇದರಿಂದ ಕಮಲನಾಥ್ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಕಮಲ್ ನಾಥ್ ಕೂಡ ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಸೇರುವ ಊಹಾಪೋಹಗಳ ನಡುವೆ ಕಮಲ್‌ನಾಥ್ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನೀವು(ಮಾಧ್ಯಮದವರು) ಯಾಕೆ ಇಷ್ಟೊಂದು ಭಾವೋದ್ವೇಗಕ್ಕೆ ಒಳಗಾಗುತ್ತೀರಾ? ಒಂದು ವೇಳೆ ಅಂಥದ್ದೇನಾದರೂ ಇದ್ದರೆ ಮೊದಲು ನಾನೇ ನಿಮಗೆ ಹೇಳುತ್ತೇನ” ಎಂದು ಹೇಳಿದ್ದಾರೆ.

ಈ ನಡುವೆ ಮಧ್ಯಪ್ರದೇಶದ ಬಿಜೆಪಿ ಮುಖಂಡ ನರೇಂದ್ರ ಸಲುಜಾ ಟ್ವಿಟರ್‌ನಲ್ಲಿ ಕಮಲ್‌ನಾಥ್ ಹಾಗೂ ನಕುಲ್ ಕಮಲ್‌ನಾಥ್ ಅವರ ಫೋಟೋ ಹಂಚಿಕೊಂಡು, ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಧ್ಯಪ್ರದೇಶದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆದ್ದಿತ್ತು. ಛಿಂದವಾಡ ಕ್ಷೇತ್ರದಿಂದ ಪ್ರಭಾವ ಬೀರಿದ್ದ ನಕುಲ್ ಅವರು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದಾರೆ.

ಕಮಲ ನಾಥ್ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು “ನಾನು ನಿನ್ನೆ ರಾತ್ರಿ 10.30 ಕ್ಕೆ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದೇನೆ, ಅವರು ಭಿಂದ್ವಾರಾದಲ್ಲಿದ್ದಾರೆ. ಗಾಂಧಿ ನೆಹರೂ ಕುಟುಂಬಕ್ಕೆ ನಿಷ್ಠೆ ಹೊಂದಿರುವ ಅವರು ಪಕ್ಷ ತೊರೆಯುವುದಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...