ಪಾದಯಾತ್ರೆಯಲ್ಲಿ ಕಾಣದ ಮಾಜಿ ಸಂಸದೆ ಸುಮಲತಾ, ಅಭಿಮಾನಿಗಳಲ್ಲಿ ಅಸಮಾಧಾನ

Date:

“ಬಿಜೆಪಿಗೆ ಸೇರಿದ್ದು ನನ್ನ ಜೀವನದಲ್ಲೇ ಮಹತ್ವದ ಸುದಿನ” ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಈಗ ಬಿಜೆಪಿ ಮುಂದಾಳತ್ವದಲ್ಲಿ ತಮ್ಮ ಭಾಗದಲ್ಲೇ ‘ಮೈಸೂರು ಚಲೋ‘ ಪಾದಯಾತ್ರೆ ಹಾದುಹೋಗುತ್ತಿದ್ದರೂ ಎಲ್ಲೂ ಕಾಣಿಸಿಕೊಳ್ಳದಿರುವುದು ನಾನಾ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಖಂಡಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ
ಬಿಜೆಪಿ-ಜೆಡಿಎಸ್‌ ಜಂಟಿಯಾಗಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಸುಮಲತಾ ಅಂಬರೀಶ್‌ ಅವರ ಗೈರು, ಎಚ್‌ ಡಿ ಕುಮಾರಸ್ವಾಮಿ ಕಾರಣಕ್ಕೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಸೈಡ್‌ ಲೈನ್‌ ಮಾಡುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಮುಂಗಾರು ಅಧಿವೇಶನದ ಕೊನೆ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಅವರು ಜಂಟಿಯಾಗಿ ಮೈಸೂರು ಚಲೋ ಪಾದಾಯತ್ರೆ ಘೋಷಿಸುತ್ತಿದ್ದಂತೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲವೆಂದು ನೇರವಾಗಿ ಘೋಷಿಸಿದ್ದರು.

ಕುಮಾರಸ್ವಾಮಿ ಮಾತು ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಎದ್ನೋ ಬಿದ್ನೋ ಅಂತ ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಪಾದಯಾತ್ರೆಗೆ ಬರುವಂತೆ ಮನವೊಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ಕೆಲವು ಷರತ್ತುಗಳೊಂದಿಗೆ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದವು. “ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಲು ಕಾರಣ ಪ್ರೀತಂಗೌಡ. ದೇವೇಗೌಡರ ಕುಟುಂಬಕ್ಕೆ ವಿಷವಿಟ್ಟವರ ಜೊತೆ ನಾನು ವೇದಿಕೆ ಹಂಚಿಕೊಳ್ಳಲಾರೆ” ಎಂದು ನೇರವಾಗಿ ದೆಹಲಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು. ಆದರೆ, ಪಾದಯಾತ್ರೆ ಉದ್ಘಾಟನೆಗೆ ಬಂದು ಭಾರೀ ಭಾಷಣ ಮಾಡಿದ್ದರು. ಆದರೆ, ವೇದಿಕೆಗಳಲ್ಲಿ ಎಲ್ಲೂ ಪ್ರೀತಂಗೌಡ ಕಾಣಿಸಿಕೊಂಡಿಲ್ಲ. ಐದನೇ ದಿನಾವಾದ ಇಂದೂ ಪ್ರೀತಂ ಕಾಣಿಸಿಕೊಂಡಿಲ್ಲ.

ಈಗ ಸುಮಲತಾ ಅಂಬರೀಶ್‌ ಕೂಡ ಪಾದಯಾತ್ರೆಯಿಂದ ದೂರ ಉಳಿದಿದ್ದಾರೋ ಅಥವಾ ದೂರ ಉಳಿಸಿದ್ದಾರೋ ಗೊತ್ತಿಲ್ಲ. ಆದರೆ, ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಹಾಕಿದ ಷರತ್ತುಗಳಲ್ಲಿ ಸುಮಲತಾ ಕೂಡ ಭಾಗಿಯಾಗಬಾರದು ಎಂಬ ಷರತ್ತು ವಿಧಿಸಿದ್ದಾರೆ ಎಂಬ ಮಾತುಗಳು ಪಾದಯಾತ್ರೆಯಲ್ಲಿ ಭಾಗವಹಿಸಿರುವ ಜನರು ಆಡಿಕೊಳ್ಳುತ್ತಿದ್ದಾರೆ.

ಹಳೆಯ ದ್ವೇಷ ಸಾಧನೆಗೆ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಟಿಕೆಟ್‌ ಅನ್ನು ಸುಮಲತಾ ಅವರಿಗೆ ಕುಮಾರಸ್ವಾಮಿ ಕೈ ತಪ್ಪಿಸಿ, ತಾವೇ ಅಭ್ಯರ್ಥಿಯಾಗಿದ್ದು ಜನರಿಗೆ ಗೊತ್ತಿರುವ ವಿಚಾರ. ಸುಮಲತಾ ಬಿಜೆಪಿ ಸೇರಿದ್ದರೂ ಎಲ್ಲೂ ಕೂಡ ಕುಮಾರಸ್ವಾಮಿಗೆ ನನ್ನ ಬೆಂಬಲ ಇದೆ ಎಂದು ಹೇಳಿಕೊಂಡಿಲ್ಲ. ಜೊತೆಗೆ ಪ್ರಚಾರದಲ್ಲಿ ಎಲ್ಲೂ ಕಾಣಿಸಲಿಲ್ಲ.

ಹೀಗಾಗಿಯೆ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಮಲತಾ ಭಾಗಿಯಾಗಬಾರದು ಎಂಬ ಷರತ್ತನ್ನು ಕುಮಾರಸ್ವಾಮಿ ವಿಧಿಸಿರಬಹುದಾ? ಎನ್ನುವ ಅನುಮಾನದ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಮುಖಂಡರು ಇರುವ ಬ್ಯಾನರ್‌ನಲ್ಲೂ ಕೂಡ ಸುಮಲತಾ ಅಂಬರೀಶ್ ಫೋಟೋ ಬಳಕೆಯಾಗಿಲ್ಲ.

ಪಾದಯಾತ್ರೆ ವೇಳೆ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸೋಮಶೇಖರ್ ಬೇಲೂರು ಈ ದಿನ.ಕಾಮ್‌ ಜೊತೆ ಮಾತನಾಡುತ್ತ, “ಸುಮಲತಾ ಅಂಬರೀಶ್ ಬ್ಯಾನರ್‌ನಲ್ಲಿ ಇಲ್ಲದಿರಬಹುದು. ಆದರೆ ಅವರು ಜನರ ಮನಸ್ಸಿನಲ್ಲಿದ್ದಾರೆ. ಬಿಜೆಪಿಯವರು ಅಂಬರೀಶ್ ಅಭಿಮಾನಿಗಳನ್ನು ಕೂಡ ಪಾದಯಾತ್ರೆಗೆ ಆಹ್ವಾನಿಸಿಲ್ಲ. ಬಿಜೆಪಿ ಜೊತೆ ನಿಜಕ್ಕೂ ಸುಮಲತಾ ಇದ್ದಾರೆಯೇ ಎನ್ನುವ ಅನುಮಾನ ನಮಗೆ ಕಾಡುತ್ತಿದೆ”‌ ಎಂದರು.

ಮುಂದುವರಿದು, “ಪಾದಯಾತ್ರೆಗೆ ಮಂಡ್ಯದಲ್ಲೂ ಸುಮಲತ ಅಂಬರೀಶ್ ಭಾಗಿಯಾಗುವುದು ಅನುಮಾನವಿದೆ. ನಮ್ಮ ನಾಯಕರನ್ನು ಹೀಗೆ ಸೈಡ್‌ ಲೈನ್‌ ಮಾಡುವುದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ” ಎಂದು ಬಿಜೆಪಿ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...