ಮಾಜಿ ಸ್ಪೀಕರ್ ಆಪ್ತ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆ ಸಿಬಿಐಗೆ

Date:

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೀಡಿದೆ.

ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರ ಆಪ್ತರಾಗಿದ್ದ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದರು.

ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಹೈಕೋರ್ಟ್​ಗೆ ಮನವಿ ಮಾಡಿದ್ದರು. ಇದೀಗ ಚಂದ್ರಕಲಾ ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಪ್ರಕರಣವನ್ನು ಸಿಬಿಐಗೆ ವಹಿಸಿ, ಸೋಮವಾರ (ಮಾ.17) ಮಹತ್ವದ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದೆಯಾ? ಪರಿಚಯಸ್ಥರು ಕೊಲೆ ಮಅಡಿಸಿದ್ದಾರಾ? ಅಥವಾ ರಾಜಕೀಯ ದ್ವೇಷ ಅಡಗಿದೆಯಾ ಎಂಬುದು ಅನುಮಾನವಿದೆ. ಸ್ಥಳೀಯ ಪೊಲೀಸರು ಹಾಗೂ ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ಸಿಬಿಐ ತನಿಖೆ ಅನಿವಾರ್ಯವೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಮೂರು ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ. ಇನ್ನು ಸಿಬಿಐ ತನಿಖೆಗೆ ಸಹಕರಿಸುವಂತೆ ಪೊಲೀಸರಿಗೂ ಸಹ ಕೋರ್ಟ್​ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...