ಚುನಾವಣಾ ಬಾಂಡ್ | ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಂಧನಕ್ಕೆ ಎಎಪಿ ಅಗ್ರಹ

Date:

ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು ಬಹಿರಂಗಗೊಂಡಿದೆ. ಹೀಗಾಗಿ, ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕು. ಅವರ ಹಣ ಪಡೆದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಬಂಧಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಒತ್ತಾಯಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದತೆ, ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನೇಕ ಇಡಿ ದಾಳಿಗಳು ಮತ್ತು ಎರಡು ವರ್ಷಗಳ ಸುದೀರ್ಘ ತನಿಖೆ ಹೊರತಾಗಿಯೂ ಯಾವುದೇ ಎಎಪಿ ನಾಯಕರ ಬಳಿಯಾಗಲಿ, ಕಾರ್ಯಕರ್ತರ ಬಳಿಯಾಗಲಿ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ತಪ್ಪಿತಸ್ಥರು ಎನ್ನಲು ಅವರ ಬಳಿ ಪುರಾವೆಗಳೂ ಇಲ್ಲ. ನಡೆದಿರದ ಭ್ರಷ್ಟಾಚಾರವನ್ನು ನಡೆದಿದೆ ಎಂದು ಸುಳ್ಳಾಗಿ ಬಿಂಬಿಸಿ ಎದುರಾಳಿಯಾಗಿ ನಿಂತಿರುವ ಕೇಜ್ರಿವಾಲ್ ಅವರನ್ನು ಹತ್ತಿಕ್ಕುವ ಪ್ರಯತ್ನವನ್ನು ನರೇಂದ್ರ ಮೋದಿ ನಡೆಸುತ್ತಿದ್ದಾರೆ” ಎಂದರು.

“ಶರತ್ ಚಂದ್ರ ರೆಡ್ಡಿ ಅವರಿಗೆ 2022ರ ನವೆಂಬರ್ 9ರಂದು ಸಮನ್ಸ್ ನೀಡಲಾಯಿತು. ವಿಚಾರಣೆ ವೇಳೆ ಅವರು, ತಾವು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿಲ್ಲ ಅಥವಾ ಮಾತನಾಡಿಲ್ಲ ಮತ್ತು ಎಎಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ಅದಾದ ಮರುದಿನವೇ ಇಡಿ ಅವರನ್ನು ಬಂಧಿಸಿತು. ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳುವಂತೆ ಹೆದರಿಸಿತು. ಚುನಾವಣೆ ಬಾಂಡ್ ಹೆಸರಲ್ಲಿ ದೇಣಿಗೆ ಕೊಡುವಂತೆಯೂ ಬೆದರಿಸಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈವರೆಗೂ ಜೈಲಿನಲ್ಲಿದ್ದ ರೆಡ್ಡಿ ಅವರು ಇದೀಗ ತಮ್ಮ ಹೇಳಿಕೆ ಬದಲಾಯಿಸಿಕೊಂಡರು. ತಮ್ಮ ಫಾರ್ಮಾ ಕಂಪನಿ ಮೂಲಕ ಕೋಟಿ ಕೋಟಿ ದೇಣಿಗೆ ನೀಡಿದರು. ನಂತರ ಅಬಕಾರಿ ನೀತಿ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ ಎಂದರು. ಅವರು ಹಾಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ ತಕ್ಷಣವೇ ಬೆನ್ನು ನೋವಿನ ನೆಪದಲ್ಲಿ ಅವರಿಗೆ ಜಾಮೀನು ಕೊಡಲಾಗಿದೆ. ಪ್ರಮುಖ ಆರೋಪಿಯೊಬ್ಬರಿಗೆ ಬೆನ್ನು ನೋವಿನ ಕಾರಣಕ್ಕೆ ಜಾಮೀನು ನೀಡಿದ ಬೇರೆ ಉದಾಹರಣೆ ಇದೆಯೇ? ಏನೂ ತಪ್ಪೆಸಗದ ನಮ್ಮ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಹಾಗೂ ಸತ್ಯೇಂದ್ರ ಜೈನ್ ಅವರನ್ನು ಜೈಲಿನಲ್ಲಿ ಇರಿಸಿಕೊಳ್ಳಲಾಗಿದೆ. ಇದು ಕುತಂತ್ರ ರಾಜಕಾರಣವಲ್ಲದೆ ಬೇರೇನು?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

“ಹೈದರಾಬಾದ್ ಮೂಲದ ಉದ್ಯಮಿ ಪಿ.ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. 2022ರ ನವೆಂಬರ್ 10ರಂದು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತು. ಬಳಿಕ ನವೆಂಬರ್ 15ರಂದು ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿ ₹5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ನೀಡಿದೆ. ನವೆಂಬರ್ 21ರಂದು ಅವುಗಳನ್ನು ಬಿಜೆಪಿ ನಗದಾಗಿ ಪರಿವರ್ತಿಸಿಕೊಂಡಿದೆ” ಎಂದು ತಿಳಿಸಿದರು.

“ಅರಬಿಂದೋ ಫಾರ್ಮಾ ಒಟ್ಟು ₹52 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, ಅದರಲ್ಲಿ ₹34.5 ಕೋಟಿ ಬಿಜೆಪಿ ಪಾಲಾಗಿದೆ. ಭಾರತ್ ರಾಷ್ಟ್ರ ಸಮಿತಿಗೆ ₹15 ಕೋಟಿ ಹಾಗೂ ತೆಲುಗು ದೇಶಂ ಪಕ್ಷಕ್ಕೆ ₹2.5 ಕೋಟಿ ದೇಣಿಗೆ ನೀಡಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...