EXCLUSIVE | ವಿ.ಸೋಮಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ? ಪ್ರಭಾವಿ ಮಠಾಧೀಶರೊಂದಿಗೆ ಪ್ರಸ್ತಾಪ

Date:

ಪ್ರಭಾವಿ ಸ್ವಾಮೀಜಿಯೊಬ್ಬರ ಬಳಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕುರಿತು ನಡೆಸಿರುವ ಚರ್ಚೆ ಬಿಜೆಪಿಯಲ್ಲಿನ ರಾಜಕೀಯ ಚಟುವಟಿಕೆಗಳನ್ನು ಮತ್ತೆ ಗರಿಗೆದರಿಸಿವೆ. ವಿಜಯೇಂದ್ರ ಸ್ಥಾನ ಉಳಿಸಿಕೊಳ್ಳಬಲ್ಲರೇ? ಸೋಮಣ್ಣ ಅವರ ಮುಖ್ಯಮಂತ್ರಿ ಕನಸಿನ ಹೊಸ ರಾಜಕೀಯ ಅಧ್ಯಾಯ ಆರಂಭವಾಗುತ್ತದೆಯೇ?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ ವೈ ವಿಜಯೇಂದ್ರ ಬದಲಾವಣೆ ಸನ್ನಿಹಿತವಾದಂತಿದೆ. ಲಿಂಗಾಯತ ಸಮುದಾಯ ಹಿರಿಯ ನಾಯಕ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದ ಪ್ರಭಾವಿ ಮಠಾಧೀಶರೊಂದಿಗೆ ಸೋಮಣ್ಣ ಖುದ್ದು ಈ ಮಾಹಿತಿ ಹಂಚಿಕೊಂಡಿದ್ದಾರೆಂದು ಆಪ್ತ ಮೂಲಗಳು ಈ ದಿನ.ಕಾಮ್‌ಗೆ ದೃಢಪಡಿಸಿವೆ. “ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಲಿದ್ದೇನೆ. ವಿಜಯೇಂದ್ರ ಅವರ ಸೋದರ ಮತ್ತು ಸಂಸದ ಬಿ ವೈ ರಾಘವೇಂದ್ರ ಕೇಂದ್ರ ಸಚಿವರಾಗಲಿದ್ದಾರೆ” ಎಂದು ಸೋಮಣ್ಣ ಸ್ವಾಮೀಜಿ ಬಳಿ ಹೇಳಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲ ಪಕ್ಷದಲ್ಲಿ ಈವರೆಗೂ ಬಗೆಹರಿದಿಲ್ಲ. ರಾಜ್ಯಾಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಲು ಸಾಕಷ್ಟು ಶ್ರಮಿಸಿ, ದೆಹಲಿ ವರಿಷ್ಠರ ಬಾಗಿಲುಗಳ ಬಡಿದು ಸುತ್ತಾಡಿ ಸುಸ್ತಾಗಿರುವ ಬಿ ವೈ ವಿಜಯೇಂದ್ರ ಕೆಲವು ತಿಂಗಳಿಂದ ಮೌನ ವಹಿಸಿರುವುದನ್ನು ಗಮನಿಸಬಹುದು. ಕಬ್ಬು ಹೋರಾಟಗಾರ ವೇದಿಕೆ ವಿನಾ ಅವರು ಇತ್ತೀಚೆಗೆ ಹೆಚ್ಚು ಕಾಣಿಸಿಕೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಜಾತಿ ಸಮೀಕರಣದ ಆಧಾರದ ಮೇಲೆ ಲಿಂಗಾಯತ ಸಮದಾಯದ ಬಸವರಾಜ ಬೊಮ್ಮಾಯಿ ಹೆಸರು ಸಹ ಬಲವಾಗಿ ಕೇಳಿಬರುತ್ತಿದೆ. ಜೊತೆಗೆ ಒಬಿಸಿ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಗಳು ಸಹ ಇವೆ. ಒಬಿಸಿಯಿಂದ ಸುನೀಲ್ ಕುಮಾರ್ ಹೆಸರು ಕೇಳಿಬರುತ್ತಿದೆ. ಒಂದು ವೇಳೆ ಸುನೀಲ್‌ ಕುಮಾರ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರೆ, ಅಶೋಕ್ ಸ್ಥಾನಕ್ಕೆ ಕಂಟಕ ಬರಲಿದೆ. ವಿರೋಧ ಪಕ್ಷದ ನಾಯಕನ ಸ್ಥಾನ ಲಿಂಗಾಯತ ಸಮುದಾಯದ ಪಾಲಾಗಲಿದೆ.‌ ಜಾತಿ ಸಮೀಕರಣದ ಸಂದರ್ಭದಲ್ಲಿ ಅಶೋಕ್ ಸ್ಥಾನ ಭದ್ರವಾಗಿಲ್ಲ ಎನ್ನುವುದು ಪಕ್ಷದೊಳಗಿನ ಮಾತು.

ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೋ? ಅಥವಾ ಬೇರೆಯವರ ನೇಮಕ ಆಗುತ್ತದೆಯೋ ಎಂಬ ಚರ್ಚೆ ರಾಜ್ಯ ಬಿಜೆಪಿಯಲ್ಲಿ ಜೀವಂತವಾಗಿದೆ. ಈ ನಡುವೆ ಪಕ್ಷದ ಹೈಕಮಾಂಡ್‌ನೊಳಗೆ ಮುಚ್ಚಿದ ಲಕೋಟೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಹೆಸರು ಅಂತಿಮಗೊಂಡಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ ಎಂಬ ಯೋಚನೆ ದೆಹಲಿ ನಾಯಕರಲ್ಲಿದೆ. ಜೊತೆಗೆ ಯತ್ನಾಳ್ ಹಾಗೂ ಬಿಜೆಪಿ ತಟಸ್ಥ ಬಣವನ್ನೂ ವಿಶ್ವಾಸಕ್ಕೆ ತೆಗೆದುಕೊಂಡಂತೆಯೂ ಆಗುತ್ತದೆ ಎಂಬ ಲೆಕ್ಕಾಚಾರ ಬಿಜೆಪಿ ಹೈಕಮಾಂಡ್‌ನದು ಎನ್ನಲಾಗಿದೆ.

ಒಕ್ಕಲಿಗ ಸಮುದಾಯಕ್ಕೆ ಹೇಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಆರ್‌ ಅಶೋಕ್‌ಗೆ ನೀಡಲಾಗಿದೆ. ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನವನ್ನು ದಲಿತ ಸಮುದಾಯದ ಛಲವಾದಿ ನಾರಾಯಣಸ್ವಾಮಿಗೆ ನೀಡಲಾಗಿದೆ. ಈಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಲ್ಲೇ ಉಳಿಸಿಕೊಂಡು, ವಿ ಸೋಮಣ್ಣ ಅವರಿಗೆ ಒಪ್ಪಿಸಿದರೆ ಪಕ್ಷದೊಳಗಿನ ಅಸಮಾಧಾನ ಬಹುತೇಕ ಅಸಮಾಧಾನ ತಣಿಯುತ್ತದೆ. ಜೊತೆಗೆ ಜಿಬಿಎ ಚುನಾವಣೆ ಗೆಲ್ಲಲು ಕೂಡ ಸಹಾಯಕವಾಗುತ್ತದೆ ಎಂಬುದು ವರಿಷ್ಠರ ಲೆಕ್ಕಾಚಾರ. ಬಿಬಿಎಂಪಿ ಚುನಾವಣೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸೋಮಣ್ಣ ಅವರಿಗೆ ಪ್ರಮುಖ ಪಾತ್ರ ನೀಡುವ ಉದ್ದೇಶವನ್ನು ಕಾಣಲಾಗಿದೆ.

ತಾವು ರಾಜ್ಯಾಧ್ಯಕ್ಷರಾದರೆ ಸಮೃದ್ಧ ರಾಜಕೀಯ ಅನುಭವದ ಜೊತೆಗೆ ಹೇರಳ ಹಣಬಲವನ್ನೂ ಹೊಂದಿದ್ದು 2028ರ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು. ಚುನಾವಣೆಯಲ್ಲಿ ಯಶಸ್ಸು ಕಂಡರೆ ಸಿಎಂ ಸ್ಥಾನಕ್ಕೆ ಪ್ರಬಲ ದಾವೆ ಹೂಡಬಹುದು. ಇದೇ ಕಾರಣಕ್ಕೆ ಕೇಂದ್ರ ಮಂತ್ರಿ ಸ್ಥಾನ ಬಿಟ್ಟು ಕೊಡಲು ಸೋಮಣ್ಣ ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದೆ.

V Somanna 3

ರಾಜ್ಯದ ಲಿಂಗಾಯತರ ಪ್ರಶ್ನಾತೀತ ನಾಯಕನೆಂದು ಗುರುತಿಸಿಕೊಂಡಿರುವ ಬಿ ಎಸ್‌ ಯಡಿಯೂರಪ್ಪ ಅವರ ಕುಟುಂಬವನ್ನು ನೇರವಾಗಿ ಟೀಕಿಸಿದ ಮೊದಲಿಗರಲ್ಲಿ ಸೋಮಣ್ಣ ಕೂಡ ಒಬ್ಬರು. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ವರುಣಾ ಕ್ಷೇತ್ರಕ್ಕೆ ಮತ್ತು ಸ್ವಕ್ಷೇತ್ರ ಗೋವಿಂದರಾಜ ನಗರ ಬಿಟ್ಟು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಉಭಯ ಕ್ಷೇತ್ರಗಳಲ್ಲೂ ಸೋಮಣ್ಣ ಸೋಲು ಕಂಡಿದ್ದರು. ಆ ಸೋಲಿಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೇ ಕಾರಣ ಎಂದು ನೇರವಾಗಿ ಆರೋಪಿಸಿ ಬಿಸಿ ಸುದ್ದಿಯಾಗಿದ್ದರು.

ಎರಡೂ ಕ್ಷೇತ್ರಗಳಲ್ಲಿ ಸೋತು ರಾಜಕೀಯವಾಗಿ ಅತಂತ್ರವಾಗಿದ್ದ ಸೋಮಣ್ಣ ಅವರು ‘ತ್ಯಾಗ’ ಮಾಡಿದ್ದರ ಪ್ರತಿಫಲವಾಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ತನಗಾದ ನಷ್ಟವನ್ನು ತುಂಬಿಕೊಡಬೇಕು ಎಂದು ಪಕ್ಷದ ಹೈಕಮಾಂಡ್‌ ಬಳಿ ಪಟ್ಟುಹಿಡಿದಿದ್ದರು. ಆ ಹಿನ್ನೆಲೆಯಲ್ಲೇ ವಿಧಾನಸಭಾ ಚುನಾವಣೆಯಲ್ಲಿ ಸೋತ ಮೇಲೆ ‘ನನಗೆ ರಾಜ್ಯಾಧ್ಯಕ್ಷ ಸ್ಥಾನ ನಿರಾಕರಿಸಿದರೆ ಬೆಂಬಲಿಗರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ತಿಳಿಸುವೆʼ ಮತ್ತು ‘ನನಗೆ 100 ದಿನ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕೊಡಿ, ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವೆ’ ಹಾಗೂ ‘ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ ಅದರ ಮಜವೇ ಬೇರೆ ಇರುತ್ತೆ. ನನ್ನ ಅನುಭವ ಬಳಸಿಕೊಳ್ಳುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟಿದ್ದು’ ಎಂದು ಯಡಿಯೂರಪ್ಪ ಕುಟುಂಬಕ್ಕೆ ಸೋಮಣ್ಣ ಬಹಿರಂಗ ಸವಾಲು ಹಾಕಿದಂತಹ ಹೇಳಿಕೆಗಳನ್ನು ಇಲ್ಲಿ ಗಮನಿಸಬಹುದು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕ್ಷಾಂಕ್ಷಿ ತಾವು ಎಂಬುದು ಅವರ ಈ ಎಲ್ಲ ಹೇಳಿಕೆಗಳ ಕೇಂದ್ರಬಿಂದು ಆಗಿದ್ದವು. ಆದರೂ ಅವರ ನಿರೀಕ್ಷೆ ನೆರವೇರುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಡಿಯೂರಪ್ಪನವರ ಮಗ ಬಿ ವೈ ವಿಜಯೇಂದ್ರ ಪಾಲಾಗುತ್ತದೆ. ಬಳಿಕ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಂತೆ ಮಾತು ಆರಂಭಿಸಿದ ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟರು. ಕೊನೆಗೆ ಸಿದ್ದಗಂಗಾ ಮಠದ ಆಶೀರ್ವಾದದೊಂದಿಗೆ ಟಿಕೆಟ್‌ ಪಡೆದು ಆರಿಸಿ ಬಂದರು. ಮೋದಿ ಮಂತ್ರಿಮಂಡಲದಲ್ಲಿ ಸ್ಥಾನವನ್ನೂ ಗಿಟ್ಟಿಸಿಕೊಂಡರು. ಅರ್ಥಾತ್ ‘ದೆಹಲಿಯ ಕಣ್ಣು ಕಿವಿ’ಗಳಿಗೆ ಹೆಚ್ಚು ಸಮೀಪವಾದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಜನ ಗಣ ಮನ’ಕ್ಕೆ ಬಿಜೆಪಿ ತಿರಸ್ಕಾರ; ರವೀಂದ್ರನಾಥ ಟ್ಯಾಗೋರ್‌ಗೆ ಅಪಚಾರ!

ವಿಜಯೇಂದ್ರ ಅವರಿಗೆ ಈಗಾಗಲೇ ಒಂದು ಅವಕಾಶ ನೀಡಲಾಗಿದೆ. ಅವರು ಆ ಸ್ಥಾನದಲ್ಲಿ ಅತ್ಯಂತ ಯಶಸ್ವಿ ನಾಯಕರಾಗಿ ಹೊರಹೊಮ್ಮಿಲ್ಲ ಎಂಬ ಮಾತುಗಳು ಪಕ್ಷದ ಪಡಸಾಲೆಯಲ್ಲಿ ಕೇಳಿಬರುತ್ತಿವೆ. ಅಲ್ಲದೆ, ಪಕ್ಷದ ಒಂದು ಗುಂಪಿನ ಬಲವಾದ ವಿರೋಧದ ಹಿನ್ನೆಲೆಯಲ್ಲಿ ಸತತ ಎರಡನೇ ಬಾರಿಗೆ ಅವರ ಆಯ್ಕೆ ಕಷ್ಟ ಸಾಧ್ಯ ಎನ್ನಲಾಗುತ್ತಿದೆ.

ವಿಜಯೇಂದ್ರ ನೇಮಕಕ್ಕೆ ಯತ್ನಾಳ್ ಆರಂಭದಲ್ಲೇ ಬಹಿರಂಗ ವಿರೋಧ ವ್ಯಕ್ತಪಡಿಸಿದ್ದರು. ಹಲವು ಮುಖಂಡರು ಬಹಿರಂಗವಾಗಿ ಅಲ್ಲದಿದ್ದರೂ, ವಿಜಯೇಂದ್ರ ನೇಮಕವನ್ನು ಆಂತರಿಕವಾಗಿ ವಿರೋಧಿಸುತ್ತಲೇ ಇದ್ದಾರೆ. ಯಡಿಯೂರಪ್ಪ ಕುಟುಂಬ ರಾಜಕಾರಣದ ವಿರುದ್ದ ಯತ್ನಾಳ್‌ ಸಾಕಷ್ಟು ಟೀಕೆಗಳನ್ನು ಮಾಡಿ ಕೊನೆಗೆ ಪಕ್ಷದಿಂದಲೇ ಹೊರಹಾಕಿಸಿಕೊಂಡರು. ಬೆಳಗಾವಿಯ ಪ್ರಭಾವಿ ಕುಳ ರಮೇಶ್‌ ಜಾರಕಿಹೊಳಿ ಕೂಡ ವಿಜಯೇಂದ್ರ ವಿರುದ್ಧ ತಿರುಗಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಡಿ ಸುಧಾಕರ್‌, ವಿಜಯೇಂದ್ರ ಹಸ್ತಕ್ಷೇಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ಆಂತರಿಕ-ಬಾಹ್ಯ ವಿರೋಧವನ್ನು ಹೈಕಮಾಂಡ್‌ ಸೂಕ್ಷ್ಮವಾಗಿ ಗಮನಿಸುತ್ತ ಬಂದಿದೆ. ಲಿಂಗಾಯತ ಸಮುದಾಯವನ್ನು ದೂರ ಮಾಡಿಕೊಂಡರೆ ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವವೇ ಇರುವುದಿಲ್ಲ ಎಂಬುದನ್ನು ಈಗಾಗಲೆ ಮನಗಂಡಿದೆ. ರಾಜ್ಯಾಧ್ಯಕ್ಷ ಹುದ್ದೆಯನ್ನು ಮತ್ತೊಮ್ಮೆ ಲಿಂಗಾಯತ ಸಮುದಾಯದ ಕೈಗೇ ಒಪ್ಪಿಸುವ ಆಲೋಚನೆಯಲ್ಲಿದ್ದಾರೆ. ಪಕ್ಷವನ್ನು ಯಡಿಯೂರಪ್ಪ ಕುಟುಂಬದ ಹಿಡಿತದಿಂದ ಬಿಡಿಸಿಕೊಳ್ಳಲು ವಿ ಸೋಮಣ್ಣ ಪರ್ಯಾಯ ದಾರಿಯಾಗಿ ದೆಹಲಿ ವರಿಷ್ಠರಿಗೆ ಕಂಡಿರುವ ಸಾಧ್ಯತೆ ಹೆಚ್ಚಿದೆ.

1983ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಗೆ ಕಾರ್ಪೊರೇಟರ್ ಆಗಿ ಆಯ್ಕೆಯಾಗುವ ಮೂಲಕ ರಾಜಕೀಯ ಇನ್ನಿಂಗ್ಸ್ ಆರಂಭಿಸಿರುವ ವಿ ಸೋಮಣ್ಣ ಅವರ ಅನುಭವ ನಾಲ್ಕು ದಶಕಗಳಷ್ಟು ಸುದೀರ್ಘ. ಪಕ್ಷೇತರರಾಗಿದ್ದವರು, ಮೂರು ಪಕ್ಷಗಳಲ್ಲಿ ತಿರುಗಾಡಿದ್ದಾರೆ.

1994ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಬಿನ್ನಿಪೇಟೆ ಕ್ಷೇತ್ರದಲ್ಲಿ ಅಂದಿನ ಜನತಾದಳದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೋಮಣ್ಣ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಆನಂತರ ಜೆಡಿಎಸ್ ನಿಂದ ಹೊರಬಂದ ಸೋಮಣ್ಣ 1999ರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದರು. ಬಳಿಕ ಕಾಂಗ್ರೆಸ್ ಸೇರಿ 2004ರಲ್ಲಿ ಬಿನ್ನಿಪೇಟೆ ಕ್ಷೇತ್ರದಿಂದಲೇ ಗೆದ್ದರು. 2008ರಲ್ಲಿ ಕ್ಷೇತ್ರ ಬದಲಾಯಿಸಿದರು. ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದರು. ಆ ಬೆನ್ನಲ್ಲೇ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದರು. 2009ರಲ್ಲಿ ಗೋವಿಂದರಾಜ ನಗರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯ ಕೃಷ್ಣ ವಿರುದ್ಧ ಸೋಲು ಕಂಡರು.

V Somanna and vijayenra

2010ರಲ್ಲಿ ಸೋಮಣ್ಣ ಅವರನ್ನು ಬಿಜೆಪಿಯು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿತ್ತು. 2013ರ ಚುನಾವಣೆಯಲ್ಲಿ ವಿಜಯನಗರದಿಂದ ಸ್ಪರ್ಧಿಸಿದ್ದ ಸೋಮಣ್ಣ, ಪ್ರಿಯ ಕೃಷ್ಣ ತಂದೆ ಎಂ. ಕೃಷ್ಣಪ್ಪ ವಿರುದ್ಧ ಮತ್ತೆ ಸೋಲುತ್ತಾರೆ. 2010ರಿಂದ 2018ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು 2018ರ ಚುನಾವಣೆಯಲ್ಲಿ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಮತ್ತೆ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. 2019ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಿಸಿ, 2021ರಲ್ಲಿ ಬೊಮ್ಮಾಯಿ ಸಂಪುಟದಲ್ಲಿ ಮೂಲಸೌಕರ್ಯ ಹಾಗೂ ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದರು.

ಎಲ್ಲ ಪಕ್ಷದಲ್ಲೂ ರಾಜಕಾರಣ ಮಾಡಿ, 40 ವರ್ಷದ ಅನುಭವ ಇರುವ ವಿ ಸೋಮಣ್ಣ ಅವರ ಶಕ್ತಿಯನ್ನು ಗುರುತಿಸಿರುವ ಕಾರಣಕ್ಕೆ ಕಾಂಗ್ರೆಸ್ಸಿಗೆ ಹೋಗಲು ಮುಂದಾಗಿದ್ದ ಸೋಮಣ್ಣ ಅವರನ್ನು ಉಳಿಸಿಕೊಂಡರು ಬಿಜೆಪಿ ವರಿಷ್ಠರು. ಆ ದೂರದೃಷ್ಟಿಯು ಈಗ ಫಲ ನೀಡಿದಂತಿದೆ. ವಿ ಸೋಮಣ್ಣ ರಾಜ್ಯಾಧ್ಯಕ್ಷರಾಗಿ ಹೊಸ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆಗೆಳು ತೆರೆಯುತ್ತಿವೆ.

ಒಟ್ಟಾರೆ ಪ್ರಭಾವಿ ಸ್ವಾಮೀಜಿಯೊಬ್ಬರ ಬಳಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕುರಿತು ನಡೆಸಿರುವ ಚರ್ಚೆ ಬಿಜೆಪಿಯಲ್ಲಿನ ರಾಜಕೀಯ ಚಟುವಟಿಕೆಗಳನ್ನು ಮತ್ತೆ ಗರಿಗೆದರಿಸಿವೆ. ವಿಜಯೇಂದ್ರ ಸ್ಥಾನ ಉಳಿಸಿಕೊಳ್ಳಬಲ್ಲರೇ? ಸೋಮಣ್ಣ ಅವರ ಮುಖ್ಯಮಂತ್ರಿ ಕನಸಿನ ಹೊಸ ರಾಜಕೀಯ ಅಧ್ಯಾಯ ಆರಂಭವಾಗುತ್ತದೆಯೇ? ಕಾದುನೋಡಬೇಕಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...