ಈ ದಿನ ಎಕ್ಸ್ ಕ್ಲ್ಯೂಸಿವ್‌ | ಕೋಲಾರದಿಂದಲೇ ರಾಹುಲ್ ರಣಕಹಳೆ; ಏ.5ಕ್ಕೆ ‘ಸತ್ಯಮೇವ ಜಯತೆ’

Date:

• ಏಪ್ರಿಲ್‌ 5ರಂದು ಕೋಲಾರದಲ್ಲಿ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಿದ್ಧತೆ
• ಕೋಲಾರದಲ್ಲಿ ಆದ ಪ್ರಕರಣಕ್ಕೆ ಅಲ್ಲಿಂದಲೇ ತಿರುಗೇಟು ನೀಡಲು ಎಐಸಿಸಿ ಚಿಂತನೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿರುವ ಪ್ರಕರಣದ ವಿರುದ್ಧದ ಹೋರಾಟಕ್ಕೆ ಕೋಲಾರವು ಅಖಾಡವಾಗಲಿದೆ ಎಂದು ಈದಿನ.ಕಾಮ್‌ಗೆ ಮಾಹಿತಿ ದೊರಕಿದೆ. ಏಪ್ರಿಲ್‌ 5ರಂದು ಕೋಲಾರದಲ್ಲಿ ನಡೆಯಲಿರುವ ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಸ್ವತಃ ರಾಹುಲ್‌ ಗಾಂಧಿ ಭಾಗವಹಿಸುವುದು ಬಹುತೇಕ ಖಚಿತವಾಗಿದೆ.

2019ರ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ಭಾಷಣ ಮಾಡುವಾಗ ಮೋದಿ ಉಪನಾಮ ಬಳಸಿ ಮಾತನಾಡಿದ್ದ ಅಂಶವನ್ನು ತೆಗೆದುಕೊಂಡೇ ಇಡೀ ಪ್ರಕರಣ ನಡೆದಿತ್ತು. ಕೋಲಾರದ ಬಿಜೆಪಿ ಕಾರ್ಯಕರ್ತರೊಬ್ಬರು ಗುಜರಾತಿನ ಶಾಸಕರ ಮುಖಾಂತರ ಸೂರತ್‌ ಕೋರ್ಟ್‌ನಲ್ಲಿ ರಾಹುಲ್‌ ಗಾಂಧಿ ಮೇಲೆ ಕ್ರಿಮಿನಲ್‌ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದರು. ದೂರುದಾರ ಗುಜರಾತಿನ ಶಾಸಕನಾದರೂ, ಸಾಕ್ಷಿ ಕೋಲಾರದ ಬಿಜೆಪಿ ಕಾರ್ಯಕರ್ತನಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ನಡೆಸಿದ ಸೂರತ್‌ ನ್ಯಾಯಾಲಯವು ರಾಹುಲ್‌ ಅವರನ್ನು ದೋಷಿ ಎಂದು ಪರಿಗಣಿಸಿ, 2 ವರ್ಷ ಶಿಕ್ಷೆ ವಿಧಿಸಿತ್ತು. ಇದರ ಆಧಾರದ ಮೇಲೆ 1951ರ ಚುನಾಯಿತ ಪ್ರತಿನಿಧಿಗಳ ಕಾಯ್ದೆ ಬಳಸಿದ ಸ್ಪೀಕರ್, ಒಂದೇ ದಿನದಲ್ಲಿ ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸ್ಥಾನದಿಂದ ವಜಾಗೊಳಿಸಿದ್ದರು.

ಇದಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿ, ದೇಶದ ಬಹುತೇಕ ಎಲ್ಲ ವಿಪಕ್ಷಗಳು ಇದನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿದ್ದವು. ಇದೇ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌, ಕೋಲಾರವನ್ನೇ ಶಕ್ತಿಕೇಂದ್ರವಾಗಿ ಬಳಸಿಕೊಳ್ಳಲು ಚಿಂತಿಸಿದೆ.

ಈ ಸುದ್ದಿ ಓದಿದ್ದೀರಾ? : ರಾಹುಲ್ ಗಾಂಧಿ ಅನರ್ಹತೆ | ಕಳ್ಳರನ್ನು ಕಳ್ಳರು ಎನ್ನುವ ಸ್ವಾತಂತ್ರ್ಯ ನಮಗಿಲ್ವಾ?: ಸಿದ್ದರಾಮಯ್ಯ

ಕೋಲಾರದಲ್ಲಿ ಲಕ್ಷಾಂತರ ಜನ ಸೇರಿಸಿ ಸಮಾವೇಶ ಮಾಡಿ, ‘ಸತ್ಯಮೇವ ಜಯತೆ’ ಹೆಸರಿನಲ್ಲಿ ಕಾರ್ಯಕ್ರಮ ಮಾಡಬೇಕೆಂದು ನೆನ್ನೆ (26ನೇ ಮಾರ್ಚ್) ನಡೆದ ಸಭೆಯಲ್ಲಿ ತೀರ್ಮಾನಿಸಿರುವುದು ಈದಿನ.ಕಾಮ್‌ಗೆ ತಿಳಿದುಬಂದಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಸುರ್ಜೆವಾಲ, ಕೋಲಾರದ ಪ್ರಮುಖ ನಾಯಕರಾದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್, ಮಾಜಿ ಕೇಂದ್ರ ಸಚಿವ ಕೆ ಹೆಚ್‌ ಮುನಿಯಪ್ಪ ಸೇರಿದಂತೆ ಹಲವರು ಇದರ ಬಗ್ಗೆ ಚರ್ಚಿಸಿ, ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಎಐಸಿಸಿ ವತಿಯಿಂದಲೇ ಬಂದಿರುವ ಈ ಪ್ರಸ್ತಾಪಕ್ಕೆ ರಾಜ್ಯದ ನಾಯಕರ ಅನುಮೋದನೆ ದೊರಕಿದ್ದು ಈಗ ಮತ್ತೆ ಎಐಸಿಸಿ ಅಂಗಳಕ್ಕೆ ಹೋಗಿದೆ.

ಇದಷ್ಟು ಮಾತ್ರವಲ್ಲದೇ, ಸಿದ್ದರಾಮಯ್ಯನವರು ಸ್ಪರ್ಧಿಸುತ್ತಾರೆ ಎಂಬ ಕಾರಣಕ್ಕೆ ಈಗಾಗಲೇ ಸುದ್ದಿಯಲ್ಲಿದ್ದ ಕೋಲಾರ ಕ್ಷೇತ್ರವು ಮತ್ತೊಮ್ಮೆ ಸುದ್ದಿಗೆ ಬಂದಿದೆ. ಇಷ್ಟೆಲ್ಲಾ ಬೆಳವಣಿಗೆ ಮಧ್ಯೆ ಮಾಜಿ ಮುಖ್ಯಮಂತ್ರಿಯವರು ವರುಣಾ ಮಾತ್ರವಲ್ಲದೇ, ಕೋಲಾರದಿಂದಲೂ ಸ್ಪರ್ಧಿಸುವಂತಹ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...