ಚುನಾವಣೋತ್ತರ ಎಕ್ಸಿಟ್‌ ಪೋಲ್‌ | ಹುಸಿಯಾದ ಗೋದಿ ಮೀಡಿಯಾಗಳ ಅಂಕಿಅಂಶ

Date:

ಎಕ್ಸಿಟ್ ಪೋಲ್‌ಗಳ (ಚುನಾವಣೋತ್ತರ ಸಮೀಕ್ಷೆ) ಕುರಿತು ಅನುಮಾನ ವ್ಯಕ್ತಪಡಿಸಿದ್ದ ಈದಿನ.ಕಾಮ್, ಎಲ್ಲ ಸಮೀಕ್ಷೆಗಳ ಸತ್ಯಾಸತ್ಯತೆ ಬಗ್ಗೆ ಸವಾಲೆಸೆದಿತ್ತು. ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ಗೋದಿ ಮೀಡಿಯಾಗಳ ಚುನಾವಣೋತ್ತರ ಎಕ್ಸಿಟ್‌ ಪೋಲ್‌ ಅಂಕಿ ಅಂಶಗಳು ಈಗ ಹುಸಿಯಾಗಿವೆ. 

ನ್ಯೂಸ್ 18, ಆಕ್ಸಿಸ್ ಮೈ ಇಂಡಿಯಾ, ಸಿ ವೋಟರ್, ಟುಡೇಸ್ ಚಾಣಕ್ಯ, ಪಿ ಮಾರ್ಕ್, ಜನ್ ಕಿ ಬಾತ್, ಡಿ ಡೈನಾಮಿಕ್, ಸಿಎನ್‌ಎಕ್ಸ್ ಸೇರಿದಂತೆ ಹಲವು ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ವಿವರಗಳು ‘ಎನ್‌ಡಿಎಗೆ ಬಹುಮತ, I.N.D.I.A.ಗೆ ಆಘಾತ!’ ಎಂದು ವರದಿ ಮಾಡಿದ್ದು, ಎನ್‌ಡಿಎ ಮೈತ್ರಿಕೂಟಕ್ಕೆ 355ರಿಂದ 370 ಸ್ಥಾನ ಬರಲಿದೆ. I.N.D.I.A.ಗೆ 125ರಿಂದ 140 ಸ್ಥಾನಗಳಷ್ಟೇ ದೊರೆಯಲಿವೆ. ಇತರ ಪಕ್ಷಗಳು 42ರಿಂದ 52 ಸ್ಥಾನ ಪಡೆಯಲಿವೆ ಎಂದಿದ್ದವು. ಆದರೆ, ಲೆಕ್ಕಾಚಾರ ಸಂಪೂರ್ಣ ತಲೆಕೆಗಳಗಾಗಿದೆ.

ದೇಶಾದ್ಯಂತ ಮತ ಎಣಿಕೆ ಕಾರ್ಯ ಮುಗಿಯುವ ಮುನ್ನವೇ ಎನ್‌ಡಿಎ 290 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇಂಡಿಯಾ ಮೈತ್ರಿ ಕೂಟ 234 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ಗೋದಿ ಮೀಡಿಯಾಗಳ ಚುನಾವಣೋತ್ತರ ಎಕ್ಸಿಟ್‌ ಪೋಲ್‌ ಅಂಕಿ ಅಂಶಗಳು ಈಗ ಹುಸಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಯ ಮೊದಲ ಹಂತ ಮುಗಿದ ಕೂಡಲೇ ಬಿಜೆಪಿ ಸಹಜವಾಗಿಯೇ ಕೋಮು ಧ್ರುವೀಕರಣಕ್ಕೆ ಮುಂದಾಗಿತ್ತು. ನಾಲ್ಕನೇ ಹಂತದ ಚುನಾವಣೆ ನಡೆಯುವಷ್ಟರಲ್ಲಿ ಚುನಾವಣಾ ತಜ್ಞರು ಚುನಾವಣೆಯಲ್ಲಿ ಯಾರಿಗೆ ಗದ್ದುಗೆ ಸಿಗಲಿದೆ ಎಂಬ ಅಭಿಪ್ರಾಯವನ್ನು ಹೇಳಲು ಆರಂಭಿಸಿದರು.

ಜನರ ಆಕ್ರೋಶ, ಬೆಲೆ ಏರಿಕೆ, ನಿರುದ್ಯೋಗ ಎಲ್ಲೆಡೆ ಕಂಡುಬರುತ್ತಿತ್ತು. ಅಂದರೆ ಈ ಬಾರಿಯ ಚುನಾವಣೆ ಈ ಹಿಂದೆ ನಡೆದ ಎರಡು ಲೋಕಸಭೆ ಚುನಾವಣೆಯಂತಲ್ಲ. ಮೋದಿ ಅಲೆ, ಹೈಪರ್ ನ್ಯಾಷನಲಿಸಂ ಕೂಡಾ ಇರಲಿಲ್ಲ. ಮೋದಿ ಮ್ಯಾಜಿಕ್ ಇಲ್ಲ ಮತ್ತು ಬಿಜೆಪಿ ತನ್ನ ಬಲವನ್ನು ಕಳೆದುಕೊಳ್ಳುತ್ತಿದೆ ಎಂಬ ಸ್ಪಷ್ಟವಾದ ಸೂಚನೆ ಇದ್ದರೂ ಕೂಡಾ ಎಲ್ಲ ಎಕ್ಸಿಟ್‌ ಪೋಲ್‌ಗಳು ಒಂದೇ ರೀತಿಯ ಫಲಿತಾಂಶವನ್ನು ನೀಡಿದ್ದವು.

ಹಲವು ಮಾಧ್ಯಮಗಳು ಎನ್‌ಡಿಎಗೆ 350ರಿಂದ 400 ಸೀಟುಗಳು ಲಭಿಸುತ್ತದೆ ಎಂದು ಅಂದಾಜಿಸಿದ್ದು, ಕರ್ನಾಟಕದಲ್ಲಿ 3ರಿಂದ 8 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿದ್ದವು. ಆದರೆ, ಈದಿನ.ಕಾಮ್‌ ಸಂಗ್ರಹಿಸಿದ್ದ ಅಂಶಅಂಶಗಳ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ 300 ಸ್ಥಾನಗಳನ್ನು ದಾಟುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು.

ಇದೀಗ, ಫಲಿತಾಂಶ ಕೂಡ ಹೊರಬರುತ್ತಿದ್ದು, ಎನ್‌ಡಿಎ 290ರ ಆಸುಪಾಸಿನಲ್ಲಿ ಜಗ್ಗಾಡುತ್ತಿದೆ. ಇಂಡಿಯಾ ಮೈತ್ರಿಕೂಟ 230 ಸ್ಥಾನಗಳನ್ನು ದಾಟಲು ಹರಸಾಹಸ ಪಡುತ್ತಿದೆ. ಅಂತಿಮವಾಗಿ ಯಾರಿಗೆ ಎಷ್ಟು ಸ್ಥಾನಗಳು ಲಭಿಸಲಿವೆ ಎಂಬುದು ಮಂಗಳವಾರ ಸಂಜೆಯ ವೇಳೆಗೆ ಖಚಿತವಾಗಿ ತಿಳಿಯಲಿದೆ.

ಈ ಸುದ್ದಿ ಓದಿದ್ದೀರಾ? ರಾಮಮಂದಿರ ಇರುವ ಫೈಜಾಬಾದ್‌ನಲ್ಲಿ ಬಿಜೆಪಿಗೆ ಹಿನ್ನಡೆ: ಅಯೋಧ್ಯೆಯಲ್ಲಿ ಕೇಸರಿ ಪಕ್ಷಕ್ಕೆ ಆಘಾತ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...