ಆಧಾರ್‌ – ಪ್ಯಾನ್ ಜೋಡಣೆಗೆ ದುಬಾರಿ ಶುಲ್ಕ; ನಿರ್ಮಲಾ ಸೀತಾರಾಮನ್ ಸಮರ್ಥನೆ

Date:

  • ದಂಡ ಕಟ್ಟಿ ಆಧಾರ್ – ಪ್ಯಾನ್‌ ಜೋಡಣೆ ಮಾಡಿ
  • ಕಾಂಗ್ರೆಸ್ ಭರವಸೆಗಳ ವಿರುದ್ಧ ಸೀತಾರಾಮನ್ ಕಿಡಿ

ಆಧಾರ್‌ – ಪ್ಯಾನ್‌ ಕಾರ್ಡ್‌ ಜೋಡಣೆಗೆ ವಿಧಿಸಲಾಗಿರುವ ದುಬಾರಿ ಶುಲ್ಕವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ನಿರ್ಮಲಾ ಸೀತಾರಾಮನ್ ಅವರು ‘ಆಧಾರ್ ಪ್ಯಾನ್‌ ಜೋಡಣೆಯ ಗಡುವು ಮುಗಿದಿರುವುದಕ್ಕೆ ಶುಲ್ಕ ವಿಧಿಸಲಾಗಿದೆ’ ಎಂದು ಹೇಳಿದ್ದಾರೆ.

ಆಧಾರ್‌ – ಪ್ಯಾನ್‌ ಜೋಡಣೆಗೆ ಸುಮಾರು ಒಂದು ಸಾವಿರ ರೂಪಾಯಿ ಶುಲ್ಕ ವಿಧಿಸಬೇಕು ಎನ್ನುವ ನಿಯಮ ಇಡೀ ದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಈ ಕುರಿತು ಯಾವುದೇ ಅಳುಕಿಲ್ಲದೆ ನಿರ್ಮಲಾ ಸೀತಾರಾಮನ್ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರ್ತಕರ್ತರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಆಧಾರ್‌-ಪ್ಯಾನ್‌ ಜೋಡಣೆಗೆ ಮೊದಲೇ ಸಮಯ ಕೊಡಲಾಗಿತ್ತು. ಅವಕಾಶ ಇದ್ದಾಗ ಆಧಾರ್ – ಪ್ಯಾನ್ ಲಿಂಕ್ ಮಾಡಬೇಕಿತ್ತು. ಗಡುವು ಮುಗಿದ ಮೇಲೆ ದಂಡ ಹಾಕಲಾಗಿದೆ” ಎಂದು ತಮ್ಮ ಹಳೆಯ ಗತ್ತಿನಲ್ಲಿಯೇ ಉತ್ತರಿಸಿದ್ದಾರೆ.

“ಸಾಮಾನ್ಯವಾಗಿ ಗಡುವು ಮುಗಿದರೆ ದಂಡದ ಪ್ರಮಾಣ ಹೆಚ್ಚಾಗಲಿದೆ. ಅದರಂತೆಯೇ ಈಗ ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಇದು ಅನಿವಾರ್ಯ ಮತ್ತು ಕಾನೂನಾತ್ಮಕವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ವಿರುದ್ಧ ವಿಪಕ್ಷಗಳ ಚುನಾವಣಾ ಪೂರ್ವ ಮೈತ್ರಿ ಸಾಧ್ಯವಿಲ್ಲ; ಗುಲಾಬ್‌ ನಬಿ ಆಜಾದ್

ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ನೀಡಿರುವ ಉಚಿತ ಭರವಸೆಗಳ ಕುರಿತು ನಿರ್ಮಲಾ ಸೀತಾರಾಮನ್ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ನಾಲ್ಕು ಉಚಿತ ಘೋಷಣೆಯನ್ನ ಮಾಡಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಘೋಷಣೆ ಮಾಡಿ ಜನತೆಗೆ ಕಾಂಗ್ರೆಸ್ ನಾಯಕರು ಮೋಸ ಮಾಡಿದ್ದಾರೆ” ಎಂದಿದ್ದಾರೆ.

“ಕರ್ನಾಟಕ ರಾಜ್ಯದ ಬಜೆಟ್ 3 ಲಕ್ಷ ಕೋಟಿ ರೂ. ಕಾಂಗ್ರೆಸ್‌ನವರು ಕೊಟ್ಟ ಭರವಸೆಗಳಿಗೆ 1 ಲಕ್ಷ ಕೊಟಿ ರೂ. ಖರ್ಚಾಗುತ್ತದೆ. ಉಳಿದ 2 ಲಕ್ಷ ಕೋಟಿ ರೂ.ನಲ್ಲಿ ಸರ್ಕಾರ ನಡೆಸಬೇಕು. ಉಳಿದ ಹಣದಲ್ಲಿ ಹೇಗೆ ಅಧಿಕಾರ ನಡೆಸುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್‌ನ ಒಟ್ಟಾರೆ ಭರವಸೆಗಳು ಜನರನ್ನ ಮೋಸ ಮಾಡುವ ತಂತ್ರ. ಆದ್ದರಿಂದ ಕರ್ನಾಟಕದ ಜನರು ಕಾಂಗ್ರೆಸ್‌ನವರ ಭರವಸೆಗಳಿಗೆ ಮರುಳಾಗಬೇಡಿ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...