ಯತ್ನಾಳ್‌ ನಿಮ್ಮ ಮೇಲೆ ಸದಾ ಕಿಡಿ ಕಾರುವುದಕ್ಕೆ ಕಾರಣ ತಿಳಿಸಿ; ವಿಜಯೇಂದ್ರನಿಗೆ ಶಾಸಕ ಪ್ರದೀಪ್ ಈಶ್ವರ್ ಪ್ರಶ್ನೆ

Date:

ಯಾರೋ ಒಬ್ಬರು ಚೋಟಾ ಸಹಿ ಹಾಕಿದ ಕಾರಣಕ್ಕೆ ಯಡಿಯೂರಪ್ಪ ಅವರು ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಯಿತು. ಆ ಚೋಟಾ ಸಹಿ ಹಾಕಿದವರು ಯಾರು ಎಂಬುದು ರಾಜ್ಯಕ್ಕೆ ಗೊತ್ತು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರನಿಗೆ ತಿರುಗೇಟು ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, “ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಚರ್ಚೆ ಮಾಡಬೇಕಾದ ವಿಚಾರಗಳನ್ನು ಬಿಟ್ಟು ವಿಷಯಾಂತರ ಮಾಡಿ ಮಾತನಾಡುತ್ತಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್ ಸ್ಟೈಲ್ ಬಗ್ಗೆ ಮಾತನಾಡುವ ಬದಲು ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಲಿ” ಎಂದರು.

“ಶಿವಮೊಗ್ಗದ ಇತಿಹಾಸದಲ್ಲಿ ಬಂಗಾರಪ್ಪ ಅವರು ಹಾಗೂ ಯಡಿಯೂರಪ್ಪ ಅವರನ್ನು ಮರೆಯಲು ಸಾಧ್ಯವಿಲ್ಲ. ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕದ ಮೂಲಕ ಹಳ್ಳಿ ಯುವಕರ, ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು. ಅಪ್ಪನ ಹಾದಿಯಂತೆ ಮಧು ಬಂಗಾರಪ್ಪ ಅವರು 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಅತ್ಯಂತ ಕಟ್ಟುನಿಟ್ಟಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿವೆ. ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಕೇಂದ್ರದ ಬಳಿ ಮಾತನಾಡಿಲ್ಲ. 26 ಜನ ಸಂಸದರಿದ್ದರೂ ಒಮ್ಮೆಯೂ ದನಿ ಎತ್ತಿಲ್ಲ. ಈ ಬಾರಿ ಕಾಂಗ್ರೆಸ್ ಪಕ್ಷದ 20 ಕ್ಕೂ ಹೆಚ್ಚು ಸಂಸದರು ರಾಜ್ಯಕ್ಕೆ ಬೇಕಾದ ಸವಲತ್ತುಗಳನ್ನು ತರುತ್ತಾರೆ. ನೀವು ಅನವಶ್ಯಕ ಮಾತುಗಳನ್ನು ಬಿಟ್ಟು ಹಿಂದುಳಿದ ವರ್ಗಗಳ ನಾಯಕರು ಬೆಳೆಯಲು ಅವಕಾಶ ಮಾಡಿಕೊಡಿ” ಎಂದು ಹೇಳಿದರು.

“ಯಡಿಯೂರಪ್ಪ, ಈಶ್ವರಪ್ಪ ಅವರು ಬಿಜೆಪಿಯನ್ನು ಕರ್ನಾಟಕದಲ್ಲಿ ತಳಮಟ್ಟದಿಂದ ಕಟ್ಟಿದ್ದಾರೆ. ಈಶ್ವರಪ್ಪ ಅವರನ್ನು ಕರ್ನಾಟಕದ ಅಡ್ವಾನಿ ಎಂದು ಕರೆಯಲಾಗುತ್ತಿತ್ತು. ಅಂತಹವರನ್ನು ವಿಜಯೇಂದ್ರ ಅವರು ಅದ್ವಾನ ಮಾಡಿದ್ದಾರೆ. ಈಶ್ವರಪ್ಪ ಅವರು ಹಾಗೂ ಅವರ ಮಗನಿಗೆ ಟಿಕೆಟ್ ಏಕೆ ತಪ್ಪಿಸಿದ್ದೀರಿ ಉತ್ತರಿಸಿ. ನೀವು ಓದುವುದು ಕಡಿಮೆ ಮಾಡಿರಬೇಕು ಅಥವಾ ನಿಮಗೆ ಸಲಹೆ ನೀಡುತ್ತಿರುವವರು, ಸುತ್ತಮುತ್ತ ಇರುವವರು ಓದುವುದು ಕಡಿಮೆ ಮಾಡಿರಬೇಕು ಆದ ಕಾರಣಕ್ಕೆ ನೀವು ತಾಳ ತಪ್ಪಿದವರಂತೆ ಮಾತನಾಡುತ್ತಾ ಇದ್ದೀರಿ” ಎಂದು ಕುಟುಕಿದ್ದಾರೆ.

“ಬಸನಗೌಡ ಪಾಟೀಲ ಯತ್ನಾಳ ಅವರು ವಿರೋಧ ಪಕ್ಷಗಳ ಮೇಲೆ ಕಿಡಿ ಕಾರಿದ್ದಕ್ಕಿಂತ ಹೆಚ್ಚು ವಿಜಯೇಂದ್ರ ಅವರ ಮೇಲೆ ಕಿಡಿ ಕಾರಿದ್ದಾರೆ. ಇದು ಯಾವ ಕಾರಣಕ್ಕೆ ಎಂದು ಉತ್ತರಿಸಬಹುದೇ? ರಾಜ್ಯಕ್ಕೆ ಬರಬೇಕಾದ ಬರ ಪರಿಹಾರದ ಬಗ್ಗೆ ಒಮ್ಮೆಯೂ ದನಿ ಎತ್ತಿಲ್ಲ. ವಿರೋಧ ಪಕ್ಷದ ರಾಜ್ಯ ಅಧ್ಯಕ್ಷರಾಗಿ ತಲೆಯಲ್ಲಿ ವಿಷಯಗಳು ಇಲ್ಲದೇ ಇದ್ದಾಗ ಈ ರೀತಿಯ ಕ್ಷುಲ್ಲಕ ವಿಚಾರಗಳು ಮುನ್ನೆಲೆಗೆ ಬರುತ್ತವೆ” ಎಂದಿದ್ದಾರೆ.

“ರಾಜ್ಯದ ಭವಿಷ್ಯವನ್ನು ಕಟ್ಟುವಂತ ಚರ್ಚೆ ನಡೆಸೋಣ ಅದನ್ನು ಬಿಟ್ಟು ಕೇವಲ ತೇಜೋವಧೆ ಮಾಡುವ ಅಂಶಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವುದು ಬೇಡ ಎಂದು ವಿಜಯೇಂದ್ರ ಅವರಿಗೆ ಸಲಹೆ ನೀಡುತ್ತೇನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...