7ನೇ ವೇತನ ಆಯೋಗದ ಅವಧಿ ವಿಸ್ತರಣೆ; ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಸದ್ಯಕ್ಕಿಲ್ಲ

Date:

  • ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಆಯೋಗ
  • 7ನೇ ವೇತನ ಆಯೋಗದ ಅವಧಿ 2023 ನವೆಂಬರ್‌ 18ಕ್ಕೆ ಅವಧಿ ಮುಗಿಯಬೇಕಿತ್ತು

ವೇತನ ಪರಿಷ್ಕರಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರು ಇದಕ್ಕಾಗಿ ಇನ್ನೂ ಕೆಲವು ದಿನಗಳ ಕಾಲ ಕಾಯಬೇಕಾಗಿದೆ. ಇದಕ್ಕೆ ಪ್ರಮುಖ ಕಾರಣ ವೇತನ ಪರಿಷ್ಕರಣೆಗೆ ನೇಮಿಸಿದ್ದ 7ನೇ ವೇತನ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ.

ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ಹಿಂದಿನ ಸರ್ಕಾರ ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಿತ್ತು. ಈ ಆಯೋಗ ತನ್ನ ಶಿಫಾರಸುಗಳ ವರದಿ ಸಲ್ಲಿಸಲು 6 ತಿಂಗಳ ಗಡುವು ನೀಡಲಾಗಿತ್ತು.

ನಂತರ ಇದರ ಅವಧಿಯನ್ನು ಕಳೆದ ಮೇ 15 ರಂದು ಮತ್ತೆ 6 ತಿಂಗಳುಗಳ ಕಾಲ ವಿಸ್ತರಿಸಿತ್ತು. ಹೀಗಾಗಿ 2023 ನವೆಂಬರ್‌ 18ಕ್ಕೆ ಅವಧಿ ಮುಗಿಯಬೇಕಿತ್ತು. ಆದರೆ ಇದೀಗ ಇದರ ಅವಧಿಯನ್ನು ಮತ್ತೆ ಮುಂದಿನ ವರ್ಷ ಮಾರ್ಚ್ 15 ರವರೆಗೆ ವಿಸ್ತರಿಸಿದೆ. ಇದರಿಂದಾಗಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡ ಇನ್ನಿಲ್ಲ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಮಾಡುವ ಸವಾಲು ಸರ್ಕಾರದ ಮುಂದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ತಕ್ಷಣಕ್ಕೆ ನೌಕರರ ವೇತನ ಪರಿಷ್ಕರಣೆ ಮಾಡಿದರೆ ಆರ್ಥಿಕ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆಯೋಗದ ವರದಿಯನ್ನು ತಡವಾಗಿ ಪಡೆದುಕೊಂಡರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.

7ನೇ ವೇತನ ಆಯೋಗ

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...