ಸ್ಟಾರ್ಟ್ ಅಪ್‌ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

Date:

“ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆ ದಿನವನ್ನು 2024ರ ಫೆಬ್ರವರಿ 1ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿಂದೆ 2023ರ ಡಿಸೆಂಬರ್ 23ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಹೊಸ ಹೊಸ ಸ್ಟಾರ್ಟ್ಅಪ್‌ಗಳಿಂದ ವಿನೂತನ ಚಿಂತನೆಯನ್ನು ಹೊರತಂದು ಅದನ್ನು ಪೋಷಿಸುವ ಜೊತೆಗೆ ವಿವಿಧ ಹಂತಗಳಲ್ಲಿ ಹಣಕಾಸಿನ ನೆರವು ನೀಡುವ ಉದ್ದೇಶದಿಂದ “Idea2PoC-ಎಲಿವೇಟೆಡ್” (ಗ್ರಾಂಟ್-ಇನ್-ಏಡ್) ಯೋಜನೆಯನ್ನು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜಾರಿಗೆ ತಂದಿತ್ತು.

ಮಾರುಕಟ್ಟೆ ಅಭಿವೃದ್ಧಿ ಮತ್ತು ಸ್ಕೇಲ್-ಅಪ್ ಅಭಿವೃದ್ಧಿಪಡಿಸಲು ಆರಂಭಿಕ ಹಂತದ ಹಣಕಾಸಿನ ಅವಶ್ಯಕತೆ ಸ್ಟಾರ್ಟ್ ಅಪ್‌ಗಳಿಗೆ ಬೇಕಾಗಲಿದ್ದು, ಇದಕ್ಕಾಗಿ 50 ಲಕ್ಷಗಳವರೆಗೆ ಅನುದಾನ ನೀಡುವುದು ಈ ಯೋಜನೆಯ ಉದ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖವಾಗಿ ಮಾರ್ಗದರ್ಶಕರು, ನೆಟ್ವರ್ಕಿಂಗ್ ಅವಕಾಶಗಳು, ಇನ್ಕ್ಯುಬೇಶನ್ ಸೌಲಭ್ಯಗಳು ಇತ್ಯಾದಿ ಸೇರಿದಂತೆ ಹಲವು ಕ್ಷೇತ್ರಗಳ ಸ್ಟಾರ್ಟ್ಅಪ್ಗಳಿಗೆ ಸಮಗ್ರ ಉದ್ಯಮಶೀಲತಾ ವೇದಿಕೆಯನ್ನು ಒದಗಿಸುವುದು ಈ ಯೋಜನೆಯ ಗುರಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

‘Idea2PoC-ಎಲಿವೇಟೆಡ್’ ಯೋಜನೆಯು ವಿಭಿನ್ನ ಅನ್ವೇಷಣೆಗಳೊಂದಿಗೆ ಮುಂದೆ ಬರುವ ಉದಯೋನ್ಮುಖ ಸ್ಟಾರ್ಟ್ಅಪ್ಗಳಿಗೆ ಹಣಕಾಸಿನ ನೆರವು ನೀಡುವುದಾಗಿದೆ. ಈ ಯೋಜನೆಗೆ ಸ್ಟಾರ್ಟ್ ಅಪ್‌ಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸ್ಟಾರ್ಟ್ಅಪ್‌ಗಳು ತಮ್ಮ ಅರ್ಜಿ ಸಲ್ಲಿಸಲು ಇನ್ನಷ್ಟು ದಿನಗಳ ಕಾಲಾವಕಾಶ ಬೇಕೆಂಬುದನ್ನು ಮನಗಂಡು ಅರ್ಜಿ ಸಲ್ಲಿಕೆಯ ಕೊನೆಯ ದಿನವನ್ನು ಮುಂದೂಡಿ, ಇನ್ನಷ್ಟು ದಿನಗಳ ಕಾಲಾವಕಾಶ ನೀಡಲಾಗಿದೆ, ಈ ಮೂಲಕ ಮತ್ತಷ್ಟು ಸ್ಟಾರ್ಟ್ಅಪ್ಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವುದು ಇಲಾಖೆಯ ಉದ್ದೇಶವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ಗಳು ತಮ್ಮ ವಿಶಿಷ್ಟ ಹಾಗೂ ವಿನೂತನ ಚಿಂತನೆಗಳಿಗೆ ಹಣಕಾಸು ಹೊಂದಿಸಿಕೊಳ್ಳಲು ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆಯಲ್ಲದೆ, ಕಾಲಾವಕಾಶ ಹೆಚ್ಚಿಸಿರುವುದರಿಂದ ಮತ್ತಷ್ಟು ಅನುಕೂಲವಾಗಲಿದೆ ಎಂದು ಸಚಿವ ಖರ್ಗೆ ತಿಳಿಸಿದ್ದು, ಈ ವಿಸ್ತರಣೆಯು ಹೆಚ್ಚಿನ ಸ್ಟಾರ್ಟ್ ಅಪ್‌ಗಳಿಗೆ ಭಾಗವಹಿಸಲು ಅವಕಾಶ ನೀಡುಲಿದೆ ಎಂದಿದ್ದಾರೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ನಿಗದಿಯಾಗಿದ್ದ ಗಡುವು: ಡಿಸೆಂಬರ್ 23, 2023; ಸಂಜೆ 5 ಗಂಟೆ.
ಅರ್ಜಿ ಸಲ್ಲಿಸಲು ವಿಸ್ತರಿಸಲಾಗಿರುವ ಗಡುವು: ಜನವರಿ 1, 2024; ಸಂಜೆ 5 ಗಂಟೆ

ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿಗಳನ್ನು ಸಲ್ಲಿಸಲು, ಭೇಟಿ ನೀಡಿ: ಸ್ಟಾರ್ಟ್ಅಪ್ ಕರ್ನಾಟಕ (missionstartupkarnataka.org)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...