ರಾಜಧಾನಿ ಹೊರಗಿನ ನಗರಗಳಿಗೂ ಉಪನಗರ ರೈಲು ಸೇವೆ ವಿಸ್ತರಣೆ: ಸಚಿವ ಎಂ ಬಿ ಪಾಟೀಲ್

Date:

  • ಬೆಂಗಳೂರು ನಗರ ಸಂಚಾರ ದಟ್ಟಣೆ ಪರಿಹಾರಕ್ಕೆ ಉಪನಗರ ರೈಲು ಪರಿಹಾರವಾಗಲಿದೆ
  • ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಕೈಗಾರಿಕಾ ಸಚಿವರು

ಬೆಂಗಳೂರಿನ ಸುತ್ತಲಿನ ನಗರದ ಜೊತೆಗೆ ಹೊರಗಿರುವ ನಗರಗಳಿಗೂ ಉಪನಗರ ರೈಲು ಯೋಜನೆ ವಿಸ್ತರಿದಾಗ ಮಾತ್ರ ರಾಜಧಾನಿಯ ಸಂಚಾರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಬೆಂಗಳೂರಿನ ಖನಿಜಭವನದಲ್ಲಿ ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜತೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಮಹತ್ವದ ನಿರ್ದೇಶನ ನೀಡಿದ್ದಾರೆ.

ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನಗರ ರೈಲು ಯೋಜನೆಯ ಮೊದಲನೇ ಹಂತದದಲ್ಲಿ ಈಗ 148 ಕಿ.ಮೀ. ಉದ್ದದ ಕಾಮಗಾರಿಯಾಗಿ ನಡೆಯುತ್ತಿದ್ದು, ಉದ್ದೇಶಿತ ಯೋಜನೆಗೆ ಒಟ್ಟಾರೆ 15,767 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಆದರೆ ಇದರ ಹಾಲಿ ಸ್ವರೂಪದಿಂದ ಹೆಚ್ಚಿನ ಪ್ರಯೋಜನವಿಲ್ಲ.

ಇದರ ಜೊತೆಗೆ ಯೋಜನೆಯನ್ನು ರಾಮನಗರದಿಂದ ಮೈಸೂರು, ದೊಡ್ಡಬಳ್ಳಾಪುರದಿಂದ ಗೌರಿಬಿದನೂರು-ಹಿಂದೂಪುರ, ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ವಿಸ್ತರಿಸಬೇಕು. ಹೀಗಾದಾಗ ಮಾತ್ರ ಯೋಜನೆ ಲಾಭ ದೊರಕಲಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ನೈತಿಕ ಪೊಲೀಸ್‌ಗಿರಿ ಕಡಿವಾಣಕ್ಕೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಸ್ಥಾಪನೆಗೆ ಮುಂದಾದ ಸರ್ಕಾರ

ಸಬರ್ಬನ್ ರೈಲು ಯೋಜನೆಯನ್ನು ರಾಮನಗರ, ಚಿಕ್ಕಬಾಣಾವರ, ದೊಡ್ಡಬಳ್ಳಾಪುರ, ವೈಟ್ ಫೀಲ್ಡ್ ವರೆಗೆ ಮುಟ್ಟಿಸುವ ಗುರಿ ಇದೆ. ಯೋಜನೆ ಮುಗಿಯುವ ಹೊತ್ತಿಗೆ ಈ ಭಾಗಗಳೆಲ್ಲವೂ ಬೆಂಗಳೂರಿನ ಪ್ರಮುಖ ಭಾಗವಾಗಿವೆ. ಹೀಗಾಗಿ ರಾಜಧಾನಿಯ ಸುತ್ತಲಿನ ನೂರು ಕಿ.ಮೀ. ಸುತ್ತಳತೆಯಲ್ಲಿ ಇರುವ ನಗರಗಳಿಗೆ ಸಬರ್ಬನ್ ರೈಲು ಸೌಕರ್ಯ ಒದಗಿಸಬೇಕು.

ಇದು ಜಾರಿಯಾದಲ್ಲಿ ಬೆಂಗಳೂರಿನ ಉದ್ದಿಮೆಗಳಿಗೆ ಬೇಕಾದ ಜನರು ಈ ಊರುಗಳಿಂದ ಸುಗಮವಾಗಿ ದಿನವೂ ಓಡಾಡುವಂತೆ ಆಗಬೇಕು. ಇದು ಸಂಚಾರ ದಟ್ಟಣೆಯ ಜತೆಗೆ ವಲಸೆಯ ಸಮಸ್ಯೆಗೂ ಕಡಿವಾಣ ಹಾಕುತ್ತದೆ ಎಂದು ಮಾಹಿತಿ ಒದಗಿಸಿದರು.

ಪ್ರತೀ ಹತ್ತು ನಿಮಿಷಕ್ಕೆ ಒಂದರಂತೆ ಸಬರ್ಬನ್ ರೈಲು ಸೇವೆ ಒದಗಿಸುವುದು ನಮ್ಮ ಗುರಿಯಾಗಿದೆ. ಸುಗಮ ಸಂಚಾರ ವ್ಯವಸ್ಥೆಯ ಜಾಲವನ್ನು ಬೆಳೆಸುವುದು ಮೂಲಸೌಲಭ್ಯ ಅಭಿವೃದ್ಧಿಯ ಪ್ರಮುಖ ಗುರಿಗಳಲ್ಲೊಂದು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...