ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದಿದ್ದಲ್ಲಿ 1 ವರ್ಷ ಜೈಲು: ಸಚಿವ ಎನ್‌ ಎಸ್‌ ಬೋಸರಾಜು

Date:

ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳನ್ನು ತಡೆಯುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದಿರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ತಡೆ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು ಇಂದು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15 ದಿನಗಳ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯ:
ಮಸೂದನೆಯ 11 ಎ ಸೆಕ್ಷನ್‌ ಪ್ರಕಾರ ಅಧಿಸೂಚಿತ ಪ್ರದೇಶ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಪಿಡಿಓ, ವಿಲೇಜ್‌ ಅಕೌಂಟೆಂಟ್‌, ಪಟ್ಟಣ ಪಂಚಾಯಿತಿ, ನಗರ ಸಭೆ ಮತ್ತು ಬಿಡಬ್ಲೂಎಸ್‌ಎಸ್‌ಬಿ ಸಂಬಂಧಿಸಿದ ವಾರ್ಡ್‌ ಇಂಜಿನೀಯರ್‌ಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದ ಡ್ರಿಲ್ಲಿಂಗ್‌ ಏಜೆನ್ಸಿ/ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ ಐದು ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಮೂರು ತಿಂಗಳ ಸಜೆಯನ್ನು ವಿಧಿಸಲಾಗುವುದು.

ವಿಫಲ ಕೊಳವೆ ಬಾವಿಗಳನ್ನು ಮುಚ್ಚುವುದು ಕಡ್ಡಾಯ:
ಕೊಳವೆ ಬಾವಿಗಳನ್ನು ಕೊರೆದ ನಂತರ ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ಮುಚ್ಚವುದು ಕಡ್ಡಾಯವಾಗಿದೆ. ವಿಫಲ ಕೊಳವೆ ಬಾವಿಯನ್ನು ಕೆಸರು ಮಣ್ಣು ತುಂಬಿ ಮುಚ್ಚಬೇಕು ಹಾಗೂ 2×2 ಅಡಿಯ ದಿಬ್ಬ ಮಾಡಿ ದಿಬ್ಬಕ್ಕೆ ಫೆನ್ಸಿಂಗ್, ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿ ಕೊರೆದ 24 ಗಂಟೆಯೊಳಗೆ ಮುಚ್ಚಿರುವ ಬಗ್ಗೆ ಫೋಟೋ ತಗೆದು ಸುರಕ್ಷಿತವಾಗಿ ಮುಚ್ಚಿರುವುದನ್ನು ತಪಾಸಣೆ ಮಾಡಿ ಧೃಢೀಕರಿಸಬೇಕು. ಈ ಬಗ್ಗೆ ಜಂಟಿ ಧೃಡೀಕರಣವನ್ನು ಸ್ಥಳೀಯ ಪ್ರಾಧಿಕಾರಕ್ಕೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕಾಂಗ್ರೆಸ್‌ ಒಂದು ಪಕ್ಷವಾಗುವುದು’ ಯಾವಾಗ?

ಅಲ್ಲದೇ, ಜಮೀನಿನ ಮಾಲೀಕರು ಕೊಳವೆ ಬಾವಿ ದುರಸ್ತಿ ಮಾಡಲು ಪಂಪ್‌ ಅನ್ನು ಹೊರ ತಗೆದಾಗ ಕೊಳವೆಬಾವಿಗೆ ಕ್ಯಾಪ್‌ ಹಾಕಿ ಮುಚ್ಚಬೇಕು. ಕೊಳವೆ ಬಾವಿಯನ್ನು ಪುನಃಶ್ಚೇತನ ಮಾಡಲು ಇಚ್ಚಿಸಿದಲ್ಲಿ ಜಮೀನು ಮಾಲೀಕರು ಕೊಳವೆ ಬಾವಿಗೆ ಮುಚ್ಚಳದಿಂದ ಮುಚ್ಚಿ ಸುರಕ್ಷತೆಯನ್ನು ಕಾಪಾಡಬೇಕು.

ಕೊಳವೆ ಬಾವಿ ಕೊರೆಯುವಾಗ ಸೈನ್‌ ಬೋರ್ಡ್‌ ಕಡ್ಡಾಯ:
ಇನ್ನೂ ಕೊಳವೆ ಬಾವಿಯನ್ನು ಕೊರೆಯುವಾಗ ಎಲ್ಲರಿಗೂ ಕಾಣುವ ರೀತಿಯಲ್ಲಿ ಕೊಳವೆ ಬಾವಿ ಕೊರೆಯುತ್ತಿರುವ ಬಗ್ಗೆ ಎಚ್ಚರಿಕೆಯ ಬೋರ್ಡ್‌ ಅನ್ನು ಪ್ರದರ್ಶಿಸಬೇಕು. ಯಾವುದೇ ಅವಘಡಗಳು ಆಗದಂತೆ ಎಚ್ಚರವಹಿಸುವುದು ಕಡ್ಡಾಯವಾಗಿದೆ ಇದಕ್ಕಾಗಿ ಸುತ್ತಲೂ ಫೆನ್ಸಿಂಗ್‌ ನಿರ್ಮಿಸಿಕೊಳ್ಳಬೇಕು.

ಸ್ಥಳೀಯ ಪ್ರಾಧಿಕಾರ / ಅಧಿಕಾರಿಗಳ ಜವಾಬ್ದಾರಿ:
ಸ್ಥಳೀಯ ಪ್ರಾಧಿಕಾರ ಅಥವಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಯುವ ಸಂಧರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆಯ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಕೊರೆಸಲಾಗುತ್ತಿರುವ ಕೊಳವೆ ಬಾವಿಗಳ ಬಗ್ಗೆ ಅಂತರ್ಜಲ ಅಭಿವೃದ್ದಿ ಇಲಾಖೆಗೆ ಮಾಹಿತಿಯನ್ನು ಸಲ್ಲಿಸಬೇಕು. ಇಂಪ್ಲಿಮೆಂಟಿಂಗ್‌ ಏಜೆನ್ಸಿಯವರು ಸಹ ಕೊಳವೆ ಬಾವಿಯನ್ನು ಮುಚ್ಚುವ ಬಗ್ಗೆ ನಿಗಾವಹಿಸಬೇಕು. ಅಲ್ಲದೇ ಪಿಡಿಓಗಳು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೊಳವೆ ಬಾವಿ ಮುಚ್ಚುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೋರ್ಡ್‌ ಹಾಕುವುದನ್ನು ಕಡ್ಡಾಯಗೊಳಿಸಲಾಗಿವೆ ಎಂದು ಸಚಿವರಾದ ಎನ್‌ ಎಸ್‌ ಬೋಸರಾಜು ತಿಳಿಸಿದರು.

ಜೈಲು ಶಿಕ್ಷೆ ಹಾಗೂ ದಂಡ:
ಇಂಪ್ಲಿಮೆಂಟಿಂಗ್‌ ಏಜೆನ್ಸಿ ಹಾಗೂ ಡ್ರಿಲ್ಲಿಂಗ್‌ ಏಜೆನ್ಸಿಗಳು ಮಸೂದೆಯ 11 ಎ ಸೆಕ್ಷನ್‌ನಲ್ಲಿರುವ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಹತ್ತು ಸಾವಿರ ಜುಲ್ಮಾನೆ ಹಾಗೂ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸೆಕ್ಷನ್‌ 21 ಎ ನಿಯಮಗಳನ್ನು ಉಲ್ಲಂಘಿಸುವ ಇಂಪ್ಲಿಮೆಂಟಿಂಗ್‌ ಏಜೆನ್ಸಿ/ ಡ್ರಿಲ್ಲಿಂಗ್‌ ಏಜೆನ್ಸಿಗಳು / ಸರ್ವಿಸಿಂಗ್‌ ಏಜೆನ್ಸಿಗಳಿಗೆ 25 ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸುವ ಅವಕಾಶವನ್ನು ಈ ಮಸೂದೆಯಲ್ಲಿ ಅಳವಡಿಸಲಾಗಿದೆ. ಅಲ್ಲದೇ, ತಮ್ಮ ಜವಾಬ್ದಾರಿ/ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವಿಫಲವಾಗುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲು ಮಸೂದೆಯಲ್ಲಿ ನಿಯಮಗಳನ್ನು ಅಳವಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...