ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

Date:

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸುವ ಮೂಲಕ ಠಕ್ಕರ್ ನೀಡಲು ಮುಂದಾಗಿದ್ದಾರೆ.

ಧ್ರುವ್ ರಾಠಿಯವರು ಇತ್ತೀಚೆಗೆ ಬಿಡುಗಡೆಗೊಳಿಸಿದ್ದ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ಹಲವು ವಿಚಾರಗಳಿಗೆ ಸ್ಪಷ್ಟ ರೂಪವನ್ನು ಈ ವೀಡಿಯೊ ನೀಡಿತ್ತು. ವಿಡಿಯೋದಲ್ಲಿ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ? ಉನ್ನತ ತನಿಖಾ ಸಂಸ್ಥೆಗಳನ್ನು ಹೇಗೆ ದುರ್ಬಳಕೆ ಮಾಡಿದೆ ಎನ್ನುವ ಬಗ್ಗೆ ದಾಖಲೆ ಸಹಿತವಾಗಿ ವಿವರಿಸಿದ್ದರು.

ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಬ್ಲಾಕ್ ಮಾಡಿರುವುದು, ರಾಹುಲ್ ಗಾಂಧಿ ಅವರನ್ನು ತಡೆಯಲು ಬಿಜೆಪಿ ಏನೇನು ಮಾಡಿದೆ. ಎಲೆಕ್ಷನ್ ಬಾಂಡ್‌ಗಳು ರಾಜಕೀಯ ನಾಯಕರ ಬಂಧನಕ್ಕೆ ಹೇಗೆ ಕಾರಣವಾಗಿದೆ ಎನ್ನುವುದನ್ನು ಸಾಕಷ್ಟು ಆಧಾರಗಳೊಂದಿಗೆ ತಮ್ಮ ಪ್ರಮುಖ ಹಿಂದಿ ಚಾನೆಲ್‌ನಲ್ಲಿ ವಿವರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಬಲಪಂಥೀಯರು ಹಾಗೂ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರು ಇವರನ್ನು ಗುರಿಯಾಗಿರಿಸಿದ್ದರು. ಹೀಗಾಗಿ, ತನ್ನ ಸಂದೇಶಗಳು ದೇಶದ ಪ್ರತಿಯೊಬ್ಬ ಮತದಾರನಿಗೂ ತಲುಪಬೇಕು ಎನ್ನುವ ನಿಟ್ಟಿನಲ್ಲಿ ‘ಮಿಷನ್ 100 ಕೋಟಿ’ ಎಂಬ ಯೋಜನೆಯನ್ನು ಘೋಷಿಸಿದ್ದರು. ಇದರ ಬೆನ್ನಲ್ಲೇ ಎಐ ತಂತ್ರಜ್ಞಾನ ಬಳಸಿಕೊಂಡು ಇಂದು ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ್ ರಾಠಿ, “ತಮಿಳು, ತೆಲುಗು, ಬೆಂಗಾಳಿ, ಕನ್ನಡ, ಮರಾಠಿ ಸೇರಿ ಇಂದು 5 ಭಾರತೀಯ ಭಾಷೆಗಳಲ್ಲಿ ನನ್ನ ವಿಡಿಯೋ ಬಿಡುಗಡೆಯಾಗಿದೆ. ಈ ರಾಜ್ಯಗಳ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಪ್ರಮುಖ ವೀಡಿಯೊ ಈಗಾಗಲೇ ಈ ಚಾನಲ್‌ಗಳಲ್ಲಿ ಲೈವ್ ಆಗಿದೆ” ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಟ್ವೀಟ್ ಸದ್ಯ ವೈರಲಾಗುತ್ತಿದ್ದು, ಜನರು ತಮ್ಮ ಇಷ್ಟದ ಭಾಷೆಗಳನ್ನು ಆಯ್ಕೆ ಮಾಡಿಕೊಂಡು Subscribers ಆಗುತ್ತಿದ್ದಾರೆ. ಧ್ರುವ್ ರಾಠಿಯವರ ಪ್ರಮುಖ ಹಿಂದಿ ಚಾನೆಲ್ ಈಗಾಗಲೇ ಒಂದು ಕೋಟಿ 78 ಲಕ್ಷ(17.8M) Subcribers ಹೊಂದಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸದ್ಯ ಜರ್ಮನಿಯಿಂದ ವಾಪಸ್ ಭಾರತಕ್ಕೆ ಆಗಮಿಸಿರುವ ಧ್ರುವ್ ರಾಠಿ, ಬಿಜೆಪಿ ಹರಡುತ್ತಿರುವ ನಿರಂತರ ಸುಳ್ಳುಗಳ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿದ್ದಾರೆ. ಇತ್ತೀಚೆಗೆ ಬಿಜೆಪಿ ಬಿಡುಗಡೆಗೊಳಿಸಿದ್ದಂತಹಾ ಚುನಾವಣಾ ಪ್ರಣಾಳಿಕೆಯು ಎಷ್ಟು ಸುಳ್ಳಿನಿಂದ ಕೂಡಿದೆ ಎಂಬುದನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿದ್ದಾರೆ.

ದೇಶದ ಪ್ರಮುಖ ಟಿವಿ ಚಾನೆಲ್‌ಗಳು ಜನರ ಸಮಸ್ಯೆಗಳಿಗೆ ಕಿವಿಗೊಡದ ಹಿನ್ನೆಲೆಯಲ್ಲಿ ಜನರು ಧ್ರುವ್ ರಾಠಿಯಂತಹ ಹಲವಾರು ಯೂಟ್ಯೂಬರ್ಸ್‌ಗಳನ್ನು ನೆಚ್ಚಿಕೊಂಡು, ಅವರನ್ನು ಫಾಲೋ ಮಾಡುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...