ರೈತರ ಉತ್ಪಾದನೆಗೆ ಅವರೇ ಬೆಲೆ ನಿಗದಿ ಮಾಡುವಂತಾಗಬೇಕು: ಸಿಎಂ ಸಿದ್ದರಾಮಯ್ಯ

Date:

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿ, “ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.
ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ ಅಷ್ಟೆ” ಎಂದರು.

“GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು. ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಬೆಳೆ ಪರಿಹಾರ’ ಪರಿಕಲ್ಪನೆಯೇ ಸರ್ಕಾರದಲ್ಲಿ ಇಲ್ಲ, ರಾಜ್ಯಕ್ಕೆ ಬೇಕಿದೆ ಹೊಸ ಕಾಯ್ದೆ – ಕಾನೂನು

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

“ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ. ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ” ಎಂದರು.

“ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ” ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...