ಅಧಿಕಾರ ಬರುತ್ತೆ ಹೋಗುತ್ತೆ, ಕುಮಾರಸ್ವಾಮಿಗೆ ಹೆದರಿ ಕೂರುವ ರಕ್ತ ನನ್ನದಲ್ಲ: ಡಿ ಕೆ ಶಿವಕುಮಾರ್

Date:

ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಎಚ್ಚರಿಸಿದರು.

‘ನಪುಂಸಕ’ ಎಂದು ಟೀಕಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯೆಗೆ ಆಕ್ರೋಶ ವ್ಯಕ್ತಪಡಿಸಿ, ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಎಷ್ಟು ದಿನ ಸಹಿಸಲಿ. ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಡುಗಡೆ ಮಾಡಲಿ” ಎಂದು ಆಗ್ರಹಿಸಿದರು.

“ನಾನು ವಿಧವೆಯರಿಗೆ ಗನ್ ಪಾಯಿಂಟ್ ನಲ್ಲಿಟ್ಟು ಈ ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಾಗಿದ್ದರೆ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ದೂರು ನೀಡಿ ಎಫ್ಐಆರ್ ದಾಖಲಿಸಲಿ” ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ಒಬ್ಬರೇ ಗಂಡಸು

“ಕುಮಾರಸ್ವಾಮಿ ಒಬ್ಬರೇ ಗಂಡಸು. ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ. ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ. ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು. ನಾನು ಜೈಲಲ್ಲಿ ಇದ್ದಾಗ ಅವರು ಬಂದು ನನ್ನ ನೋಡಿದ್ದರು. ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ” ಎಂದರು ತಿರುಗೇಟು ನೀಡಿದರು.

ಗಣಿ ಡಿನೋಟಿಫಿಕೇಶನ್ ಪ್ರಕರಣಲ್ಲಿ ವಿಚಾರಣೆಗೆ ಅವಕಾಶ ನೀಡಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಆ ಪ್ರಕರಣದ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ನನ್ನ ಮೇಲೂ ಡಿನೋಟಿಫಿಕೇಶನ್ ಕೇಸು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಯಡಿಯೂರಪ್ಪ ಶಿಫಾರಸ್ಸಿನ ಮೇಲೆ ಮಾಡಿದ್ದೆ. ಶಾಸಕ ಪತ್ರ ಬರೆದ ಕಾರಣ 16 (2) ಆಗಿರಲಿಲ್ಲ ಡಿನೋಟಿಫಿಕೇಶನ್ ಮಾಡಲಾಯಿತು. ನನ್ನ ಮೇಲೆ ಯಾಕೆ ಎಫ್ಐಆರ್ ಆಯಿತು? ಅದೇ ಆರ್.ಅಶೋಕ್ ಸೇರಿದಂತೆ ಬೇರೆ ಮಂತ್ರಿಗಳ ಮೇಲೆ ಕೇಸ್ ಆಗಲಿಲ್ಲ ಯಾಕೆ? ನಾನು ಕಾನೂನು ಸಮರದಲ್ಲಿ ಗೆದ್ದಿದ್ದೇನೆ. ಇದರಲ್ಲಿ ನಾನು ಅನುಭವಿಸಿರುವುದು ನನಗೆ ಮಾತ್ರ ಗೊತ್ತು” ಎಂದರು.

ಕುಮಾರಸ್ವಾಮಿ ಸರ್ಕಾರ ಬೀಳಿಸುವ ಮಾತು

ಈ ಸರ್ಕಾರ ತೆಗೆಯುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಕುಮಾರಸ್ವಾಮಿ ಯಾವ ಆಧಾರದ ಮೇಲೆ 10 ತಿಂಗಳಲ್ಲಿ ಸರ್ಕಾರ ಬೀಳಿಸುತ್ತೇವೆ ಎಂದಿದ್ದಾರೆ? ಕುಮಾರಸ್ವಾಮಿ ಅವರ ಸರ್ಕಾರವನ್ನೇ ಬಿಜೆಪಿಯವರು ಬೀಳಿಸಿದ್ದರಲ್ಲಾ ಅದರ ಬಗ್ಗೆ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ಅಶ್ವತ್ಥನಾರಾಯಣ, ಅಶೋಕ್ ಅವರ ಬಗ್ಗೆ ಮಾತನಾಡುತ್ತಿಲ್ಲ? ನಮ್ಮ ಸರ್ಕಾರವನ್ನು ಹೇಗೆ 10 ತಿಂಗಳಲ್ಲಿ ತೆಗೆಯುತ್ತಾರೆ. ನಮ್ಮ ಸರ್ಕಾರವನ್ನು ಮುಟ್ಟಲಿ ನೋಡೋಣ” ಎಂದು ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...