ಚೀನಾದಿಂದ ರಸಗೊಬ್ಬರ ಪೂರೈಕೆ ಸ್ಥಗಿತ, ಮೇಕ್ ಇನ್ ಇಂಡಿಯಾ- ಆತ್ಮನಿರ್ಭರ ಭಾರತ ವಿಫಲ: ಮಲ್ಲಿಕಾರ್ಜುನ ಖರ್ಗೆ

Date:

ಬೇರೆ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧ ಹೇರದಿದ್ದರೂ ಕಳೆದೆರಡು ತಿಂಗಳಿನಿಂದ ಭಾರತಕ್ಕೆ ಚೀನಾ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ. ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಭಾರತವು ಚೀನಾದಿಂದ ಶೇ.80ರಷ್ಟು ವಿಶೇಷ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತದೆ. ಇವುಗಳು ಹಣ್ಣು, ತರಕಾರಿ ಹಾಗೂ ಇನ್ನಿತರ ಲಾಭದಾಯಕ ಕೃಷಿಗಳ ಇಳುವರಿ ಹೆಚ್ಚಿಸುತ್ತದೆ. ಚೀನಾದ ಈ ನಡೆ ಈಗಾಗಲೇ ಡಿಎಪಿ ಹಾಗೂ ಯೂರಿಯಾದ ಕೊರತೆ ಎದುರಿಸುತ್ತಿರುವ ರೈತರಿಗೆ ಇನ್ನಷ್ಟು ಹಾನಿಮಾಡುವುದಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿಯವರೇ, ವರದಿಗಳ ಪ್ರಕಾರ ಭಾರತದ ಉತ್ಪಾದನಾ ವಲಯದಿಂದ ಚೀನಾ ತನ್ನ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಂಡಿದೆ. ಚೀನಾದ ಕಂಪನಿಗಳಿಗೆ ಕೆಂಪು ಹಾಸಿನ ಸ್ವಾಗತ ನೀಡಲು ಡೋಕ್ಲಾಂ ಹಾಗೂ ಗಲ್ವಾನ್ ಅನ್ನು ಮರೆಯಲಾಯಿತು. ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ ಯೋಜನೆ (ಪಿಎಲ್‌ಐ) ಯೋಜನೆಯ ಲಾಭ ಪಡೆಯಲು ಚೀನಾ ನಾಗರಿಕರಿಗೆ ಸುಲಭವಾಗಿ ವಿಸಾ ನೀಡಲಾಯಿತು ಎನ್ನುವುದು ನಿಜವಲ್ಲವೇ?” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್

“ನಿಮ್ಮ ಸರ್ಕಾರದ ಚೀನಾ ಗ್ಯಾರಂಟಿಗೆ ಯಾವುದೇ ಎಕ್ಸ್‌ಪೈರಿ ದಿನಾಂಕ ಇಲ್ಲ. ಗಲ್ವಾನ್‌ನಲ್ಲಿ 20 ವೀರ ಯೋಧರ ಬಲಿದಾನದ ಬಳಿಕವೂ ನೀವು ಚೀನಾಗೆ ಕ್ಲಿನ್ ಚಿಟ್ ನೀಡಿದ್ದೀರಿ. ಇಂದು ಚೀನಾ ಅದರ ಪೂರ್ಣ ಲಾಭ ಪಡೆಯುತ್ತಿದೆ. ನಾವು ಅಸಹಾಯಕರಾಗಿ ನೋಡುತ್ತಿದ್ದೇವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಅಟೋಮೊಬೈಲ್‌, ಇ.ವಿ, ರಕ್ಷಣೆ ಹಾಗೂ ಭಾರಿ ಭದ್ರತೆ ಇರುವ ಕರೆನ್ಸಿಗಳ ಮುದ್ರಣಕ್ಕೆ ಅತಿ ಅಗತ್ಯವಿರುವ ಅಪರೂಪದ ಲೋಹಗಳನ್ನು ಭಾರತಕ್ಕೆ ರಫ್ತು ಮಾಡಲು ಚೀನಾ ನಿರ್ಬಂಧ ಹೇರಿದೆ. ಮೋದಿ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ” ಎಂದು ದೂರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...