ಬಿಜೆಪಿ ಮತ್ತು ಶಿಂಧೆ ನಡುವೆ ಮಹಾ ಜಗಳ; ಶಿವಸೇನೆ ಕ್ಷೇತ್ರಗಳ ಕಬಳಿಕೆಗೆ ಬಿಜೆಪಿ ತಂತ್ರ

Date:

ಮಹಾರಾಷ್ಟ್ರದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಘೋಷಣೆ ವಿಳಂಬವಾಗುತ್ತಿದೆ. ಶಿವಸೇನೆ ತನ್ನ ಸಾಂಪ್ರದಾಯಿಕ ಕ್ಷೇತ್ರ ಕಲ್ಯಾಣ್, ಥಾಣೆ, ನಾಸಿಕ್ ಹಾಗೂ ಸಿಂಧುದುರ್ಗ-ರತ್ನಗಿರಿ ಎಂಬ ನಾಲ್ಕು ಲೋಕಸಭಾ ಸ್ಥಾನಗಳಿಗಾಗಿ ಬಿಜೆಪಿ ಬೇಡಿಕೆ ಇಟ್ಟಿದೆ.

ಈ ನಾಲ್ಕು ಕ್ಷೇತ್ರಗಳಲ್ಲಿ 2014 ಮತ್ತು 2019ರ ಚುನಾವಣೆಯಲ್ಲಿ ಶಿವಸೇನೆ ಗೆದ್ದಿತ್ತು. ಆದರೆ, ಈ ಬಾರಿ, ಈ ಕ್ಷೇತ್ರಗಳಲ್ಲಿ ಶಿವಸೇನೆಗೆ ಗೆಲುವು ಕಠಿಣ ಎಂಬ ತನ್ನ ಆಂತರಿಕ ಸಮೀಕ್ಷಾ ವರದಿಯನ್ನು ಮುಂದಿಟ್ಟಿರುವ ಬಿಜೆಪಿ, ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡುವಂತೆ ಕೇಳಿದೆ. ಆದರೆ, ಶಿಂಧೆ ಅವರು ಬಿಜೆಪಿ ಬೇಡಿಕೆಗೆ ನಕಾರ ತೋರುತ್ತಿದ್ದಾರೆ.

“ಚರ್ಚೆಯಲ್ಲಿರುವ ನಾಲ್ಕು ಕ್ಷೇತ್ರಗಳಲ್ಲಿ ಒಂದಾದ ಕಲ್ಯಾಣ್ ಕ್ಷೇತ್ರದಲ್ಲಿ ಶಿಂಧೆ ಅವರ ಪುತ್ರ ಡಾ. ಶ್ರೀಕಾಂತ್ ಶಿಂಧೆ ಅವರು ಸಂಸದರಾಗಿದ್ದಾರೆ. ಬಿಜೆಪಿಯ ನಿಲುವನ್ನು ಒಪ್ಪಿಕೊಂಡರೆ, ಶಿವಸೇನೆ ನಾಯಕರು ಮತ್ತು ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನೆಯಾಗುತ್ತದೆ” ಎಂದು ಶಿಂಧೆ ಬಣದ ನಾಯಕರೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಸೇನೆ ತನ್ನ ಎಂಟು ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಕಲ್ಯಾಣ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ತಮ್ಮ ಮಗ ಡಾ. ಶ್ರೀಕಾಂತ್ ಅವರ ಹೆಸರನ್ನು ಇನ್ನೂ ಘೋಷಿಸಿಲ್ಲ. ಶಿಂಧೆಯವರು ತಮ್ಮ ಸ್ವಂತ ಮಗನಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ, ಅವರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಯಾವ ನ್ಯಾಯ ಸಿಗುತ್ತದೆ ಎಂಬುದಾಗಿಯೂ ಚರ್ಚೆಯಾಗುತ್ತಿದೆ.

“ಒಂದು ವೇಳೆ, ಕಲ್ಯಾಣ್ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟರೆ, ಶಿಂಧೆ ನಾಯಕತ್ವದ ಬಗ್ಗೆ ತಪ್ಪು ಅಭಿಪ್ರಾಯಗಳು ಮೂಡುತ್ತವೆ. ಇದು, ಶಿಂಧೆ ನೇತೃತ್ವದ ಶಿವಸೇನೆಗೆ ಮಾತ್ರವಲ್ಲ, ಬಿಜೆಪಿಗೂ ಹಾನಿ ಮಾಡುತ್ತದೆ” ಎಂದು ಶಿವಸೇನೆಯ ಮುಖಂಡರೊಬ್ಬರು ಹೇಳಿದ್ದಾರೆ.

“ಬಿಜೆಪಿ ನಮಗೆ ಹಿರಿಯ ಸಹೋದರನಂತಿದೆ ಎಂದು ನಾವು ಭಾವಿಸುತ್ತೇವೆ. ಆದರೆ, ಬಿಜೆಪಿಯು ಮೈತ್ರಿ ಪಾಲುದಾರರನ್ನು ನಿರ್ಲಕ್ಷಿಸುವಷ್ಟು ‘ಬಾಸ್’ ಆಗಬಾರದು” ಎಂದು ಅವರು ಹೇಳಿದ್ದಾರೆ.

“ಕೆಲವು ಸಮೀಕ್ಷೆಗಳು ಶಿವಸೇನೆಯ ಸೀಟುಗಳನ್ನು ಬಿಜೆಪಿ ಕಸಿದುಕೊಳ್ಳುತ್ತಿದೆ ಎಂಬುದನ್ನು ತೋರಿಸಿವೆ. ಬಿಜೆಪಿ ಜೊತೆ ವ್ಯವಹರಿಸುವುದು ಸುಲಭವಲ್ಲ ಎಂಬುದನ್ನು ಶಿಂಧೆ ಅರಿತುಕೊಳ್ಳಬೇಕು. ಬಿಜೆಪಿ ತನ್ನ ಮೈತ್ರಿ ಪಾಲುದಾರರ ಹಿತಾಸಕ್ತಿಯನ್ನು ಎಂದಿಗೂ ರಕ್ಷಿಸುವುದಿಲ್ಲ” ಎಂದು ಉದ್ದತ್ ನೇತೃತ್ವದ ಶಿವಸೇನೆಯ ನಾಯಕಿ ಸುಶಾಮಾ ಅಂಧಾರೆ ಹೇಳಿದ್ದಾರೆ.

“ಉದ್ಧವ್ ಠಾಕ್ರೆ ವ್ಯವಸ್ಥಿತವಾಗಿ ಬಿಜೆಪಿಯನ್ನು ನಿಭಾಯಿಸಿದರು. ಆದರೆ, ಶಿಂಧೆ ವಿಫಲರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಥಾಣೆಯಲ್ಲಿ ಮಾಜಿ ಸಚಿವ ಗಣೇಶ್ ನಾಯಕ್ ಅವರ ಪುತ್ರ ಸಂಜೀವ್ ನಾಯ್ಕ್, ಕಲ್ಯಾಣ್‌ನಲ್ಲಿ ಸಚಿವ ರವೀಂದ್ರ ಚವ್ಹಾಣ್ ಹಾಗೂ ಸಿಂಧುದುರ್ಗ-ರತ್ನಗಿರಿಯಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಕಣಕ್ಕಿಳಿಸಲು ಬಿಜೆಪಿ ಬಯಸಿದೆ. ಅಲ್ಲದೆ, ಶಿವಸೇನೆಯ ಮತ್ತೊಂದು ಭದ್ರಕೋಟೆಯಾಗಿದ್ದ ಶಾ ಸಂಭಾಜಿ ನಗರದಲ್ಲಿಯೂ ಬಿಜೆಪಿ ಸ್ಪರ್ಧಿಸುತ್ತದೆ ಎಂದು ಈ ಹಿಂದೆ ಹೇಳಿಕೊಂಡಿದೆ.

ಬಿಜೆಪಿ ಮತ್ತು ಶಿವಸೇನೆ (ಶಿಂಧೆ) ನಡುವಿನ ಸೀಟು ಹಂಚಿಕೆ ಬಿಕ್ಕಟ್ಟಿನಿಂದಾಗಿ ಶಿವಸೇನೆಯ ಕಾರ್ಯಕರ್ತರು ಮತ್ತು ಮುಖಂಡರು ಶಿಂಧೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಬಿಜೆಪಿಯ ನಿಲುವನ್ನು ಒಪ್ಪಿಕೊಂಡರೆ, ಅದು ಶಿವಸೇನೆ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...