ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ದೂರು

Date:

  • ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತೇಜಸ್ವಿ ಸೂರ್ಯ
  • ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದ ವಕ್ತಾರ ರಮೇಶ್ ಬಾಬು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭಯೋತ್ಪಾದನಾ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ ಬರೆದಿದೆ.

ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಅವರಿಗೆ ಪತ್ರ ಬರೆದಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಮಾತನಾಡಿರುವ ವಿಡಿಯೋ ಮತ್ತು ಪತ್ರಿಕಾ ವರದಿಗಳನ್ನು ಲಗತ್ತಿಸಿ ದೂರು ನೀಡಿದ್ದಾರೆ.

ಮೇ 3ರಂದು ತೇಜಸ್ವಿ ಸೂರ್ಯ ಮತ್ತು ಗೌರವ್ ಭಾಟಿಯ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಆಗ, “ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗೂಂಡಾ ರಾಜ್ಯ, ಮಾಫಿಯಾ ರಾಜ್ಯ, ಇಸ್ಲಾಮೀಕರಣ ಹಾಗೂ ಭಯೋತ್ಪಾದನಾ ಪರಿಸ್ಥಿತಿ ನಿರ್ಮಾಣವಾಗುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೇಜಸ್ವಿ ಸೂರ್ಯ ಅವರ ಹೇಳಿಕೆ ಉಲ್ಲೇಖಿಸಿರುವ ರಮೇಶ್ ಬಾಬು, “ಚುನಾವಣಾ ಆಯೋಗ ಪಾರದರ್ಶಕ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಮತ್ತು ಗೌರವ್ ಭಾಟಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು” ಎಂದು ಕೆಪಿಸಿಸಿ ಪರವಾಗಿ ಮನವಿ ಮಾಡಿದ್ದಾರೆ.

“ನಮ್ಮ ಪಕ್ಷದ ವಿರುದ್ಧ ಸುಳ್ಳು ಮತ್ತು ದ್ವೇಷಪೂರಿತ ಆರೋಪವನ್ನು ಮಾಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಮೇಲೆ ಇವರು ಮಾಡಿರುವ ಗುರುತರವಾದ ಮತ್ತು ದ್ವೇಷಪೂರಿತವಾದ ಆರೋಪವು ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷದ ನಾಯಕರನ್ನು ತೇಜೋವಧೆ ಮಾಡುವ ದುರುದ್ದೇಶದಿಂದ ಕೂಡಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ನಾಯಕರ ಹೇಳಿಕೆ ಮಾದರಿ ನೀತಿಸಂಹಿತೆಗೆ ವಿರುದ್ಧವಾಗಿದೆ. ಮತದಾರರಲ್ಲಿ ಮತ್ತು ಜನಸಾಮಾನ್ಯರಲ್ಲಿ ಕಾಂಗ್ರೆಸ್‌ ಪಕ್ಷದ ಬಗ್ಗೆ ಪ್ರಚೋದನೆ ಮಾಡುವ ದುರುದ್ದೇಶದಿಂದ ಕೂಡಿದೆ. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ತಪ್ಪು ಮಾಹಿತಿ ನೀಡುವ ಒಳಸಂಚಿನ ಭಾಗವಾಗಿದೆ” ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶೋಭಾ ಕರಂದ್ಲಾಜೆ ಸೀತಾಮಾತೆ ಆಗಲಿ, ಶೂರ್ಪನಕಿ ಪಾತ್ರ ಬೇಡ: ರಮೇಶ್‌ ಬಾಬು

“ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣದ ಸಂಸದ. ಅವರು ಮಾತನಾಡುವ ವೇಳೆ ಎಚ್ಚರದಿಂದ ಮತ್ತು ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಗುರಿಯಾಗಿಸಿಕೊಂಡಿರುವ ಅವರು ಪಕ್ಷದ ವಿರುದ್ಧ ಪ್ರಚೋದಿಸಿದ್ದಾರೆ” ಎಂದು ರಮೇಶ್ ಬಾಬು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ತೇಜಸ್ವಿ ಸೂರ್ಯ ಮತ್ತು ಗೌರವ್ ಭಾಟಿಯಾ ಧರ್ಮಾಧಾರಿತವಾಗಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂಬ ದುರುದ್ದೇಶಪೂರಿತ ಆರೋಪ ಮಾಡಿ ಕಾಂಗ್ರೆಸ್ ಪಕ್ಷ ಧರ್ಮ ವಿರೋಧಿ ಎಂಬ ಸಂದೇಶ ನೀಡಲು ಪ್ರಯತ್ನಿಸಿದ್ದಾರೆ” ಎಂದಿದ್ದಾರೆ.

“ಬಿಜೆಪಿ ನಾಯಕರ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪಿಗೆ ವಿರುದ್ಧವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ತೇಜೋವಧೆ ಮಾಡುವ ಮತ್ತು ಕಾಂಗ್ರೆಸ್ ಪಕ್ಷದ ಹೆಸರಿಗೆ ಮಸಿ ಬಳಿಯುವ ವ್ಯವಸ್ಥಿತ ಸಂಚಾಗಿರುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...