ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು

Date:

ರಾಷ್ಟ್ರ ರಕ್ಷಣಾ ಪಡೆ‌ ಎಂಬ ಸಂಘಟನೆ ಕಟ್ಟಿಕೊಂಡಿರುವ ಕೊಲೆ ಆರೋಪಿ, ಬಲಪಂಥೀಯ ಮುಖಂಡ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ.

ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ನಿನ್ನೆ(ಡಿ.23)ರಂದು ಬೆಂಗಳೂರಿನ ಹೆಬ್ಬಾಳದ ಸಮೀಪವಿರುವ ಮಾಲ್ ಆಫ್ ಏಷ್ಯಾ ಬಳಿ ಹೋಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು, ಯಾಕೆ ಕ್ರಿಸ್ಮಸ್ ಟ್ರೀ ಗಳ ಅಲಂಕಾರ ಮಾಡಿದ್ದೀರಾ ಎಂದು ಮಾಲ್‌ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಸ್‌ಮಸ್‌ ಟ್ರೀ ಅಲಂಕಾರ ಮಾಡಿದ್ದಲ್ಲದೇ 200 ರೂ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಾ? ಇದಕ್ಕೆ ಕಾನೂನು ಇದ್ಯಾ? ಹಿಂದೂ ಹಬ್ಬಗಳಿಗೆ ನೀವು ಇದೇ ರೀತಿಯ ಅಲಂಕಾರ ಮಾಡ್ತೀರ? 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಕೂಡ ಹೀಗೆ ಅಲಂಕಾರ ಮಾಡಬೇಕು. ಮಾಡದಿದ್ರೆ ಮಾಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನು ಓದಿದ್ದೀರಾ? ನಮ್ಮನ್ನು ಟಿಪ್ಪು ಸುಲ್ತಾನ್ ಪರ ಎನ್ನುವವರು ಬ್ರಿಟೀಷರ ಬೂಟು ನೆಕ್ಕುತ್ತಿದ್ದರು: ಬಿಕೆ ಹರಿಪ್ರಸಾದ್

ಈ ಬಗ್ಗೆ ಮಾಲ್‌ನ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದಿದ್ದ ಪೊಲೀಸರು, ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನುಯ ವಶಕ್ಕೆ ಪಡೆದುಕೊಂಡಿದ್ದರು. ಆ ಬಳಿಕ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ನೀಡಿದ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...