ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

Date:

“ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು” ಎಂದು ಚುನಾವಣಾ ಆಯೋಗಕ್ಕೆ ಸಂಸದ ಡಿ.ಕೆ. ಸುರೇಶ್ ಆಗ್ರಹಿಸಿದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಈ ಸಂದರ್ಭದಲ್ಲೇ ಕುಮಾರಸ್ವಾಮಿ ಅವರ ಗ್ಯಾರಂಟಿ ಯೋಜನೆ ಹಾಗೂ ಮಹಿಳೆಯರ ಕುರಿತ ಹೇಳಿಕೆ ಬಗ್ಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದು, “ಕುಮಾರಸ್ವಾಮಿ ಅವರು ಪ್ರತಿ ಹಂತದಲ್ಲೂ ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಈ ಹಿಂದೆಯೂ ಅನೇಕ ಬಾರಿ ಇಂತಹ ಹೇಳಿಕೆ ನೀಡಿದ್ದಾರೆ. ಮಹಿಳೆಯರು ಗ್ಯಾರಂಟಿ ಪಡೆಯುತ್ತಿರುವುದರನ್ನು ಬೇರೆ ರೀತಿ ವ್ಯಾಖ್ಯಾನ ಮಾಡಿರುವುದು ಮಹಿಳಾ ಕುಲಕ್ಕೆ ಮಾಡಿದ ಅಪಮಾನ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಕುಮಾರಸ್ವಾಮಿ ಕ್ಷಮೆಯಾಚನೆಗೆ ಅಕ್ಕೈ ಪದ್ಮಶಾಲಿ‌ ಒತ್ತಾಯ

“ಸ್ವಾಭಿಮಾನದ ಬದುಕು ಬದುಕಲು ನಾವು ಈ ಯೋಜನೆ ಕೊಟ್ಟಿದ್ದೇವೆ. ಮಹಿಳಾ ಸಬಲೀಕರಣದ ಬಗ್ಗೆ ನಾವೆಲ್ಲರೂ ಮಾತನಾಡುತ್ತೇವೆ. ಅದಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮದ ಬಗ್ಗೆ ಇಷ್ಟು ಕೀಳಾಗಿ ಮಾತನಾಡಿರುವುದು ಎಲ್ಲರೂ ತಲೆತಗ್ಗಿಸುವ ವಿಚಾರ. ಚುನಾವಣಾ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಈ ಗ್ಯಾರಂಟಿ ಯೋಜನೆ ಮಹಿಳೆಯರು ಹಾಗೂ ಅವರ ಕುಟುಂಬದ ಆರ್ಥಿಕ ವ್ಯವಸ್ಥೆಗೆ ಬದಲಾವಣೆ ತಂದಿದೆ. ಇದನ್ನು ಸಹಿಸಲಾಗದೇ ಇಂತಹ ಹೇಳಿಕೆ ನೀಡಲಾಗುತ್ತಿದೆ” ಎಂದು ಆರೋಪಿಸಿದರು.

ಪ್ರಧಾನಿ ಹೇಳಿಕೆಗೆ ಸುರೇಶ್ ಕಿಡಿ

ಡಿ.ಕೆ ಸಹೋದರರು ಬೇರೆ ರಾಜ್ಯಗಳಿಗೆ ಹಣ ರವಾನಿಸುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಅವರ ಆರೋಪದ ಬಗ್ಗೆ ಉತ್ತರಿಸಿದ ಡಿಕೆ ಸುರೇಶ್ ಅವರು, “ಪ್ರಧಾನಮಂತ್ರಿಗಳು ಮೊದಲು ನಮ್ಮ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ನೀಡುತ್ತಿರುವ ಬಗ್ಗೆ ಮಾತನಾಡಲಿ. ಬೇರೆ ರಾಜ್ಯಗಳಿಗೆ ಯಾಕೆ ಹೆಚ್ಚು ಹಣ ನೀಡಿ ನಮಗೆ ಅನ್ಯಾಯ ಮಾಡುತ್ತಿದ್ದಾರೆ? ಕರ್ನಾಟಕಕ್ಕೆ ಅವರ ಕೊಡುಗೆ ಏನು? ನೀರಾವರಿ ವಿಚಾರದಲ್ಲಿ ಯಾವ ಸಮಸ್ಯೆ ಬಗೆಹರಿಸಿದ್ದಾರೆ? ಹತ್ತು ವರ್ಷಗಳಲ್ಲಿ ಬೆಂಗಳೂರಿಗೆ ಕೊಟ್ಟಿರುವ ಕೊಡುಗೆ ಏನು? ಬೆಂಗಳೂರು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಏನು ಎಂದು ಪ್ರಧಾನಮಂತ್ರಿಗಳು ಹೇಳಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

“ಕೇವಲ ರಾಜಕೀಯ ಭಾಷಣ ಮಾಡಿ ಜನರ ದಾರಿ ತಪ್ಪಿಸುವುದು ಅಪ್ರಸ್ತುತ. ಅವರು ಮಾಧ್ಯಮಗಳ ಮೂಲಕ ಎಷ್ಟು ಸುಳ್ಳು ಹೇಳಿದ್ದಾರೆ? ಅವರ ಯಾವ ಕೆಲಸ ಮಾಡಿದ್ದಾರೆ ಎಂದು ಹೇಳಬೇಕು. ಈ ದೇಶದ ಯುವಕರನ್ನು ಹೇಗೆ ದಾರಿ ತಪ್ಪಿಸಿದ್ದೀರಿ ಎಂದು ಸಾರ್ವಜನಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಬೇರೆಯವರ ಮೇಲೆ ಸುಮ್ಮನೆ ಆರೋಪ ಮಾಡಿ ಹೋದರೆ ಪ್ರಯೋಜನವಿಲ್ಲ. ಇದನ್ನು ಜನ ನೋಡಿದ್ದಾರೆ. ಇದಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.

” ಜನ ನನಗೆ ಬೆಂಬಲ ನೀಡುತ್ತಿದ್ದಾರೆ”

ಪಕ್ಷ ಸೇರ್ಪಡೆ ವಿಚಾರವಾಗಿ ಮಾಧ್ಯಮದ ಪ್ರಶ್ನೆಗೆ, “ಇಂದು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಗಳಿಗಿಂತ ಹೆಚ್ಚಿನ ಉತ್ಸಾಹ ಹಾಗೂ ಪ್ರೋತ್ಸಾಹ ಕಾಣಿಸುತ್ತಿದೆ. ಇಂದು ನಮ್ಮ ವಿರುದ್ಧ ನಡೆಯುತ್ತಿರುವ ಬೇರೆ ರೀತಿಯ ಪ್ರಚಾರಕ್ಕೆ ವಿರುದ್ಧವಾಗಿ ಜನ ನನಗೆ ಬೆಂಬಲ ನೀಡುತ್ತಿದ್ದಾರೆ” ಎಂದರು.

ಇದನ್ನು ಓದಿದ್ದೀರಾ?   ಮಹಿಳೆಯರ ಕುರಿತು ಎಚ್‌ಡಿಕೆ ಆಕ್ಷೇಪಾರ್ಹ ಹೇಳಿಕೆ; ಪ್ರಕರಣ ದಾಖಲಿಸಲು ಮುಂದಾದ ಮಹಿಳಾ ಆಯೋಗ

ರಾಜ್ಯ ಮಹಿಳಾ ಆಯೋಗದಿಂದ ಕೇಸ್

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಸುಮೋಟೋ‌ ಪ್ರಕರಣ ದಾಖಲಿಸಿಕೊಂಡಿದ್ದು, ನೋಟಿಸ್‌ ಜಾರಿ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...