ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಎಫ್‌ಐಆರ್‌

Date:

“ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡ ಆರೋಪ ಮೇಲೆ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕನ್ನಡ ನ್ಯೂಸ್ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ಹಾವೇರಿಯಲ್ಲಿ ರೈತರೊಬ್ಬರು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಮಾಡಿದ್ದವು. ಕೆಲವು ಮಾಧ್ಯಮಗಳು ಸಂಸದ ತೇಜಸ್ವಿ ಸೂರ್ಯ ಅವರ ಟ್ವೀಟ್ ಆಧರಿಸಿ ಸುದ್ದಿ ಮಾಡಿದ್ದವು.

ಸಂಸದ ತೇಜಸ್ವಿ ಸೂರ್ಯ, ಕನ್ನಡ ದುನಿಯಾ ಸಂಪಾದಕ ಹಾಗೂ ಕನ್ನಡ ನ್ಯೂಸ್‌ ಪತ್ರಿಕೆಯ ಸಂಪಾದಕರ ಮೇಲೆ ಹಾವೇರಿಯ ಸಿಇಎನ್‌ (ಸೈಬರ್‌ ಎಕನಾಮಿಕ್‌ ಮತ್ತು ನಾರೋಟಿಕ್ಸ್ )‌ ಠಾಣೆಯಲ್ಲಿ ಸುನಿಲ್‌ ಹುಚ್ಚಣ್ಣನವರ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಇ-ಪೇಪರ್‌ನಲ್ಲಿ ಬಂದಿರುವ ಸುದ್ದಿಯನ್ನು ಫ್ಯಾಕ್ಟ್‌ಚೆಕ್‌ ಮಾಡಿದಾಗ ಪ್ರಸ್ತುತದಲ್ಲಿ ಹಾವೇರಿ ಜಿಲ್ಲೆಯಲ್ಲಿ ಈ ರೀತಿ ವಕ್ಷ ವಿಷಯಕ್ಕೆ ಸಂಬಂಧಿಸಿದಂತೆ ರೈತ ಆತ್ಮಹತ್ಯೆ ಪ್ರಕರಣ ನಡೆದಿರುವುದಿಲ್ಲ. ದಿನಾಂಕ: 06/01/2022 ರಂದು ಆಡೂರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರನಗಿರಿ ಗ್ರಾಮದ ರೈತ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಷಯವಾಗಿದ್ದು, ಈ ಕುರಿತು ಈಗಾಗಲೆ ಆಡೂರ ಪೊಲೀಸ್ ಠಾಣೆ ಯುಡಿಆರ್ ನಂ. 3/2022 ಕಲಂ 174 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿ ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ಅವರಿಗೆ ಸಲ್ಲಿಸಲಾಗಿದೆ. ಸದರಿ ಪ್ರಕರಣ ಮುಕ್ತಾಯವಾಗಿರುತ್ತದೆ. ಇದೇ ಸುದ್ದಿಯನ್ನು ಪ್ರಸ್ತುತ ವಕ್ಷ ವಿಚಾರಕ್ಕೆ ನಡೆದಿದೆ ಅಂತಾ ಬಿಂಬಿಸಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಲಾಗಿದೆ. ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸದೆ ಸಂಸದ ತೇಜಸ್ವಿ ಸೂರ್ಯ, ‘X’ ಖಾತೆಯಲ್ಲಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಸುನಿಲ್‌ ಹುಚ್ಚಣ್ಣನವರ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತೇಜಸ್ವಿ 458x1024 1

ಈ ಸುದ್ದಿ ಓದಿದ್ದೀರಾ? ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ

ಸುಳ್ಳು ಸುದ್ದಿ ಹರಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಂಸದರಾಗಿ ಜನರಿಗೆ ಸುಳ್ಳು ಸುದ್ದಿ ಹಂಚಿ ದಾರಿ ತಪ್ಪಿಸುತ್ತಿದ್ದಾರೆ ಎಂದು ನೆಟ್ಟಿಗರು ಟೀಕಿಸಿದ್ದರು. ಮಾಧ್ಯಮಗಳು ಈ ಸುದ್ದಿ ಪ್ರಕಟಿಸುತ್ತಿದ್ದಂತೆ ಸ್ಪಷ್ಟನೆ ನೀಡಿದ ಹಾವೇರಿ ಪೊಲೀಸರು “ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟಿಸಿದೆ. ಆದರೆ ಈ ಸುದ್ದಿ ಸುಳ್ಳು, ಈ ರೀತಿ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

ಯಾವಾಗ ಈ ಸುದ್ದಿ ಸುಳ್ಳು, ಈ ರೀತಿ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಹಾವೇರಿ ಪೊಲೀಸರು ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕೂಡ ಎಕ್ಸ್‌ ಖಾತೆಯಲ್ಲಿ ಈ ಸುಳ್ಳು ಸುದ್ದಿ ಹಂಚಿಕೊಂಡು ನಂತರ ಡಿಲೀಟ್‌ ಮಾಡಿದ್ದಾರೆ.

WhatsApp Image 2024 11 07 at 10.16.19 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...