ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

Date:

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಮೆಹಬೂಬಾ ಮುಫ್ತಿ ಮತ್ತು ಅವರ ಪಕ್ಷದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದ್ದು ಸೆಕ್ಷನ್ 144 ಅನ್ನು ಉಲ್ಲಂಘಿಸಿದ ಕಾರಣ ಮೆಹಬೂಬಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಮೆಹಬೂಬಾ ಮುಫ್ತಿ ಅವರು ‘ತಮಾಷೆ’ ಎಂದು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತಮಾಷೆಯಾಗಿದೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ಪಿಡಿಪಿ ತೆರಬೇಕಾದ ಬೆಲೆ ಇದಾಗಿದೆ. ಮತದಾನ ನಡೆಯುವುದಕ್ಕೂ ಕೆಲವೇ ಗಂಟೆಗಳ ಮುನ್ನ ನೂರಾರು ಪಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಮತ್ತು ಕಾರ್ಯಕರ್ತರನ್ನು ಬಂಧನ ಮಾಡಿರುವುದರ ವಿರುದ್ಧವಾಗಿ ನಾವು ಪ್ರತಿಭಟನೆ ನಡೆಸಿದ್ದೆವು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

“ನಮ್ಮ ಕಾರ್ಯಕರ್ತರನ್ನು ಬಂಧನ ಮಾಡಿ ತೃಪ್ತರಾಗದ ಆಡಳಿತವು ನಮ್ಮ ಮತದಾರರಲ್ಲಿ ಭಯ ಹುಟ್ಟಿಸಲು ಮತ್ತು ಮತದಾನ ಮಾಡುವುದನ್ನು ತಡೆಯಲು ಪಿಡಿಪಿಯ ಭದ್ರಕೋಟೆ ಕಾರ್ಡನ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆ” ಎಂದು ಮೆಹಬೂಬಾ ಮುಫ್ತ ಆರೋಪಿಸಿದರು.

“ತನ್ನ ಪಕ್ಷದ ಕಾರ್ಯಕರ್ತರು ಮತ್ತು ಮತಗಟ್ಟೆ ಏಜೆಂಟರನ್ನು ಬಂಧಿಸಿರುವುದನ್ನು ವಿರೋಧಿಸಿ ಪಿಡಿಪಿ ಪ್ರತಿಭಟಿಸಿದೆ. ಆದರೆ ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಪಿಡಿಪಿ ಕಾರ್ಯಕರ್ತರ ಬೃಹತ್ ಗುಂಪು ಮುಖ್ಯ ರಸ್ತೆಯನ್ನು ತಡೆದು ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟಿಸಿದೆ. ಇದು ಕ್ಷೇತ್ರದಲ್ಲಿ ವಿಧಿಸಲಾದ ಸೆಕ್ಷನ್ 144 ಸಿಆರ್‌ಪಿಸಿ ಉಲ್ಲಂಘನೆಯಾಗಿದೆ” ಎಂದು ಎಫ್‌ಐಆರ್ ಹೇಳಿದೆ.

ಚುನಾವಣಾ ಕಾರಣ ಮೇ 23ರಂದು ಸಂಜೆ 6 ರಿಂದ ಮೇ 25 ರ ಸಂಜೆ 6ರವರೆಗೆ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಸೆಕ್ಷನ್‌ ಕಾನೂನುಬಾಹಿರ ಸಭೆ ಮತ್ತು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಮೆರವಣಿಗೆ ಮಾಡುವುದಕ್ಕೆ ನಿಷೇಧ ಹೇರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...