ನೇತಾಜಿ ಸಾವಿನ ಬಗ್ಗೆ ಪೋಸ್ಟ್; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

Date:

ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುವಾಗ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ನೇತಾಜಿ ನಿಧನದ ದಿನಾಂಕವನ್ನು ಕೂಡಾ ಉಲ್ಲೇಖಿಸಿದ್ದರು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಭಾನುವಾರ ಕೋಲ್ಕತ್ತಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸ್ವಯಂ ಘೋಷಿತ ಹಿಂದುತ್ವ ಗುಂಪು ಅಖಿಲ ಭಾರತೀಯ ಹಿಂದೂ ಮಹಾಸಭಾ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ. ಎಫ್‌ಐಆರ್ ದಾಖಲಿಸಿದ ನಂತರ, ದಕ್ಷಿಣ ಕೋಲ್ಕತ್ತಾದ ಎಲ್ಗಿನ್ ರಸ್ತೆಯಲ್ಲಿರುವ ನೇತಾಜಿಯ ಪೂರ್ವಜರ ಮನೆಯ ಬಳಿ ಅಖಿಲ ಭಾರತೀಯ ಹಿಂದೂ ಮಹಾಸಭಾ ಕಾರ್ಯಕರ್ತರು ರಾಹುಲ್ ಗಾಂಧಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಿದರು.

ಇದನ್ನು ಓದಿದ್ದೀರಾ? ಕೊಪ್ಪಳ | ನೇತಾಜಿ ಕನಸಿನ ಭಾರತ ನಿರ್ಮಾಣ ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿ; ಗಂಗರಾಜ್ ಅಳ್ಳಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಅಧ್ಯಕ್ಷ ಚಂದ್ರಚೂಡ್ ಗೋಸ್ವಾಮಿ ಅವರು, “ರಾಹುಲ್ ಗಾಂಧಿಯವರು ನೇತಾಜಿಯನ್ನು ಮೊದಲು ಕಾಂಗ್ರೆಸ್ ತೊರೆಯುವಂತೆ ಮತ್ತು ನಂತರ ದೇಶ ತೊರೆಯುವಂತೆ ಒತ್ತಡ ಹೇರಿದ ಅದೇ ಪರಂಪರೆಯನ್ನು ಹೊಂದಿದ್ದಾರೆ” ಎಂದು ಟೀಕಿಸಿದರು.

“ರಾಹುಲ್ ಗಾಂಧಿ ಮತ್ತು ಅವರ ಪೂರ್ವಜರು ಯಾವಾಗಲೂ ಭಾರತದ ಜನರ ನೆನಪಿನಿಂದ ನೇತಾಜಿಯ ನೆನಪುಗಳನ್ನು ಅಳಿಸಿಹಾಕಲು ಪ್ರಯತ್ನಿಸುತ್ತಾರೆ. ಇದಕ್ಕಾಗಿ ಭಾರತದ ಜನರೇ ಅವರಿಗೆ ಶಿಕ್ಷೆ ನೀಡುತ್ತಾರೆ. ಯಾರಾದರೂ ನೇತಾಜಿಯ ಬಗ್ಗೆ ಮಾಹಿತಿಯನ್ನು ವಿರೂಪಗೊಳಿಸಲು ಪ್ರಯತ್ನಿಸಿದರೆ ನಾವು ಯಾವಾಗಲೂ ಪ್ರತಿಭಟಿಸುತ್ತೇವೆ” ಎಂದು ಗೋಸ್ವಾಮಿ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ನೇತಾಜಿ ದೇಶವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ವಾರದ ಆರಂಭದಲ್ಲಿ ರಾಹುಲ್ ಗಾಂಧಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, 1945ರ ಆಗಸ್ಟ್ 18 ಅನ್ನು ನೇತಾಜಿ ನಿಧನದ ದಿನಾಂಕವಾಗಿ ಉಲ್ಲೇಖಿಸಿದ್ದಾರೆ. ನೇತಾಜಿ ವಿಮಾನದಲ್ಲಿ ಹೋಗುತ್ತಿದ್ದ ವಿಮಾನ ಅಪಘಾತವಾದ ದಿನಾಂಕ ಇದಾಗಿದೆ. ಆದರೆ ನೇತಾಜಿ ಸಾವಿನ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.

ನೇತಾಜಿ ಈ ಅಪಘಾತದ ಬಳಿಕ ಕಣ್ಮರೆಯಾಗಿದ್ದು, ಈ ಕಾರಣದಿಂದಾಗಿ ಯಾವುದೇ ಆಯೋಗವು 1945ರ ಆಗಸ್ಟ್ 18 ಅನ್ನು ಅವರ ಸಾವಿನ ದಿನಾಂಕವಾಗಿ ದೃಢಪಡಿಸಿಲ್ಲ. ಇಂದಿಗೂ ನೇತಾಜಿ ಸಾವಿನ ದಿನಾಂಕ ಮತ್ತು ಭವಿಷ್ಯದ ಬಗ್ಗೆ ಸಾಕಷ್ಟು ನಿಗೂಢತೆ ಉಳಿದಿದೆ. ಆದರೆ ಗೂಗಲ್‌ನಲ್ಲಿ ನಾವು ಹುಡುಕಿದಾಗ ನೇತಾಜಿ ಸಾವಿನ ದಿನಾಂಕವನ್ನು ಆಗಸ್ಟ್ 18, 1945 ಎಂದೇ ಉಲ್ಲೇಖಿಸಲಾಗುತ್ತದೆ. ಜೊತೆಗೆ ಕೆಲವು ಊಹಾಪೋಹಗಳನ್ನು ವಿವರಿಸಲಾಗಿದೆ.

ನೇತಾಜಿ ಸಾವಿನ ಬಗ್ಗೆ ರಾಹುಲ್ ಗಾಂಧಿ ಪೋಸ್ಟ್ ಮಾಡಿದ ಬಳಿಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದೆ. ಕಾಂಗ್ರೆಸ್ ಪಕ್ಷವನ್ನು ತೊರೆದ ನಂತರ ನೇತಾಜಿ ಸ್ವತಃ ಸ್ಥಾಪಿಸಿದ ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಕೂಡಾ ರಾಹುಲ್ ಗಾಂಧಿ ಪೋಸ್ಟ್ ಅನ್ನು ಖಂಡಿಸಿದೆ. ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಎರಡೂ ಪಕ್ಷದ ನಾಯಕರು ರಾಹುಲ್ ಗಾಂಧಿಯವರ ಈ ಪೋಸ್ಟ್ ಬಗ್ಗೆ ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...